ಕುಂದಾಪುರ ಮಿರರ್ ಸುದ್ದಿ…
ಕೋಟ: ಪ್ರಗತಿಪರ ಕೃಷಿಕ ಯಡ್ತಾಡಿ ಸತೀಶ್ ಕುಮಾರ್ ಶೆಟ್ಟಿಯವರ ಜಮೀನಿನಲ್ಲಿ ಜು.1ರಂದು 15ನೇ ವರ್ಷದ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜರಗಿತು.
ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಧನಂಜಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕೃಷಿಯ ಉಳಿವಿಗೆ ಯಾಂತ್ರೀಕರಣ ಅತೀ ಅಗತ್ಯ. ಈ ಭಾಗದಲ್ಲಿ ಯಾಂತ್ರೀಕ ನಾಟಿಯನ್ನು ಮೊದಲ ಬಾರಿಗೆ ಪರಿಚಯಿಸಿ ಸಾಕಷ್ಟು ಜನರಿಗೆ ಮಾಹಿತಿ ನೀಡಿದ ಸತೀಶ್ ಕುಮಾರ್ ಶೆಟ್ಟಿಯವರ ಸಾಧನೆ ಶ್ಲಾಘನೀಯವಾದದ್ದು ಎಂದರು.
ಬಾರ್ಕೂರು ಸಹಕಾರಿ ಸೇವಾ ಸಂಘದ ಅಧ್ಯಕ್ಷ ಬಾರ್ಕೂರು ಶಾಂತಾರಾಮ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸತೀಶ್ ಶೆಟ್ಟಿಯವರ ಕೃಷಿ ಕಾಯಕಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕೃಷಿ ವಿಜ್ಞಾನಿಗಳಾದ ಡಾ| ಲಕ್ಷಣ್, ಡಾ|ಸುಧೀರ್ ಕಾಮತ್, ಡಾ|ಶಂಕರ್, ಉಡುಪಿ ಜಿಲ್ಲಾ ಕೃಷಿ ಸಹಾಯಕ ನಿರ್ದೇಶಕ ಡಾ|ಮೋಹನ್ ರಾಜ್, ವಿ.ಆರ್.ಡಿ.ಎಫ್. ಮಂಗಳೂರಿನ ಕಾರ್ಯದರ್ಶಿ ರಾಜೇಂದ್ರ ರೈ, ಸಿ.ಇ.ಓ. ಸಚಿನ್ ಹೆಗ್ಡೆ, ರೈತರಾದ ಕೂಡ್ಲಿ ಶ್ರೀನಿವಾಸ ಉಡುಪ, ವಿಮಲಾ ಎಸ್.ಶೆಟ್ಟಿ, ನಿವೃತ್ತ ಪ್ರಾಂಶುಪಾಲ ಬಾರ್ಕೂರು ಸೀತಾರಾಮ ಶೆಟ್ಟಿ, ನಿತ್ಯಾನಂದ ಶೆಟ್ಟಿ ಶಿರಿಯಾರ, ಪ್ರಸಾದ ಶೆಟ್ಟಿ ಕೊಳ್ಕೆಬೈಲು, ಸುಬ್ರಾಯ ಆಚಾರ್ಯ, ಫಿರೋಜ್ ಸಾಹೇಬ್ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆಯೋಜಕ ಯಡ್ತಾಡಿ ಸತೀಶ ಕುಮಾರ ಶೆಟ್ಟಿ ಸ್ವಾಗತಿಸಿ, ಜಂಬೂರು ಕೃಷ್ಣ ಅಡಿಗ ಅತಿಥಿಗಳನ್ನು ಪರಿಚಯಿಸಿದರು. ಸಾಕ್ಷ್ಯ ಹೆಗ್ಡೆ ವಂದಿಸಿದರು.
