ಬೈಂದೂರು: 35 ಸಾವಿರ ಲೀಡ್ ಗೆ ಗೆಲ್ಲುತ್ತೇನೆ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇನೆ – ಗೋಪಾಲ ಪೂಜಾರಿ

0
823

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗುತ್ತಿರುವುದು ಸಂತೋಷ ತಂದಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜೀ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದ್ದಾರೆ. ಬೈಂದೂರಿನಲ್ಲಿ ಮಂಗಳವಾರ ಯೆಡ್ತೆರೆಯಿಂದ ಬೈಂದೂರಿನ ವರೆಗೆ ಹಮ್ಮಿಕೊಳ್ಳಲಾದ ಕಾಂಗ್ರೆಸ್ ಕಾರ್ಯಕರ್ತರ ಕಾಲ್ನಡಿಗೆಯ ಮೆರವಣಿಗೆ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದರು.

ಯಾರು ಏನು ಬೇಕಾದರೂ ಹೇಳಲಿ. ಬಿಜೆಪಿಯಿಂದ ಜನಸಾಮಾನ್ಯರಿಗೆ ಆಗಿರುವ ಸಮಸ್ಯೆಗಳನ್ನು ಗ್ರಾಮೀಣ ಭಾಗದ ಮಹಿಳೆಯರೂ ಸೇರಿದಂತೆ ಎಲ್ಲಾ ವರ್ಗದ ಜನ ಻ರಿತುಕೊಂಡಿದ್ದಾರೆ. ಹಿಂದೆಂದೂ ಕಾಣದ ಸಂಖ್ಯೆಯಲ್ಲಿ ಇಂದಿನ ಮೆರವಣಿಗೆಯಲ್ಲಿ ಕಾರ್ಯಕರ್ತರು ನನ್ನ ಜೊತೆಗೆ ಹೆಜ್ಜೆ ಹಾಕಿದ್ದಾರೆ. ಕಾಂಗ್ರೆಸ್ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತದೆ ಎಂದ ಅವರು ನನ್ನ ಕ್ಷೇತ್ರ ಮೀನುಗಾರರ ಸಮಸ್ಯೆ ಪರಿಹರಿಸುತ್ತೇನೆ ಎಂದರು.

ಈಗಾಗಲೇ ಒಂದು ಸುತ್ತಿನ ಕ್ಷೇತ್ರ ಬೇಟಿ ಮುಗಿದಿದೆ. ಪಕ್ಷದ ಭರವಸೆಗಳನ್ನು ಕಾರ್ಯಕರ್ತರು ಮನೆಮನೆಗೆ ತಲುಪಿಸುವ ಕೆಲಸ ಮಾಡಿದ್ದಾರೆ. ಈ ಬಾರಿ 35 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲವು ಸಾಧಿಸುತ್ತೇನೆ ಎಂದರು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಮೊದಲಾದವರು ಇದ್ದರು.

LEAVE A REPLY

Please enter your comment!
Please enter your name here