ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾ ಕಣದಲ್ಲಿ 10 ಮಂದಿ ಅಭ್ಯರ್ಥಿಗಳು

0
442

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಉಡುಪಿ -ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಇಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದ್ದು ಯಾವುದೇ ಒಬ್ಬ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿರುದಿಲ್ಲ. 10 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಇರುತ್ತಾರೆ.

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಕೆ. ಜಯಪ್ರಕಾಶ್ ಹೆಗ್ಡೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿ, ಬಹುಜನ ಸಮಾಜ ಪಾರ್ಟಿಯ ಕೆ.ಟಿ ರಾಧಾಕೃಷ್ಣ, ಜನಹಿತ ಪಕ್ಷದ ಅಭ್ಯರ್ಥಿಯಾದ ಸುಪ್ರೀತ್ ಕುಮಾರ್ ಪೂಜಾರಿ, ಕರುನಾಡ ಸೇವಕರ ಪಕ್ಷದ ಅಭ್ಯರ್ಥಿಯಾದ ಶಬರೀಶ್ ಆರ್, ಕರ್ನಾಟಕ ರಾಷ್ಟç ಸಮಿತಿ ಪಕ್ಷದ ಅಭ್ಯರ್ಥಿಯಾದ ಎಲ್ ರಂಗನಾಥ್ ಗೌಡ, ಪ್ರೌಟಿಸ್ಟ್ ಸರ್ವ ಸಮಾಜ ಪಕ್ಷದ ಅಭ್ಯರ್ಥಿಯಾದ ಎಂ.ಕೆ ದಯಾನಂದ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾದ ಸಚಿನ್ ಬಿ.ಕೆ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಸುಧೀರ್ ಕಾಂಚನ್ ಹಾಗೂ ವಿಜಯಕುಮಾರ್ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು.

LEAVE A REPLY

Please enter your comment!
Please enter your name here