ಬೈಂದೂರು :ಹೆಬ್ಬಾಳ್ಕರ್ ಭೇಟಿ ಮಾಡಿದ ಸಂಸದ ಬಿವೈಆರ್ – ಕಡಲ್ಕೊರೆತದ ಹಾನಿಗಳಿಗಳಿಗೆ ಸ್ಪಂದಿಸಲು ಮನವಿ

0
551

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕ್ಕರ್ ಅವರನ್ನು ಭೇಟಿ ಮಾಡಿದರು. ಈ ಸಂದರ್ಭ ಸಂಸದ ರಾಘವೇಂದ್ರ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನಲ್ಲಿ ಕಡಲಕೊರೆತದಿಂದ ಉಂಟಾದ ಪ್ರದೇಶಗಳಲ್ಲಿ ಹಾನಿಯ ಬಗ್ಗೆ ಚರ್ಚಿಸಿ ಅಧಿಕಾರಿಗಳಿಗೆ ಸೂಚನೆ ನೀಡಿ ಕೂಡಲೇ ಸೂಕ್ತ ಕ್ರಮಕೈಕೊಳ್ಳುವಂತೆ ಹಾಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು. ಇದೇ ಸಂದರ್ಭ ನೂತನವಾಗಿ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಂಸದ ರಾಘವೇಂದ್ರ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here