ಪಾಂಡೇಶ್ವರ – ಬಿಲ್ಲವ ಯುವ ವೇದಿಕೆಯ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ,ನೋಟ್‍ಬುಕ್ ವಿತರಣೆ

0
356

ಕುಂದಾಪುರ ಮಿರರ್ ಸುದ್ದಿ…

ಕೋಟ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಇವರ ವತಿಯಿಂದ ಕಲ್ಪತರು ಸ್ವಸಹಾಯ ಗುಂಪಿನ ಸದಸ್ಯರ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಹಾಗೂ ವಿದ್ಯಾರ್ಥಿ ಪುರಸ್ಕಾರ ಕಾರ್ಯಕ್ರಮ ಪಾಂಡೇಶ್ವರ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ ಯುವ ವೇದಿಕೆ ಅಧ್ಯಕ್ಷ ರವಿಕಿರಣ್ ಪೂಜಾರಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಅಧ್ಯಕ್ಷ ಎಮ್. ಸಿ ಚಂದ್ರಶೇಖರ್, ಪ್ರಧಾನ ಕಾರ್ಯಧರ್ಶಿಗಳಾದ ಐರೋಡಿ ವಿಠಲ್ ಪೂಜಾರಿ,ಪಾಂಡೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಕಲ್ಪನಾ ದಿನಕರ ಪೂಜಾರಿ,ಪಾಂಡೇಶ್ವರ ಗ್ರಾ.ಪಂ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲೀಲಾವತಿ ಗಂಗಾಧರ ಪೂಜಾರಿ. ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಮಹಿಳಾ ಘಟಕದ ಅಧ್ಯಕ್ಷೆ ರತ್ನ ಜೆ ರಾಜ್ , ಸ್ಥಳೀಯ ಉದ್ಯಮಿಗಳಾದ ದಯಾನಂದ ಪೂಜಾರಿ, ಸಂಘದ ಕಾರ್ಯದರ್ಶಿ ವಿಜಯ್ ಪೂಜಾರಿ ಮೂಡಕಟ್ಟು ಹಾಗೂ ವಿಜಯ್ ಬ್ಯಾಂಕ್ ನಿವೃತ್ತ ಅಧಿಕಾರಿ ಪಂಜು ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 265 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಗಣ್ಯರಿಂದ ವಿತರಿಸಲಾಯಿತು. ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 90% ಅಂಕ ಪಡೆದ ಐವರು ವಿದ್ಯಾರ್ಥಿಗಳನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಯುವ ವೇದಿಕೆಯ ಪ್ರಮುಖರಾದ ಸುರೇಶ್ ಪೂಜಾರಿ ಪ್ರಾಸ್ತವನೆ ಸಲ್ಲಿಸಿ ಸ್ವಾಗತಿಸಿದರು. ಉಷಾ ಗಣೇಶ್ ಪೂಜಾರಿ, ಸೀಮಾ ವಿಜಯ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ನೂತನ ಕಾರ್ಯದರ್ಶಿ ವಿಜಯ್ ಪೂಜಾರಿ ವಂದಿಸಿದರು.

LEAVE A REPLY

Please enter your comment!
Please enter your name here