ಕುಂದಾಪುರ :ಮೀನುಗಾರರ ಕಾಂಗ್ರೆಸ್ ಸಮಿತಿ ಕುಂದಾಪುರ ಅಧ್ಯಕ್ಷರಾಗಿ ಶೇಖರ ಚಾತ್ರಬೆಟ್ಟು ಆಯ್ಕೆ

0
725

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕುಂದಾಪುರ ಬ್ಲಾಕ್ ಕಾಂಗ್ರೆಸ್ ಮೀನುಗಾರರ ಘಟಕ ಅಧ್ಯಕ್ಷರಾಗಿ ಶೇಖರ ಚಾತ್ರಬೆಟ್ಟು ಆಯ್ಕೆಯಾಗಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾದ್ಯಕ್ಷ ರಾಜೇಶ್ ಜಿ. ಮೆಂಡನ್ ಈ ಆಯ್ಕೆ ಮಾಡಿದ್ದಾರೆ.

2 ಬಾರಿ ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿ, ಉಪಾದ್ಯಕ್ಷರಾಗಿ 3 ಬಾರಿ ಬೀಜಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ ಗಂಗೊಳ್ಳಿ ಪರ್ಸಿಸ್ ಮೀನುಗಾರರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಶೇಖರ ಚಾತ್ರಬೆಟ್ಟು ಪ್ರಸ್ತುತ ಬೀಜಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಕುಂದಾಪುರ ಪಿ ಎಲ್ ಡಿ ಬ್ಯಾಂಕ ನಿರ್ದೇಶಕರಾಗಿದ್ದಾರೆ.

LEAVE A REPLY

Please enter your comment!
Please enter your name here