ವಿವಿಧ ಬೇಡಿಕೆ ಆಗ್ರಹಿಸಿ ಕೆ.ಪಿ.ಟಿ.ಸಿ.ಎಲ್ ಹಾಗೂ ಮೆಸ್ಕಾಂನ ಅಧಿಕಾರಿಗಳು ಸೇರಿದಂತೆ ನೌಕರರ ಅನಿರ್ಧಿಷ್ಟಾವಧಿ ಪ್ರತಿಭಟನೆ

0
427

ಕುಂದಾಪುರ ಮಿರರ್ ಸುದ್ದಿ…

ಕೋಟ: ಮೆಸ್ಕಾಂ ಕೋಟ ಉಪವಿಭಾಗ ವ್ಯಾಪ್ತಿಯ ಎಲ್ಲಾ ಕೆ.ಪಿ.ಟಿ.ಸಿ.ಎಲ್ ಹಾಗೂ ಮೆಸ್ಕಾಂನ ಅಧಿಕಾರಿಗಳು ನೌಕರರು ಅನಿರ್ಧಿಷ್ಟಾವಧಿ ಮುಷ್ಕರವನ್ನು ಮಾ.16 ರಂದು ಗುರುವಾರದಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ತನಕ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಬ್ಯಾನರ್ ಮತ್ತು ಭಿತ್ತಿ ಪತ್ರಗಳನ್ನು ಅಂಟಿಸುವ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಪ್ರಾಥಮಿಕ ಸಮಿತಿ ಅಧ್ಯಕ್ಷ ದಿನೇಶ ಪುತ್ರನ್, ಕಾರ್ಯದರ್ಶಿ ಚಂದ್ರ ದೇವಾಡಿಗ,ಶಾಖಾಧಿಕಾರಿಯವರಾದ ಪ್ರಶಾಂತ ಶೆಟ್ಟಿ, ಮಹೇಶ ಕೆ ,ತಾಂತ್ರಿಕ ಸಹಾಯಕ ಶ್ರೀಕಾಂತ್,ಮೇಲ್ವಿಚಾರಕ ಚಂದ್ರ ಕೋಟ,ಉಮೇಶ ಶಿರಿಯಾರ,ಕಂದಾಯ ಶಾಖೆಯ ಗಣೇಶ,ಅಶೋಕ,ಶ್ರೀನಾಥ್ ಮುನುಜ ಹಾಗೂ ಸಿಬ್ಬಂದಿ ವರ್ಗ ಎಲ್ಲಾ ಶಾಖೆಯ ನೌಕರ ವರ್ಗ ಉಪಸ್ಥಿತಿತರಿದ್ದರು.

LEAVE A REPLY

Please enter your comment!
Please enter your name here