ಪಂಚವರ್ಣ ಮಹಿಳಾ ಮಂಡಲದಿಂದ ಹದಿಹರೆಯದವರ ಸಮಸ್ಯೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

0
504

ಕುಂದಾಪುರ ಮಿರರ್ ಸುದ್ದಿ…

ಕೋಟ: ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಮಾತೃಸಂಸ್ಥೆ ಕೋಟ ಪಂಚವರ್ಣ ಯುವಕ ಮಂಡಲದ ಸಹಕಾರದೊಂದಿಗೆ ಮೇ.31ರಂದು ಇದೇ ಮೊದಲ ಬಾರಿಗೆ ಮತ್ತೊಂದು ಸಾಮಾಜಿಕ ಕಾರ್ಯಕ್ರಮ ಹದಿಹರೆಯದವರ ಸಮಸ್ಯೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ. 4ನೇ ಮಾಲಿಕೆ ಅರಿವು ನಿಮಗಿರಲಿ ನೆರವು ಶೀರ್ಷಿಕೆಯಡಿ ಕೋಟ ಗ್ರಾ.ಪಂ ಸಭಾಭವನದಲ್ಲಿ ಕೋಟ.ಗ್ರಾ.ಪಂ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಬುಧವಾರ ಅಪರಾಹ್ನ 1.00ಕ್ಕೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಂಪನ್ಮೂಲ ವ್ಯಕ್ತಿಯಾಗಿ ಕೋಟದ ಡಾ.ವಿದ್ಯಾ ಹಂದೆ ಭಾಗವಹಿಸಲಿದ್ದಾರೆ ಎಂದು ಪಂಚವರ್ಣ ಮಹಿಳಾ ಮಂಡಲದ ಆಧ್ಯಕ್ಷೆ ಕಲಾವತಿ ಅಶೋಕ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here