ಕೋಟ ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 36ನೇ ಸಾಧಕ ರೈತಕಾಯಕ ಜೀವಿ ಪಾರಂಪಳ್ಳಿ ಪರಿಸರದ ಯಶೋಧ ನಕ್ಷತ್ರಿ

0
520

ಕುಂದಾಪುರ ಮಿರರ್ ಸುದ್ದಿ…

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 36ರ ಸಂಭ್ರಮ, ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಜೂ.22ರ ಶನಿವಾರ ಸಂಜೆ.4.30ಗ ನಡೆಯಲಿದ್ದು ಕೃಷಿ ಮತ್ತು ಹೈನುಗಾರಿಕೆ ಕೃಷಿ ಕಾಯಕದಲ್ಲಿ ವಿಶಿಷ್ಟ ಸಾಧನೆಗೈದ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ಪಾರಂಪಳ್ಳಿ ಹಿರಿಯ ಕೃಷಿ ಸಾಧಕಿ ಯಶೋಧ ನಕ್ಷತ್ರಿ ಇವರನ್ನು ಆಯ್ಕೆಗೊಳಿಸಲಾಗಿದೆ ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಪ್ರಕಟಣೆಯಲ್ಲಿ ತಿಳಿದ್ದಾರೆ.

LEAVE A REPLY

Please enter your comment!
Please enter your name here