ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚರಣೆ

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್(ಶುಭದಾ ಆಂಗ್ಲ ಮಾಧ್ಯಮ ಶಾಲೆ) ಕಿರಿಮಂಜೇಶ್ವರ ಜಂಟಿಯಾಗಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಗಿಡಗಳನ್ನು ನೆಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಅಗತ್ಯತೆಯ ಕುರಿತು ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಜನತಾ ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಉದಯ ನಾಯ್ಕ್ ಬೋಧಕ, ಬೋಧಕೇತರ ವೃಂದದವರು ಜನತಾ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *

More posts

Exit mobile version