ಬೈಂದೂರು :60ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಕೊಟ್ಟ ಚೊಂಬನ್ನು 10 ವರ್ಷದಲ್ಲಿ ಮೋದಿ ಅಕ್ಷಯ ಪಾತ್ರೆ ಮಾಡಿದರು : ಬಿ.ವೈ.ಆರ್

ಮೋದಿಯಿಂದಷ್ಟೇ ದೇಶದ ಅಭಿವೃದ್ದಿ ಸಾಧ್ಯ

ಬೈಂದೂರು: 60 ವರ್ಷ ಗರೀಬಿ ಹಠಾವೋ ಎಂದ ಕಾಂಗ್ರೆಸ್ಸಿಗರು ತಮ್ಮ ಹೆಂಡತಿ ಮಕ್ಕಳ ಬಡತನ ದೂರ ಮಾಡಿದರೇ ಹೊರತು ಜನಸಾಮಾನ್ಯರ ಬಡತನ ದೂರ ಮಾಡಿಲ್ಲ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಮೂಲಕ ಕೇಂದ್ರ ಸರ್ಕಾರ ಬಡವರಿಗೆ ಉಚಿತ ಅಕ್ಕಿ ನೀಡುತ್ತಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು.

ಅವರು ಸೋಮವಾರ ಸಂಜೆ ತಗ್ಗರ್ಸೆ ಗುಡ್ಡಿಯಂಗಡಿಯಲ್ಲಿ ಹಮ್ಮಿಕೊಳ್ಳಲಾದ ಎಸ್.ಟಿ. ಸಮಾವೇಶ ಉದ್ಘಾಟಿಸಿ ಮಾತನಾಡಿರು. 67 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ದೇಶದ ಜನರ ಬಡತನ ದೂರ ಮಾಡಿಲ್ಲ. ಬಡವರ ಮಕ್ಕಳಿಗೆ ವಿದ್ಯಾಭ್ಯಾಸ, ಹೊಟ್ಟೆಗೆ ಹಿಟ್ಟು ನೀಡುವ ಕಾರ್ಯವನ್ನು ಮಾಡಿಲ್ಲ ಎಂದು ಕಿಡಿಕಾರಿದರು.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬಡಕುಟ್ಟು ಜನಾಂಗವನ್ನು ಗುರುತಿಸಿ ವಾಲ್ಮೀಕಿ ಜಯಂತಿ ಮಾಡುವ ಮೂಲಕ ಆ ಸಮುದಾಯಕ್ಕೆ ಗೌರವ ಸಲ್ಲಿಸುವ ಕಾರ್ಯ ಆರಂಭಿಸಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸಿ, ಅಭಿವೃದ್ಧಿಗಾಗಿ ಸಾವಿರಾರೂ ಕೋಟಿ ರೂಪಾಯಿ ಅನುದಾನ ನೀಡಿದರು ಎಂದು ಹೇಳಿದರು.

ಕಾಂಗ್ರೆಸ್‌ನ ಖಾಲಿ ಚೊಂಬನ್ನು ಮೋದಿ ಅಕ್ಷಯ ಪಾತ್ರೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ದೇಶವನ್ನು ಸುದೀರ್ಘ ವರ್ಷ ಆಡಳಿತ ನಡೆಸಿ ದೇಶದ ಜನತೆಗೆ ಖಾಲಿ ಚೊಂಬು ನೀಡಿತ್ತು. ಕಳೆದ ಹತ್ತು ವರ್ಷದ ಹಿಂದೆ ಆಡಳಿತಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿಯವರು ಖಾಲಿ ಚೊಂಬನ್ನು ಅಕ್ಷಯ ಪಾತ್ರೆ ಮಾಡಿದ್ದಾರೆ. ದೇಶದ ಮಹಿಳೆಯರಿಗೆ ಗೌರವ ತಂದುಕೊಡಲು 12 ಕೋಟಿ ಶೌಚಾಲಯ ನಿರ್ಮಿಸಿದ್ದಾರೆ. 10 ಕೋಟಿ ಕುಟುಂಬಕ್ಕೆ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕ ಕಲ್ಪಿಸಿದ್ದಾರೆ. ಬೈಂದೂರು ಸೇರಿದಂತೆ ಕ್ಷೇತ್ರದ 2.61 ಲಕ್ಷ ಜನರಿಗೆ ಆಯುಷ್ಮಾನ್ ಯೋಜನೆಯಡಿ 260 ಕೋಟಿ ರೂಪಾಯಿ ಆಸ್ಪತ್ರೆ ಬಿಲ್‌ಗಳನ್ನು ನರೇಂದ್ರ ಮೋದಿ ಸರ್ಕಾರ ಪಾವತಿಸಿದೆ ಎಂದರು.

ದೇಶದಲ್ಲಿ ಒಟ್ಟು ಪರಿಶಿಷ್ಟ ಜಾತಿ ಹಾಗೂ ಪಂಗಡದ 102 ಸದಸ್ಯರನ್ನು ಬಿಜೆಪಿ ಸಂಸದರನ್ನಾಗಿ ಮಾಡಿದೆ. ಈ ಬಾರಿ ಬಿಜೆಪಿ 400ಕ್ಕೂ ಅಧಿಕ ಕ್ಷೇತ್ರದಲ್ಲಿ ಜಯ ಸಾಧಿಸಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯೆ ಭಾರತೀ ಶೆಟ್ಟಿ, ನಟಿ ಶ್ರುತಿ, ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್, ಮುಖಂಡರಾದ ರಾಮ ನಾಯ್ಕ್ ,ಪ್ರಿಯದರ್ಶಿನಿ ದೇವಾಡಿಗ, ಕೃಷ್ಣಪ್ರಸಾದ್ ಅಡ್ಯಂತಾಯ ಸಹಿತ ಅಪಾರ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿಗರು ಸೇರಿದ್ದರು.

Comments

Leave a Reply

Your email address will not be published. Required fields are marked *

More posts

Exit mobile version