ಕಂಡ್ಲೂರು: ನೂತನ ತರಗತಿ ಕೊಠಡಿ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ

0
750

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಇಲ್ಲಿನ ಕಂಡ್ಲೂರು ರಾಮ್ಸನ್ ಸರಕಾರಿ ಪ್ರೌಢಶಾಲೆಯ ನೂತನ ತರಗತಿ ಕೊಠಡಿ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಬೈಂದೂರು ಶಾಸಕ ಗುರುರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು.

ಕೊಠಡಿ ಉದ್ಘಾಟಿಸಿ, ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದ ಶಾಸಕ ಗುರುರಾಜ್ ಗಂಟಿಹೊಳೆ, “ಶಿಕ್ಷಣಕ್ಕೆ ಅಪಾರ ಶಕ್ತಿ ಇದೆ ಶಿಕ್ಷಕರು ವಿದ್ಯಾರ್ಥಿಗಳು ಊರಿನವರು ಕ್ರಿಯಾಶೀಲರಾದರೆ ಮಾದರಿ ವಿದ್ಯಾರ್ಥಿ ಹಾಗೂ ಮಾದರಿ ಶಾಲೆಯ ನಿರ್ಮಾಣ ಸಾಧ್ಯ” ಎಂದರು.

ಇದೇ ಸಂದರ್ಭ 2022- 23ನೇ ಸಾಲಿನ ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತರನ್ನು ಗುರುತಿಸಿ ಗೌರವಿಸಲಾಯಿತು. ಶಿಕ್ಷಕರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಅಭಿನಂದಿಸಿದರು. ಗುತ್ತಿಗೆದಾರ ಅಶೋಕ್ ಶೆಟ್ಟಿ ಹೊಸಂಗಡಿಯವರನ್ನು ಸಂಸ್ಥೆಯ ಪರವಾಗಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕಂಡ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಪುತ್ರನ್, ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ಚಂದ್ರ ಶೆಟ್ಟಿ, ಶಿವ ಮೊಗವೀರ, ಶಾಮಲಾ ದೇವಾಡಿಗ, ರಾಜಶ್ರೀ ನಾಯಕ್, ಶಾಲಾ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಸಾಮ್ರಾಟ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೇಮಾನಂದ ಶೆಟ್ಟಿ, ಎಸ್.ಡಿ.ಎಂ.ಸಿ. ಸದಸ್ಯರಾದ ರಾಘವೇಂದ್ರ ಶೆಟ್ಟಿ ಕಲ್ಲೋಳಿ ಮನೆ, ಉದಯ ಸೇರಿಗಾರ್, ಗಣೇಶ ಉಡುಪ, ದಿನೇಶ್ ಆಚಾರ್ಯ ಕಂಡ್ಲೂರು, ವ್ಯವಸಾಯ ಸೇವಾ ಸಹಕಾರಿ ಸಂಘ ಕಾವ್ರಾಡಿ ಇದರ ಅಧ್ಯಕ್ಷ ಸದಾನಂದ ಬಳ್ಕೂರು, ಮುಖ್ಯೋಪಾಧ್ಯಾಯ ಸುರೇಶ್ ಭಟ್, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಸುಧಾಕರ್, ರಾಘವೇಂದ್ರ, ರಿತೇಶ್ ಶೆಟ್ಟಿ ಹಳನಾಡು, ಶುಶಾಂತ ನಾಯಕ್, ಶ್ರೀ ಪ್ರಕಾಶ್ ಶೆಟ್ಟಿ ಮುಖ್ಯೋಪಾಧ್ಯಾಯರು ನೇತಾಜಿ ಹಿರಿಯ ಪ್ರಾಥಮಿಕ ಶಾಲೆ ಕಂಡ್ಲೂರು, ಹಳೆ ವಿದ್ಯಾರ್ಥಿಗಳು ಪೋಷಕರು ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here