ಕುಂದಾಪುರ ಮಿರರ್ ಸುದ್ದಿ…
ಕೋಟ: ಇಲ್ಲಿನ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ತುಲಾಭಾರ ಸೇವೆ ಕಾರ್ಯಕ್ರಮಗಳು ಗುರುವಾರ ಶ್ರೀ ಕ್ಷೇತ್ರದಲ್ಲಿ ನಡೆದವು.
ಇಲ್ಲಿನ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮ ಬುಧವಾರ ಹಾಗೂ ಗುರುವಾರ ಸಂಪನ್ನಗೊಂಡಿತು.
ಬುಧವಾರ ರಾತ್ರಿ ಹಾಲಿಟ್ಟು ಸೇವೆ, ಗೆಂಡಸೇವೆ ಕಾರ್ಯಕ್ರಮಗಳು ಭಕ್ತ ಸಮುದಾಯದ ಹರಕೆಯೊಂದಿಗೆ ಪೂರ್ಣಗೊಂಡಿತು.
ಸಾವಿರಾರು ಭಕ್ತರು ಗೆಂಡಸೇವೆ,ಮಹಾ ಅನ್ನಸಂತಪರ್ಣೆಯಲ್ಲಿ ಭಾಗಿಯಾದರು.
ಗುರುವಾರ ಪೂರ್ವಾಹ್ನ ಢಕ್ಕೆ ಬಲಿ, ತುಲಾಭಾರ ಸೇವೆ , ಮಹಾಅನ್ನಪ್ರಸಾದ ವಿತರಣೆ ನಡೆಯಿತು.
ಶ್ರೀ ದೇಗುಲದ ಆಡಳಿತಾಧಿಕಾರಿ, ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ಆಡಳಿತ ಮಂಡಳಿಯ ಪೂರ್ವಾಧ್ಯಕ್ಷ ಆನಂದ್ ಸಿ ಕುಂದರ್ ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಟ್ರಸ್ಟಿ ಸದಸ್ಯರು,ಅರ್ಚಕ ಪ್ರತಿನಿಧಿಗಳು ಮತ್ತಿತರರು ಇದ್ದರು.

Leave a Reply Cancel reply