ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ – ಪೂರ್ವಭಾವಿ ಸಭೆ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆ ಮಾರ್ಚ್ 12ರಂದು ಕುಂದಾಪುರ ಮಂಡಲದಲ್ಲಿ ನಡೆಯಲಿರುವ ಜಿಲ್ಲಾ ಮಹಿಳಾ ಬೃಹತ್ ಸಮಾವೇಶ ಹಾಗೂ ರಾಜ್ಯಾದ್ಯಂತ ಸಂಚರಿಸಲಿರುವ ವಿಜಯ ಸಂಕಲ್ಪ ಯಾತ್ರೆ ಮಾರ್ಚ್ 14 ರಂದು ಕುಂದಾಪುರ ಮಂಡಲಕ್ಕೆ ಪ್ರವೇಶಿಸಿ ಸಾರ್ವಜನಿಕ ಸಭೆ ನಡೆಯಲಿರುವ ಮತ್ತು ಕುಂದಾಪುರ ವಿಧಾನಸಭಾ ವ್ಯಾಪ್ತಿಯಲ್ಲಿ ಸಂಚಲಿಸಲಿರುವ ಸರ್ಕಾರದ ಅಭಿವೃದ್ದಿ ಕುರಿತಾದ ಪ್ರಗತಿ ರಥದ ಕಾರ್ಯಕ್ರಮಗಳ ಕುರಿತಾಗಿ ಪೂರ್ವಭಾವಿ ಸಭೆ ಇಂದು ಪಕ್ಷದ ಕಚೇರಿಯಲ್ಲಿ ನಡೆಯಿತು, ಕಾರ್ಯಕ್ರಮದ ರೂಪುರೇಷೆಗಳ ಕುರಿತಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ರಾಜ್ಯ ಆಹಾರ ನಿಗಮ ಮಂಡಳಿ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಜಿಲ್ಲಾ ಕಾರ್ಯದರ್ಶಿಗಳಾದ ಸದಾನಂದ ಬಳ್ಕೂರು, ಅನಿತಾ ಶ್ರೀಧರ್, ಜಿಲ್ಲಾ ಮೋರ್ಚಾಗಳ ಸಮಾವೇಶ ಸಂಚಾಲಕ ಪ್ರವೀಣ್ ಶೆಟ್ಟಿ ಕುಪ್ಪೆಟ್ಟು, ಸಹಸಂಚಾಲಕ ಶ್ರೀನಿಧಿ ಹೆಗ್ಡೆ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ವೀಣಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಶೆಟ್ಟಿ, ಕುಂದಾಪುರ ಮಂಡಲ ಚುನಾವಣಾ ಉಸ್ತುವಾರಿ ಶ್ಯಾಮಲಾ ಕುಂದರ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ, ಸತೀಶ್ ಪೂಜಾರಿ ಹಾಗೂ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾ, ಪ್ರಕೋಷ್ಠ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಬೂತ್ ಅಧ್ಯಕ್ಷರು, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *

More posts

Exit mobile version