ಅಮಾಸೆಬೈಲು: ಹೊಸ ಬಿ.ಎಸ್.ಎನ್.ಎಲ್. ಟವರ್ ಗೆ ಶಾಸಕರರಿಂದ ಗುದ್ದಲಿ ಪೂಜೆ

0
372

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಮಚ್ಚಟ್ಟು ಗ್ರಾಮದ ಹಂಚಿಕಟ್ಟೆಯ ಸಾರ್ವಜನಿಕರ ಹಲವು ದಿನಗಳ ಬೇಡಿಕೆಯಾಗಿದ್ದ ಮೊಬೈಲ್ ನೆಟ್ವರ್ಕ್ ಸಮಸ್ಯೆಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಸ್ಪಂದಿಸಿದ್ದಾರೆ. ಗುರುವಾರ ಶಾಸಕದ್ವಯರು ಅಮಾಸೆಬೈಲು ಮಚ್ಚಟ್ಟು ಗ್ರಾಮದ ಹಂಚಿಕಟ್ಟೆಯಲ್ಲಿ ಬಿಎಸ್ಎನ್ ಟವರ್ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಅಮಾಸೆಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಪಂಚಾಯಿತಿ ಸದಸ್ಯ ಗಣೇಶ್ ಶೆಟ್ಟಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಬೈಂದೂರು ಬಿಜೆಪಿ ಕ್ಷೇತ್ರಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಟವರ್ ಗುತ್ತಿಗೆದಾರ ಅಶೋಕ್ ಕುಂದರ್ ಚಂದ್ರ ನಾಯ್ಕ್ ತೊಂಬಟ್ಟು, ಇಲಾಖೆಯ ಅಧಿಕಾರಿಗಳು ಮತ್ತು ಅಧಿಕಾರಿಗಳು ಹಾಗೂ ಮತ್ತು ನಾಗರಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here