ಕುಂದಾಪುರ: ರಸಪ್ರಶ್ನೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0
535

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಭಗವದ್ಗೀತಾ ಅಭಿಯಾನ ಅಂಗವಾಗಿ ಕುಂದಾಪುರದಲ್ಲಿ ಜರುಗಿದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಮ್ಸನ್ ಸರಕಾರಿ ಪ್ರೌಢಶಾಲೆ, ಕಂಡ್ಲೂರು ಇಲ್ಲಿನ 9ನೇ ತರಗತಿಯ ಸ್ವಸ್ತಿಕ್ ಮತ್ತು ಸಾತ್ವಿಕ್ ಸಹೋದರರು ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅಲ್ಲದೇ ಡಿಸೆಂಬರ್ 23ರಂದು ಬೆಳಗಾವಿಯಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸರ್ಕಾರೀ ಶಾಲೆಯ ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಶಾಲಾಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರು, ಅಧ್ಯಕ್ಷರು, ಹಾಗೂ ವಿದ್ಯಾರ್ಥಿ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here