ಕೋಟ ಹಂದೆ ದೇಗುಲದ ಜಾತ್ರಾ ಮಹೋತ್ಸವದ ಸ್ವಚ್ಛತಾ ಕಾರ್ಯ

ಕುಂದಾಪುರ ಮಿರರ್ ಸುದ್ದಿ…

ಕೋಟ: ಇಲ್ಲಿನ ಕೋಟದ ಹಂದೆ ಮಹಾಗಣಪತಿ ಮಹಾವಿಷ್ಣು ದೇಗುಲದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯ ಭಾನುವಾರ ನಡೆಯಿತು.

ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಮಣೂರು ಫ್ರೆಂಡ್ಸ್ ಸಹಯೋಗದೊಂದಿಗೆ 206ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನದ ಅಂಗವಾಗಿ ಶ್ರೀ ದೇಗುಲವನ್ನು ಸ್ವಚ್ಛಗೊಳಿಸಲಾಯಿತು.

ದೇಗುಲದ ಅಧ್ಯಕ್ಷ ಅಮರ್ ಹಂದೆ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು.

ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಮಹಿಳಾಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ, ಹಂದಟ್ಟು ಮಹಿಳಾ ಬಳಗದ ಪುಷ್ಭಾ ಕೆ ಹಂದಟ್ಟು ಮತ್ತಿತರರು ಇದ್ದರು.

Comments

Leave a Reply

Your email address will not be published. Required fields are marked *

More posts

Exit mobile version