ಕುಂದಾಪುರ :ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ – ಬೂತ್ ವಿಜಯ ಸಂಕಲ್ಪ ಅಭಿಯಾನದಲ್ಲಿ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಂಡಳಿ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ಭಾಗಿ

0
500

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಗೋಪಾಡಿ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರದಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಂಡಳಿ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ಅವರು ಬೂತ್ ಅಧ್ಯಕ್ಷರ ಮನೆ ಮತ್ತು ಬೂತ್ ನ ಹತ್ತಾರು ಮನೆಗಳನ್ನು ಸಂಪರ್ಕಿಸಿ ಗೋಡೆ ಬರಹ, ಪೋಸ್ಟರ್, ಪಕ್ಷದ ಸ್ಟಿಕರ್ ಅಳವಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆ ಮತ್ತು ಸಾಧನೆಗಳ ಕುರಿತು ಮಾಹಿತಿ ನೀಡಿ ಬೂತ್ ವಿಜಯ ಸಂಕಲ್ಪ ಅಭಿಯಾನ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ, ಸತೀಶ್ ಪೂಜಾರಿ, ಕಾರ್ಯದರ್ಶಿ ಸುರೇಂದ್ರ ಕಾಂಚನ್, ಶಕ್ತಿಕೇಂದ್ರ ಅಧ್ಯಕ್ಷ ಪ್ರಕಾಶ್ ಕಾಂಚನ್, ಫಲಾನುಭವಿಗಳ ಪ್ರಕೋಷ್ಠ ಸಂಚಾಲಕ ಪ್ರಸನ್ನ, ಗೋಪಾಡಿ ಪಂಚಾಯತ್ ಅಧ್ಯಕ್ಷೆ ಸರೋಜಾ ಪೂಜಾರಿ, ಸದಸ್ಯೆ ನೇತ್ರಾವತಿ ಮಡಿವಾಳ, ಬೂತ್ ಅಧ್ಯಕ್ಷ ಗಿರೀಶ್, ಪ್ರಮುಖರಾದ ಗಣೇಶ್ , ಪ್ರಸನ್ನ, ಶೇಷಗಿರಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here