ಕುಂದಾಪುರ :ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ – ಅರುಣ್ ಹೆಗ್ಡೆ

0
466

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಪ್ರತಿವರ್ಷವೂ ವನಮಹೋತ್ಸವ ಆಚರಿಸಿ ಗಿಡಗಳನ್ನು ನೀಡುತ್ತೇವೆ. ಆದರೆ ಅದರ ಸಂರಕ್ಷಣೆ ಕಷ್ಟಸಾಧ್ಯ. ಉತ್ತಮ ಜೀವನಕ್ಕಾಗಿ ಉತ್ತಮ ಪರಿಸರ ಅತ್ಯಗತ್ಯ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಗುತ್ತಿಗೆದಾರರಾದ ಅರುಣ್ ಹೆಗ್ಡೆ ಹೇಳಿದರು.

ಅವರು ಲಿಟ್ಲ್ ಸ್ಟಾರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ ಮತ್ಯಾಡಿ ಜೂನ್ 5 ರಂದು ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಯವರು ಮಾತನಾಡುತ್ತ ಇಂತಹ ಕಾರ್ಯಕ್ರಮಗಳು ನಮ್ಮಲ್ಲಿ ಜಾಗೃತಿಯನ್ನು ಮೂಡಿಸಲು ಹೆಚ್ಚು ಸಹಕಾರಿ ಮತ್ತು ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಗೀತಾನಂದ ಫೌಂಡೇಶನ್ ಮಣೂರು ಕೋಟ ನೀಡಿದ 100 ಗಿಡಗಳನ್ನು ನೆಡಲಾಯಿತು ಮತ್ತು ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಗಿಡಗಳನ್ನು ವಿತರಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಪ್ರದೀಪ್ ರವರು ಸ್ವಾಗತಿಸಿ, ಶಿಕ್ಷಕ ಸಂತೋಷ್ ಕುಮಾರ್ ನಿರೂಪಿಸಿ, ಶಿಕ್ಷಿಕಿ ಪ್ರೇಮ ವಂದಿಸಿದರು.

LEAVE A REPLY

Please enter your comment!
Please enter your name here