ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಗದೇವರ ಪ್ರತಿಷ್ಠೆ.

ಕುಂದಾಪುರ ಮಿರರ್ ಸುದ್ದಿ…

ಕಜ್ಕೆ : ಶ್ರೀ ವಿಶ್ವಕರ್ಮ ಜಗದ್ಗುರು ಪೀಠ ಅರೇಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಕಜ್ಕೆ ಶಾಖಾ ಮಠದ ಶ್ರೀ ಶ್ರೀ ಅನ್ನಪೂರ್ಣೇಶ್ವರಿ, ಶ್ರೀ ಗಣಪತಿ ಮತ್ತು ಶ್ರೀಆದಿ ಶಂಕರಾಚಾರ್ಯರ ಶಿಲಾಮಯ ದೇವಸ್ಥಾನದಲ್ಲಿ ಶ್ರೀ ನಾಗದೇವರ ಪ್ರತಿಷ್ಠೆ ಗುರುವಾರ ನೆರವೇರಿತು.
ಪರಮಪೂಜ್ಯ ಶ್ರೀಶ್ರೀ ಶಿವಸುಜ್ಞಾನತೀರ್ಥ ಮಹಾ ಸ್ವಾಮೀಜಿ ಮಾರ್ಗದರ್ಶನ‌ ನೀಡಿದರು.

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿಯ ಶಿಲಾಮಯ ದೇವಸ್ಥಾನದ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷ ಹೆಬ್ರಿ ಮಠದಬೆಟ್ಟು ರಾಜೇಶ ಆಚಾರ್ಯ ಲೀಲಾವತಿ ಆಚಾರ್ಯ ದಂಪತಿಗಳು ಪೂಜೆ ನೇರವೇರಿಸಿದರು.

ತಂತ್ರತಿಗಳಾದ ವೇದಮೂರ್ತಿ ಉದ್ಯಾವರ ವಿಶ್ವನಾಥ ಪುರೋಹಿತ್‌, ವೇದಮೂರ್ತಿ ಕೇಶವ ಪುರೋಹಿತ್‌ ಮೂಡಬಿದರೆ ನೇತ್ರತ್ವದಲ್ಲಿ ನಾರಾಯಣ ಆಚಾರ್ಯ ಪೂರೋಹಿತ್, ವಿದ್ವಾನ್‌ ಚಂದ್ರಕಾಂತ್‌ ಶರ್ಮಾ ಹೆಬ್ರಿ, ರವೀಂದ್ರ ಪುರೋಹಿತ್‌ ಹೆಬ್ರಿ, ಸೀತಾರಾಮ‌ ಪುರೋಹಿತ್ ಮಿಯ್ಯಾರು ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದರು. ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿಯ ಶಿಲಾಮಯ ದೇವಸ್ಥಾನ ಸಮಿತಿಯ ಗೌರವ ಪ್ರಧಾನ ಮಾರ್ಗದರ್ಶಕ ಕರುಣಾಕರ ಶೆಟ್ಟಿ ಕಜ್ಕೆ, ಸ್ವಾಗತ ಸಮಿತಿಯ ಅಧ್ಯಕ್ಷ ಕಜ್ಕೆ ಕಾಶಿನಾಥ ಶೆಣೈ, ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿಯ ಶಿಲಾಮಯ ದೇವಸ್ಥಾನ ನಿರ್ಮಾಣ ಸಮಿತಿ ಮತ್ತು ಮಹಾ ಕುಂಭಾಭಿಷೇಕ ಸಮಿತಿ, ವಿವಿಧ ಉಪಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಗಣ್ಯರು, ಭಕ್ತಾಧಿಗಳು ಭಾಗಿಯಾದರು.

Comments

Leave a Reply

Your email address will not be published. Required fields are marked *

More posts

Exit mobile version