ಬೈಂದೂರು : ಬಡಾಕೆರೆ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

0
459

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕೋವಿಡ್ ಸಂಕಷ್ಟದಂತ ಸಂದರ್ಭದಲ್ಲಿಯೂ 3000 ಕೋಟಿ.ರೂ ವಿಶೇಷವಾದ ಅನುದಾನವನ್ನು ಬೈಂದೂರು ವಿಧಾನಸಭೆ ಕ್ಷೇತ್ರಕ್ಕೆ ತರಲಾಗಿದ್ದು ಕ್ಷೇತ್ರವನ್ನು ಸಮಗ್ರವಾದ ರೀತಿಯಲ್ಲಿ ಅಭಿವೃದ್ಧಿಗೊಳಿಸಲಾಗಿದೆ 60,000 ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಿಕೊಡುವಂತ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಲಾಗುತ್ತಿದೆ ಎಂದು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.

ಅವರು 57.72 ಲಕ್ಷ.ರೂ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಬೈಂದೂರು ವಿಧಾನಸಭೆ ಕ್ಷೇತ್ರದ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಾಕೆರೆ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿ ಕೆಲಸಕ್ಕೆ ಬುಧವಾರ ಗುದ್ದಲಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.

ವೇದಮೂರ್ತಿ ಲೋಕೇಶ್ ಅಡಿಗ ಪ್ರಾಂತೀಯ ಧರ್ಮ ಅಧಿಕಾರಿ ಶ್ರೀ ಶಾರದಾ ಪೀಠಂ ಶೃಂಗೇರಿ ಅವರು ಮಾತನಾಡಿ
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಶ್ರಮಿಸಿದ ಶಾಸಕರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಾಡ ಗ್ರಾ.ಪಂ ಉಪಾಧ್ಯಕ್ಷೆ ಪದ್ದು ಪೂಜಾರ್ತಿ, ಸದಸ್ಯ ಶ್ರೀಧರ್ ಬಡಾಕೆರೆ,ಮಾಧವ ಅಡಿಗ,ಶರತ್ ಕುಮಾರ್ ಶೆಟ್ಟಿ ಬೆಳ್ಳಾಡಿ, ಉದ್ಯಮಿ ಅಶೋಕ್ ಶೆಟ್ಟಿ,ಶರತ್ ಶೆಟ್ಟಿ ಉಪ್ಪುಂದ, ಮಹೇಶ್ ಮೆಂಡನ್, ,ಉಮೇಶ್ ಶೆಟ್ಟಿ ಕಲ್ಗದ್ದೆ, ,ಪ್ರಥ್ವಿಶ್ ಕೋಣ್ಕಿ,ನಿತ್ತು ಶೇಟ್ ನಾಡ, ಮಂಜುನಾಥ್ ಆಚಾರ್ಯ, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here