ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆಯ ಜಿಲ್ಲಾ ಮಹಿಳಾ ಮೋರ್ಚಾ ಸಮಾವೇಶವು ಮಾ.12ರಂದು ಮಧ್ಯಾಹ್ನ 3 ಗಂಟೆಗೆ ಕುಂದಾಪುರ ಮಂಡಲ ವ್ಯಾಪ್ತಿಯ ಕೋಟೇಶ್ವರದ ಕುರುಕ್ಷೇತ್ರ ಮೈದಾನದಲ್ಲಿ ನಡೆಯಲಿದ್ದು. ಸದ್ರಿ ಕಾರ್ಯಕ್ರಮದಲ್ಲಿ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್, ರಾಜ್ಯ ವಕ್ತಾರೆ ಮಾಳವಿಕ ಅವಿನಾಶ್, ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಜಿಲ್ಲೆಯ ಶಾಸಕರು, ಸಚಿವರು, ಸಂಸದರು ಉಪಸ್ಥಿತರಿರಲಿದ್ದು, ಸಾವಿರಾರು ಮಹಿಳೆಯರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply Cancel reply