ಕುಂದಾಪುರ ಮಿರರ್ ಸುದ್ದಿ…
ಕೋಟ: ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಮಾಸಿಕ ಸಭೆ ಮಾ.26ಭಾನುವಾರ ಗೊಳಿಗರಡಿಯಲ್ಲಿ ಸಂಘದ ಅಧ್ಯಕ್ಷ ಎಂ.ಸಿ ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭಾಕಲಾಪದ ನಂತರ ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಭಾಭವನಕ್ಕಾಗಿ ಈಗಾಗಲೇ ಖರೀದಿ ಪ್ರಕ್ರೀಯೆ ಪೂರ್ಣಗೊಂಡಿದ್ದು ಸ್ಥಳದ ಮಾಲೀಕ ಸತ್ಯನಾರಾಯಣ ಚಡಗರಿಗೆ ದಾನಿಗಳಿಂದ ಸಂಗ್ರಹಿಸಿದ 1 ಕೋಟಿ ರೂಪಾಯಿ ಹಣವನ್ನು ಸಂಘದ ಅಧ್ಯಕ್ಷ ಎಂ.ಸಿ ಚಂದ್ರಶೇಖರ್ ಹಾಗೂ ಶ್ರೀ ಕ್ಷೇತ್ರ ಗೋಳಿಗರಡಿಯ ಪಾತ್ರಿ ಶಂಕರ ಪೂಜಾರಿಯವರು ಹಸ್ತಾಂತರ ಮಾಡಿದರು.
ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ವಿಠ್ಠಲ ಪೂಜಾರಿ, ಪ್ರಧಾನ ಕಾರ್ಯದರ್ಶಿ ಐರೋಡಿ ವಿಠ್ಠಲ ಪೂಜಾರಿ, ಕೋಶಾಧಿಕಾರಿ ವಿಜಯ ಪೂಜಾರಿ ಐರೋಡಿ, ಹಾಗೂ ಸಂಘದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply Cancel reply