ಕುಂದಾಪುರ: ಶ್ರೀಗಂಧದ ಮರ ಕಡಿತ – ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ

0
313

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಕುಂದಾಪುರ ತಾಲೂಕು ಬೆಳ್ಳಾಲ ಗ್ರಾಮದ ಕಾರಿಬ್ಯೆಲು ಎಂಬಲ್ಲಿ ಸಂಜೀವ ಶೆಟ್ಟಿ ಎಂಬವರ ಮನೆಯ ಸಮೀಪ ಅನುಮಾನಾಸ್ಪದ ಪಟ್ಟ ಸ್ಥಳದಲ್ಲಿ ಒಂದು ಶ್ರೀಗಂಧದ ಮರವನ್ನು ಕಡಿದ ತಕ್ಷೀರನ್ನು ಪತ್ತೆಹಚ್ಚಲಾಗಿದೆ.

ಆರೋಪಿಗಳು ಸ್ಥಳೀಯರಾಗಿದ್ದು, ಅವರ ಸುಳಿವು ದೊರಕಿದ್ದು, ಶೀಘ್ರದಲ್ಲಿಯೇ ಅವರನ್ನು ಬಂಧಿಸಲಾಗುವುದು. ಸೊತ್ತುಗಳ ಒಟ್ಟು ಮೌಲ್ಯ ಸುಮಾರು ಎರಡು ಲಕ್ಷದ ವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯು ಡಿಸಿಎಫ್‌ ಉದಯ ಎಂ ನಾಯಕ್ ಅವರ ನಿರ್ದೇಶನದಂತೆ, ಎಸಿಎಫ್‌ ಕ್ಲಿಫರ್ಡ್ ಲೋಬೋ ಅವರ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ಕಿರಣ್ ಬಾಬು ಟಿ, ಉಪ ವಲಯ ಅರಣ್ಯಾಧಿಕಾರಿ ಆನಂದ ಬಳೆಗಾರ, ಶರತ್ ಗಾಣಿಗ, ಗೀತ ಯಾಸಣ್ಣನವರ್, ಗಸ್ತು ಅರಣ್ಯ ಪಾಲಕ ರಾಘವೇಂದ್ರ, ವಿಜಯ ಕೆ, ಅರಣ್ಯ ವೀಕ್ಷಕ ಉದಯ ಮತ್ತು ವಾಹನ ಚಾಲಕ ಅಶೋಕ ಇವರುಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here