ಕುಂದಾಪುರ :ಬ್ಯಾರೀಸ್ ನಲ್ಲಿ ಸ್ವಚ್ಛ ಕಡಲತೀರ – ಹಸಿರು ಕೋಡಿ ಅಭಿಯಾನ – 21

0
328

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ ಕುಂದಾಪುರ ಇದರ ಆಶ್ರಯದಲ್ಲಿ ಪ್ರತಿ ತಿಂಗಳ ಕೊನೆಯ ಭಾನುವಾರ ನಡೆಯುವ “ಸ್ವಚ್ಛ ಕಡಲತೀರ – ಹಸಿರು ಕೋಡಿ ಅಭಿಯಾನ-21” ಮೇ 28 ರಂದು ಯಶಸ್ವಿಯಾಗಿ ಜರುಗಿತು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಪರಿಸರ ಪ್ರೇಮಿ ಸಂಚಾಲಕರಾದ ಸಯ್ಯದ್ ಮೊಹಮ್ಮದ್ ಬ್ಯಾರಿ ಇವರು ಈ ಅರ್ಥಪೂರ್ಣ ಅಭಿಯಾನವನ್ನುದ್ದೇಶಿಸಿ “ಮಾನವ ಜನ್ಮ ದೊಡ್ಡದು, ಮೋಕ್ಷವೆಂಬುದು ದೇವಾಲಯ, ಮಸೀದಿ, ಚರ್ಚ್ ಗಳಲ್ಲಿ ದೊರಕಲಾಗದು , ನಾವು ಮಾಡುವ ಇಂತಹ ಸಮಾಜಮುಖಿ ಕಾರ್ಯಕ್ರಮಗಳಿಂದ ನಿಜವಾದ ನೆಮ್ಮದಿ ಮೋಕ್ಷ ಪ್ರಾಪ್ತವಾಗುವುದು” ಎಂದು ನುಡಿಯುವುದರೊಂದಿಗೆ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಈ ಸಮಾಜಮುಖಿ ಕಾರ್ಯದಲ್ಲಿ ನಿರಂತರ ಪಾಲ್ಗೊಳ್ಳುವುದನ್ನು ನೋಡಿ ಹರ್ಷ ವ್ಯಕ್ತಪಡಿಸಿದರು.

ಅಭಿಯಾನದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ ಎಂ ಅಬ್ದುಲ್ ರೆಹಮಾನ್, ಸಂಯೋಜಕರಾದ ಪ್ರೊ. ಆಕಾಶ್, ಸಲಹೆಗಾರರಾದ ಅಬುಶೇಕ್ ಸಾಹೇಬ್, ಕೋಡಿ ಚಕ್ರೇಶ್ವರಿ ದೇವಸ್ಥಾನ ಧರ್ಮದರ್ಶಿ ಗೋಪಾಲ ಪೂಜಾರಿ, ಡಾ. ಆಸೀಫ್ ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here