ಕುಂದಾಪುರ :ಜನರ ಸೇವೆ ಮಾಡಿದರೆ ದೇವರು ಮೆಚ್ಚುತ್ತಾನೆ – ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜಿಮ್

0
448

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಸಮಾಜದ ಜನರ ಸೇವೆ ಮಾಡಿದಾಗ ದೇವರು ನಮ್ಮ ಕಷ್ಟದ ಕಾಲಕ್ಕೆ ಕೈ ಹಿಡಿಯುತ್ತಾನೆ. ನಾವು ಜನರೊಂದಿಗೆ ಬೆರೆಯುವುದರ ಜೊತೆಗೆ ಅವರಿಗೆ ಸಹಾಯ ಮಾಡಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ರ ಆಯೋಗದ ಅಧ್ಯಕ್ಷ ಅಬ್ದುಲ್ ಅಜಿಮ್ ಹೇಳಿದ್ದಾರೆ. ಅವರು ಇಲ್ಲಿನ ಏನ್ ಏನ್ ಒ ಕಮ್ಯೂನಿಟಿ ಸೆಂಟರ್ ಗೆ ಅವರು ಭೇಟಿ ನೀಡಿದ ಸಂದರ್ಭ ಮಾತನಾಡಿದರು.

ಅಲ್ಪಸಂಖ್ಯಾತ ರಿಗೆ ಹಲವಾರು ಸವಲತ್ತು ಗಳು ಕೇಂದ್ರ ಹಾಗು ರಾಜ್ಯ ಸರ್ಕಾರದಿಂದ ಸಿಗುತ್ತದೆ. ಅದಕ್ಕೆ ಪೂರಕವಾಗಿ ನಾವು ಆಯಾ ತಾಲೂಕಿನಲ್ಲಿ ಕಮ್ಯುನಿಟಿ ಸೆಂಟರ್ ಮೂಲಕ ಜನರಿಗೆ ಮಾಹಿತಿ ನೀಡಬೇಕು. ಇದರಿಂದ ಜನರಿಗೆ ಅನುಕೂಲ ವಾಗುತ್ತದೆ ಎಂದು ಹೇಳಿದರು. ಸೇವೆಯಿಂದ ನಮಗೆ ತೃಪ್ತಿ ಸಿಗುತ್ತದೆ. ಆಗ ದೇವರು ಸಹ ನಮಗೆ ನಮ್ಮ ಕಷ್ಟದ ಸಂದರ್ಭದಲ್ಲಿ ಇನ್ನೊಬ್ಬರ ಮೂಲಕ ಸಹಾಯ ಮಾಡುತ್ತಾನೆ ಎಂದರು.

ಏನ್ ಏನ್ ಒ ಕಮ್ಯುನಿಟಿ ಸೆಂಟರ್ ಅಯುಷ್ಮಾನ್ ಕಾರ್ಡ್ ಶಿಕ್ಷಣದಲ್ಲಿ ವಂಚಿತರಾ ದವರನ್ನು ಮತ್ತೆ ಕರೆದು ಶಿಕ್ಷಣ ನೀಡುವಲ್ಲಿ ಸಹಕಾರ ಮಾಡಿದೆ. ಸರ್ಕಾರಿ ಉದ್ಯೋಗ ಆರೋಗ್ಯ ತಪಾಸಣಾ ಕಾರ್ಯಕ್ರಮ ಸ್ಕೋಲರ್ಷಿಪ್ ಮಾಡುವಲ್ಲಿ ಸಹಕಾರ ಹೀಗೆ ಹತ್ತು ಹಲವು ಕಾರ್ಯಕ್ರಮ ಮಾಡುದರ ಮೂಲಕ ಈ ಸಂಸ್ಥೆ ಜನರಿಗೆ ಹತ್ತಿರವಾಗಿದೆ. ಈ ಸಂಸ್ಥೆಗೆ ನನ್ನಿಂದ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.

ಈ ಸಂದರ್ಭ ಉಡುಪಿ ಜಿಲ್ಲಾ ಅಧ್ಯಕ್ಷ ಮುಸ್ತಾಕ್ ಅಹ್ಮದ್, ಕೇಂದ್ರ ಸಮಿತಿಯ ಸಂಘಟನ ಕಾರ್ಯದರ್ಶಿ ಹುಸೇನ್ ಹೈಕಾಡಿ. ಗೌರವ ಅಧ್ಯಕ್ಷ ಮೊಹಮ್ಮದ್ ರಫೀಕ್ ಗಂಗೊಳ್ಳಿ. ಟ್ರಸ್ಟ್ ಸದ್ಯಸ್ಯರಾದ ಪಿರ್ ಸಾಹೇಬ್ ಉಡುಪಿ. ಮಾಜಿ ಉಪಾಧ್ಯಕ್ಷ ರಾದ ಎಮ್ ಪಿ ಮೊಹಿದಿನಬ್ಬ ಕಾಪು, ಉಪಾಧ್ಯಕ್ಷ ಅಬು ಮೊಹಮ್ಮದ್ ಕುಂದಾಪುರ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಝಹಿರ್ ಅಹ್ಮದ್, ಜಿಲ್ಲಾ ಸದ್ಯಸ್ಯರಾದ ಶಾಬಾನ್ ಹಂಗಳೂರ್, ನಿಹಾರ್ ಅಹ್ಮದ್ ಕುಂದಾಪುರ, ಅಬ್ದುಲ್ ಖಾದರ್ ಮೂಡ್ ಗೋಪಾಡಿ, ಮೊಹಮ್ಮದ್ ಗುಲ್ವಾಡಿ, ಉಸ್ಮಾನ್ ಪಳ್ಳಿ, ಅಕ್ರಮ್ ಉಡುಪಿ, ಏನ್ ಏನ್ ಒ ಕಮ್ಯೂನಿಟಿ ಸೆಂಟರ್ ನ ಉಪಾಧ್ಯಕ್ಷ ಜಮಾಲ್ ಗುಲ್ವಾಡಿ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here