ಕೋಟ ಅಮೃತೇಶ್ವರೀ ದೇಗುಲದಲ್ಲಿ ದಿನೇಶ್ ಗಾಣಿಗರಿಗೆ ಗೌರವ

0
502

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಜು.26, 27ರಂದು ನೇಪಾಳದಲ್ಲಿ ನಡೆದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಾದ ಕೋಟದ ದಿನೇಶ್ ಗಾಣಿಗ ಇವರಿಗೆ ಕೋಟ ಅಮೃತೇಶ್ವರೀ ದೇಗುಲದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಇದೇ ವೇಳೆ ದೇಗುಲ ವ್ಯವಸ್ಥಾಪಕ ಗಣೇಶ ಹೊಳ್ಳ ಶಾಲು ಹೋದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಕೋಟ ಗ್ರಾ.ಪಂ ಸದಸ್ಯ ಭುಜಂಗ ಗುರಿಕಾರ, ದೇಗುಲದ ಮಾಜಿ ಟ್ರಸ್ಟಿ ಸುಬ್ರಾಯ ಆಚಾರ್, ಪಂಚವರ್ಣ ಯುವಕ ಮಂಡಲದ ಪೂರ್ವಾಧ್ಯಕ್ಷ ಅಜಿತ್ ಆಚಾರ್, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಪಂಚವರ್ಣದ ಉಪಾಧ್ಯಕ್ಷ ದಿನೇಶ ಆಚಾರ್ ಇದ್ದರು.

 

LEAVE A REPLY

Please enter your comment!
Please enter your name here