ಕುಂದಾಪುರ :ಭರತನಾಟ್ಯ ಪ್ರಾವೇಶಿಕ ಪೂರ್ಣ ವಿಭಾಗದಲ್ಲಿ ಪ್ರಾಪ್ತಿ ಮಡಪ್ಪಾಡಿ ಪ್ರಥಮ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯ ಮಂಡಲ ಮುಂಬೈ ಇದರ 2024-25ರ ಸಾಲಿನ ಭರತನಾಟ್ಯ ಪ್ರಾವೇಶಿಕ ಪೂರ್ಣ ಪರೀಕ್ಷೆಯಲ್ಲಿ ಕುಂದಾಪುರದ ಸಾಧನ ಕಲಾ ಸಂಗಮದ ಭರತನಾಟ್ಯ ವಿದ್ಯಾರ್ಥಿನಿ ಹಾಗೂ ಕುಂದಾಪುರದ ವಿ.ಕೆ.ಆರ್. ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಾಪ್ತಿ ಮಡಪ್ಪಾಡಿ 125ರಲ್ಲಿ 119 ಅಂಕಗಳನ್ನು ಪಡೆದು ಡಿಸ್ಟಿಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.

ಹೊನ್ನಾವರದ ಸೆಂಟರ್ ನಲ್ಲಿ ಪರೀಕ್ಷೆ ಬರೆದಿದ್ದ ಪ್ರಾಪ್ತಿ ಮಡಪ್ಪಾಡಿ, ಪರೀಕ್ಷಾ ಕೇಂದ್ರದಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದು ಮೊದಲಿಗರಾಗಿದ್ದಾರೆ. ಇವರು ಕುಂದಾಪುರದ ಪತ್ರಕರ್ತ ಜಯಶೇಖರ್ ಮಡಪ್ಪಾಡಿ ಹಾಗೂ ಮಧುಸ್ಮಿತಾ ಜಯಶೇಖರ್ ಅವರ ಹಿರಿಯ ಪುತ್ರಿಯಾಗಿದ್ದು, ಉಡುಪಿಯ ಭರತನಾಟ್ಯ ಗುರು, ವಿದುಷಿ. ಲಕ್ಷ್ಮೀ ಗುರುರಾಜ್ ಅವರ ಶಿಷ್ಯೆ ಅರ್ಪಿತಾ ಹೆಗಡೆ ಅವರ ಶಿಷ್ಯೆ.

Comments

Leave a Reply

Your email address will not be published. Required fields are marked *

More posts

Exit mobile version