ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ತಂಡವು ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟೆಯಲ್ಲಿ ನಡೆದ ಸಂಗೀತ ಸ್ಪರ್ಧೆಗಳಾದ ಚಿತ್ರಗೀತೆಯಲ್ಲಿ ಶ್ರೇಯಾ ಖಾರ್ವಿ ಪ್ರಥಮ, ಜಾನಪದ ಸಮೂಹ ಗೀತೆ ಪ್ರಥಮ ಹಾಗೂ ಪೂಜಾ ಆಚಾರ್ ಭಾಗವತಿಕೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆಯುವ ಮುಖೇನ ಸಮಗ್ರ ಪುರಸ್ಕಾರವನ್ನು ಪಡೆದ ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ದೀಪಿಕಾ ಜಿ. ಅಭಿನಂದಿಸಿದ್ದಾರೆ.

Leave a Reply Cancel reply