ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ

0
503

ಕುಂದಾಪುರ ಮಿರರ್ ಸುದ್ದಿ…

ಕೋಟ: ರಾಜ್ಯದ ಕಾರ್ಮಿಕ ಕಲ್ಯಾಣ ಖಾತೆ ಸಚಿವ ಸಂತೋಷ್ ಲಾಡ್ ಸೋಮವಾರ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಚಿವರನ್ನು ಶ್ರೀ ದೇಗುಲದ ಮಾಜಿ ಅಧ್ಯಕ್ಷ ಆನಂದ್ ಸಿ. ಕುಂದರ್ ಸ್ವಾಗತಿಸಿಕೊಂಡರು.

ನಂತರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇಗುಲದ ವತಿಯಿಂದ ಶಾಲು ಹೊದಿಸಿ ಪ್ರಸಾದ ವಿತರಿಸಿ ಗೌರವಿಸಲಾಯಿತು.

ಕಾಂಗ್ರೆಸ್ ಮುಖಂಡರಾದ ಮೊಳಹಳ್ಳಿ ದಿನೇಶ್ ಹೆಗ್ಡೆ, ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷ ಜಿ ತಿಮ್ಮ ಪೂಜಾರಿ, ನಿರ್ದೇಶಕ ಮಹೇಶ್ ಶೆಟ್ಟಿ,ಕಾಂಗ್ರೆಸ್ ಸ್ಥಳೀಯ ಮುಖಂಡ ದೇವೇಂದ್ರ ಗಾಣಿಗ, ಧಾರವಾಡದ ಹೋಟೆಲ್ ಉದ್ಯಮಿ ಅಶೋಕ್ ಶೆಟ್ಟಿ,
ಶ್ರೀ ದೇಗುಲದ ಮಾಜಿ ಟ್ರಸ್ಟಿ ಚಂದ್ರ ಪೂಜಾರಿ, ಅರ್ಚಕರಾದ ಕೃಷ್ಣ ಜೋಗಿ ,ಅಶ್ವಥ್ ಜೋಗಿ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here