ಕೋಟ – ಆನಂದ್ ಸಿ ಕುಂದರ್ 75ನೇ ಹುಟ್ಟುಹಬ್ಬದ ಹಿನ್ನಲೆ ರಕ್ತದಾನ ಶಿಬಿರ

0
313

ಕುಂದಾಪುರ ಮಿರರ್ ಸುದ್ದಿ…

ಕೋಟ: ಜನತಾ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಆನಂದ್ ಸಿ ಕುಂದರ್ ಅವರ ಹುಟ್ಟುಹಬ್ಬದ ಅಮೃತ ಮಹೋತ್ಸವದ ಸಲುವಾಗಿ ಜನತಾ ಸಿಬ್ಬಂದಿಗಳ ಆಯೋಜನೆಯಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಯ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಭಾನುವಾರ ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ಜನತಾ ಸಂಸ್ಥೆಯ ಮುಖ್ಯಸ್ಥರಾದ ಆನಂದ್ ಸಿ ಕುಂದರ್ ಅವರು ಸಂಸ್ಥೆಯ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿ ಜೀವದ್ರವವಾದ ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ ಆದ್ದರಿಂದ ರಕ್ತದಾನವು ಶ್ರೇಷ್ಠ ದಾನವಾಗಿದೆ ಮತ್ತು ಒಬ್ಬ ರಕ್ತದಾನಿಗೆ ಒಂದು ಬಾರಿ ರಕ್ತದಾನ ಮಾಡುವುದರಿಂದ ಇನ್ನೊಬ್ಬ ವ್ಯಕ್ತಿಯ ಜೀವ ಉಳಿಸಿದ ಪುಣ್ಯ ಬರುತ್ತದೆ ಎಂದರು.

ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಮುಖ್ಯಸ್ಥರಾದ ಜಯದರ್ ಶೆಟ್ಟಿ, ಕೋಶಾಧಿಕಾರಿ ಶಿವರಾಂ ಶೆಟ್ಟಿ ,ಯೂತ್ ರೆಡ್ ಕ್ರಾಸ್‍ನ ಸಂಯೋಜಕರಾದ ಸತ್ಯನಾರಾಯಣ ಪುರಾಣಿಕ್, ಮುಖ್ಯ ಲೆಕ್ಕ ಪರಿಶೋಧಕರಾದ ಅಶ್ವತ್ ಜೆ ಶೆಟ್ಟಿ, ಹಾಗೂ ಜನತಾ ಸಂಸ್ಥೆಯ ವ್ಯವಸ್ಥಾಪಕ ಶ್ರೀನಿವಾಸ್ ಕುಂದರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಸಮಾಜ ಕಾರ್ಯ ವಿಭಾಗದ ರವಿಕಿರಣ್ ಕೋಟ ನಿರೂಪಿಸಿದರು.

LEAVE A REPLY

Please enter your comment!
Please enter your name here