ಬಗ್ವಾಡಿಯಲ್ಲಿ ಏ.14ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ, ಮೊಗವೀರ ಯುವ ಸಂಘಟನೆ ತಿ ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ರಕ್ತನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ಸಹಯೋಗದೊಂದಿಗೆ ಮಹಿಷಾಮರ್ದಿನಿ ಯುವಕ ಮಂಡಲ ರಿ., ಬಗ್ವಾಡಿ ಹಾಗೂ ಬಗ್ವಾಡಿ ಫ್ರೆಂಡ್ಸ್ ಬಗ್ವಾಡಿ ಇವರ ಸಹಭಾಗಿತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏಪ್ರಿಲ್ 14 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ ಬಗ್ವಾಡಿ ಇಲ್ಲಿ ನಡೆಯಲಿದೆ.

ಈ ರಕ್ತದಾನ ಶಿಬಿರದಲ್ಲಿ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವಂತೆ ಮೊಗವೀರ ಯುವ ಸಂಘಟನೆಯ ಹೆಮ್ಮಾಡಿ ಘಟಕದ ಅಧ್ಯಕ್ಷ ದಿನೇಶ ಕಾಂಚನ್ ಬಾಳಿಕೆರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *

More posts

Exit mobile version