ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ: ಕುಂದಾಪುರದ ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನವರು ಆಯೋಜಿಸಿದ ‘ಉಗಮ’ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಸಾಂಸ್ಕೃತಿಕ, ಸಾಹಿತ್ಯಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಕೇದಾರ್ ಮರವಂತೆ ದ್ವಿತೀಯ ಸ್ಥಾನ, ಪೋಟೋ ಕ್ಯಾಪ್ಚರ್ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅಮರನಾಥ್ ದ್ವಿತೀಯ ಸ್ಥಾನ, ಹ್ಯಾಸ್ಟ್ಯಾಗ್ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅನಘಾ ಪ್ರಥಮ ಸ್ಥಾನ, ಸಾಮೂಹಿಕ ಸಾಮೂಹಿಕ ಫಿಲ್ಮಿ ಡ್ಯಾನ್ಸ್ ಸ್ಪರ್ಧೆಯಲ್ಲಿ ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಾದ ಸಮನ್ವಿತ,ಅಲಕಾ, ಹೆಬ್ಬಾರ್, ಇಂಪಾ,ವನಿಧಿ, ಕಾರ್ತಿಕ್, ಲಾಸ್ಯ,ವಂದಿತಾ ತೃತೀಯ ಸ್ಥಾನ ಪಡೆದಿರುತ್ತಾರೆ.
ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
