ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ ವಿಜಯ ಸಂಕಲ್ಪ ಅಭಿಯಾನ ನಡೆಯಿತು.
ಆಬಿಯಾನದಲ್ಲಿ ರಾಜ್ಯ ಉಪಾಧ್ಯಕ್ಷ ನಯನಾ ಗಣೇಶ್ ಪಾಲ್ಗೊಂಡರು. ಮಯ್ಯಾಡಿ, ಬಾಡ, ಸೂರ್ಕುಂದ, ತೊಂಡೆಮಕ್ಕಿ ಬೂತ್ ಗಳಲ್ಲಿ ಸದಸ್ಯತ್ವ ಅಭಿಯಾನ, ಸ್ಟಿಕ್ಕರ್ ಅಳವಡಿಕೆ ಮತ್ತು ಯೋಜನಾ ಪತ್ರಕ ನೀಡಿ ಗೋಡೆ ಬರಹ ಮಾಡಲಾಯಿತು.
ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಕಾರ್ಯದರ್ಶಿ ಮಾಲಿನಿ ಕೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಸುರೇಶ್, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅನುರ ಮೆಂಡನ್ , ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಘವೇಂದ್ರ ಪೂಜಾರಿ, ಶಶಿಪ್ರಭಾ ಕಾಪು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಬೂತ್ ಅಧ್ಯಕ್ಷರು ಉಪಸ್ಥಿತರಿದ್ದರು.

Leave a Reply Cancel reply