ಬೈಂದೂರು: ಗೋವು ಕಳ್ಳತನ, ಬೆದರಿಕೆಗಳ ವಿರುದ್ಧ ಕ್ರಮ ಜರುಗಿಸಲು ನಮೋ ಬಳಗ ಮನವಿ

ಕುಂದಾಪುರ ಮಿರರ್ ಸುದ್ದಿ…

ಬೈಂದೂರು: ಬೈಂದೂರು ತಾಲೂಕಿನ ಶಿರೂರು ಸೇರಿದಂತೆ ವಿವಿಧ ಭಾಗಗಳಲ್ಲಿ ನಿರಂತರವಾಗಿ ಗೋವು ಕಳ್ಳತನ ಹಾಗೂ ದುಷ್ಕರ್ಮಿಗಳಿಂದ ಜೀವ ಬೇದರಿಕೆ ಒಡ್ಡುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಮೋ ಬಳಗ ಬೈಂದೂರು ಬೈಂದೂರು ತಹಶಿಲ್ದಾರರು ಹಾಗೂ ಪೊಲೀಸರಲ್ಲಿ ಮನವಿ ಮಾಡಿದೆ.

ಬೆಳಗಿನ ಜಾವ 4ಗಂಟೆಯ ವೇಳೆಯ ಶಿರೂರು ಪೇಟೆಯ ಮಂಜುನಾಥ ಹೋಟೆಲ್ ಎದುರಿನ ಖಾలి ಜಾಗದಲ್ಲಿ ಮಲಗಿದ್ದ ಗೋವುಗಳನ್ನು ದುಷ್ಕರ್ಮಿಗಳು ಮಹೇಂದ್ರ ಎಸ್.ಯು.ವಿ ವಾಹನದಲ್ಲಿ ತೆರಳಿ ಕದ್ದೊಯ್ದಿದ್ದಾರೆ. ಇದನ್ನು ಪ್ರಶ್ನಿಸಿದ ವ್ಯಕ್ತಿಯೋರ್ವರಿಗೆ ಚಾಕು ತೋರಿಸಿ ಬೆದರಿಕೆಯೊಡ್ಡಿದ್ದಾರೆ. ಒಂದು ವಾರದ ಹಿಂದೆಯೂ ಶಿರೂರು ಮಾರ್ಕೆಟ್ ಅಂಡರ್ ಪಾಸ್ ಬಳಿ ವಾಹನದಲ್ಲಿ ಬಂದು ಗೋವುಗಳನ್ನು ಹೊತ್ತೊಯ್ದಿರುವ ಬಗ್ಗೆ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಕೆಲ ಸಮಯದಿಂದ ಶಿರೂರು, ಬೈಂದೂರು, ಯಡ್ತರೆ, ಬಾಡ ಹಾಗೂ ಸೂರ್ಕುಂದ ಭಾಗಗಳಲ್ಲಿನ ಮನೆಯ ಕೊಟ್ಟಿಗೆಯಲ್ಲಿನ ದನಕರುಗಳ ಕಳವಾಗುತ್ತಿದ್ದು, ಕೃಷಿ ಹಾಗೂ ಹೈನುಗಾರಿಕೆಯನ್ನು ನಂಬಿ ಬದುಕುತ್ತಿರುವ ಕುಟುಂಬಗಳಿಗೆ ಅನ್ಯಾಯವಾಗುತ್ತಿದೆ. ಅಲ್ಲದೇ ದುಷ್ಕರ್ಮಿಗಳು ಘಟನೆಯನ್ನು ತಡೆಯಲು ಬರುವವರಿಗೂ ಬೆದರಿಸುವ ಪ್ರಕರಣಗಳು ನಡೆದಿವೆ. ಹಾಗಾಗಿ ಬೈಂದೂರು ಪೊಲೀಸರು ಹಾಗೂ ತಹಶೀಲ್ದಾರರ ಈ ಬಗ್ಗೆ ಕಾರ್ಯಪ್ರವೃತ್ತರಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಮೋ ಬಳಗ ಆಗ್ರಹಿಸಿದೆ.

Comments

Leave a Reply

Your email address will not be published. Required fields are marked *

More posts

Exit mobile version