ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪಾರಂಪಳ್ಳಿ ನರಸಿಂಹ ಐತಾಳ್

0
540

ಕುಂದಾಪುರ ಮಿರರ್ ಸುದ್ದಿ…

ಕೋಟ: ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪಾರಂಪಳ್ಳಿ ನರಸಿಂಹ ಐತಾಳ್ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಶಾಲೆಯ ಅಧ್ಯಾಪಕರಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ವೃತ್ತಿ ಬದುಕಿನಲ್ಲಿ,ಜೀವನ ಚರಿತ್ರೆ, ಶಿಶು ಸಾಹಿತ್ಯ, ದಾಸ ಸಾಹಿತ್ಯ ಖಂಡ ಕಾವ್ಯ ಮಹಾಕಾವ್ಯ, ಕಿರುಕಾವ್ಯ, ರಂಗ ಸಾಹಿತ್ಯ, ಯಕ್ಷಗಾನ ಪ್ರಸಂಗ, ಕಥಾ ಸಾಹಿತ್ಯ, ಅನುಭವಕಥನ, ಚುಟುಕು, ಕನ್ನಡದಲ್ಲಿ ಪೂಜಾ ವಿಧಾನಗಳು, ಕಿರು ಕಾದಂಬರಿ, ವೈದಿಕ ಸಾಹಿತ್ಯ, ವಿಜ್ಞಾನ ಸಾಹಿತ್ಯ ಚಿಂತನೆಗಳ ಸಂಕಲನ , ಶ್ರೀ ಮಹಾವಿಷ್ಣು ಸುಪ್ರಭಾತ, ಮೊದಲಾದ ವಿವಿಧ ಪ್ರಕಾರಗಳ ಸಾಹಿತ್ಯ ಸೃಷ್ಟಿಯಿಂದ ಸಾಹಿತ್ಯ ಲೋಕದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿರುವ,
ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ , ರಂಗಭೂಮಿಯಲ್ಲಿ ಮಕ್ಕಳಿಗೆ ಮಾರ್ಗದರ್ಶನ ನೀಡುತ್ತಿರುವ ತರಬೇತಿದಾರರಾಗಿ, ಯಕ್ಷಗಾನ ಕಲಾವಿದರಾಗಿ ಅಪ್ಪಟ ಕನ್ನಡಾಭಿಮಾನಿಯಾಗಿ, ನಾಡು ನುಡಿಗೆ ಬಹುಮುಖ ಸೇವೆ ಸಲ್ಲಿಸಿದ್ದಾರೆ.

ಪಾರಂಪಳ್ಳಿ ನರಸಿಂಹ ಐತಾಳ್ ಇದೇ ಜೂನ್ ತಿಂಗಳ 11ನೆಯ ಮಂಗಳವಾರ ಪಾರಂಪಳ್ಳಿಯ ಶ್ರೀ ವಿಷ್ಣುಮೂರ್ತಿ ಸಭಾಭವನದಲ್ಲಿ ನಡೆಯಲಿರುವ ಬ್ರಹ್ಮಾವರ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತ್ಯಿಕ ಕ್ಷೇತ್ರಕ್ಕೆ ಮುನ್ನುಡಿ ಬರೆಯಲಿದ್ದಾರೆ.

ಇವರು ಭಾರತ ಸೇವಾದಳದ ಶಾಖಾನಾಯಕರಾಗಿ, ರಜತ ಪದಕದೊಂದಿಗೆ ಎರಡು ನಕ್ಷತ್ರಗಳ ಗೌರವಕ್ಕೆ ಪಾತ್ರರಾಗಿರುತ್ತಾರೆ. ಸಂಗೀತ ಕ್ಷೇತ್ರದಲ್ಲಿಯೂ ಸಾಧನೆ ಮಾಡಿರುವ ಐತಾಳರು ಘಟ, ಮೃದಂಗ, ಕೊಳಲು ಪಿಟೀಲು ಮೊದಲಾದ ಸಂಗೀತ ವಾದ್ಯಗಳ ಪರಿಜ್ಞಾನ ಹೊಂದಿರುತ್ತಾರೆ. ಭರತನಾಟ್ಯ ಮತ್ತು ಯಕ್ಷಗಾನ ಕಲಾವಿದರಾಗಿಯೂ ಗುರುತಿಸಿಕೊಂಡಿರುವ ಐತಾಳರು ಇಂದಿಗೂ ಪ್ರತಿಫಲಾಪೇಕ್ಷೆ ಇಲ್ಲದೆ ವಿದ್ಯಾರ್ಥಿಗಳಿಗೆ ರಂಗ ಚಟುವಟಿಕೆಗಳಲ್ಲಿ ಮಾರ್ಗದರ್ಶನ ನೀಡುತ್ತಿದ್ದಾರೆ.

LEAVE A REPLY

Please enter your comment!
Please enter your name here