ಕುಂದಾಪುರ :ಕನ್ನಡ ಭಾಷಣ ಸ್ಪರ್ಧೆಯಲ್ಲಿ ಸಾಧನೆ ಮೆರೆದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು

0
579

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಬಿಎಮ್ಆರ್ ಬಿಲ್ಡರ್ಸ & ಡೆವಲಪರ್ಸ(BMR BUILDERS & DEVELOPERS)ಮಂಗಳೂರು‌ ಇವರ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ “ನನ್ನ ಕಲ್ಪನೆಯ ಭಾರತ” ಈ ವಿಷಯದ ಕುರಿತಾಗಿ ಆಯೋಜಿಸಿದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಉಭಯ ಜಿಲ್ಲೆಗೆ ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವರ್ಷಾ ರವಿಶಂಕರ್ ಚತುರ್ಥ ಸ್ಥಾನ ಪಡೆದಿರುತ್ತಾರೆ. ವಿವಿಧ ಕಾಲೇಜುಗಳಿಂದ 110 ಸ್ಪರ್ಧಿಗಳು ಭಾಗವಹಿಸಿದ ಸ್ಪರ್ಧೆ ಇದಾಗಿತ್ತು. ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here