ಕುಂದಾಪುರ :ಬ್ಯಾರೀಸ್ ನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ

0
351

ಕುಂದಾಪುರ ಮಿರರ್ ಸುದ್ದಿ…


ಕುಂದಾಪುರ :ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ – ಕುಂದಾಪುರ ಇದರ ರಾಷ್ಟೀಯ ಸೇವಾ ಯೋಜನಾ ಘಟಕ, ಹಸ್ತ ಚಿತ್ತ ಫೌಂಡೇಶನ್ ಮತ್ತು ಜೆ.ಸಿ.ಐ ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ತರಬೇತುದಾರ ಜೆ.ಎಂ.ಎಫ್ ಪಾಂಡುರಂಗ ಆಳ್ವಿಗದ್ದೆ ಇವರು ಮಾತನಾಡಿ ” ಪ್ರತಿಯೊಬ್ಬ ವ್ಯಕ್ತಿಯಲ್ಲೂ ವ್ಯಕ್ತವಾಗದೆ ಧೀಶಕ್ತಿ ಅಡಕವಾಗಿರುತ್ತದೆ ಅದು ಹೊರಬರುವ ಸಂದರ್ಭಗಳಿಗೆ ದಾರಿಮಾಡಿಕೊಡಬೇಕು ” ಎಂದು ಕೆಲವೊಂದು ಚಟುವಟಿಕೆಗಳೊಂದಿಗೆ ಅರ್ಥಪೂರ್ಣ ತರಬೇತು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ವಹಿಸಿಕೊಂಡಿದ್ದು, ವೇದಿಕೆಯಲ್ಲಿ ಹಸ್ತ ಚಿತ್ತ ಫೌಂಡೇಶನ್ ಅಧ್ಯಕ್ಷರಾದ ಶರ್ಮಿಳ ಎಸ್ ಕಾರಂತ್, ಜೆ.ಸಿ.ಐ ಕುಂದಾಪುರದ ಅಧ್ಯಕ್ಷರಾದ ಸುಧಾಕರ ಕಾಂಚನ್, ಸನ್ಮಾನಿತ ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಮುಸ್ತಾಫ್, ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಅಶ್ವಿನಿ ಶೆಟ್ಟಿ ಉಪಸ್ಥಿತರಿದ್ದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯೋಜಕರಾದ ಪ್ರೋ. ಆಕಾಶ್ ಪ್ರಾಸ್ತಾವಿಕವಾಗಿ ನುಡಿದರು. ರಾಷ್ಟೀಯ ಸೇವಾ ಯೋಜನಾಧಿಕಾರಿ ಸಂದೀಪ ಕುಮಾರ ಶೆಟ್ಟಿ ಸ್ವಾಗತಿಸಿ, ತೃತೀಯ ಬಿ.ಸಿ.ಎ ವಿದ್ಯಾರ್ಥಿನಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here