ಕುಂದಾಪುರ :ಪುರಸಭೆ ವ್ಯಾಪ್ತಿಯ ಬೀದಿ ವ್ಯಾಪರಿಗಳ ತೆರವು – ಪೌರಾಡಳಿತ ಸಚಿವ ರಹಿಂ ಖಾನ್ ರವರನ್ನು ಭೇಟಿ ಮಾಡಿದ ದಿನೇಶ ಹೆಗ್ಡೆ ಮೊಳಹಳ್ಳಿ

0
1196

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆಯವರು ಪೌರಾಡಳಿತ ಸಚಿವ ರಹಿಂ ಖಾನ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ, ಕುಂದಾಪುರದ ಬೀದಿ ವ್ಯಾಪಾರಿಗಳಿಗೆ ಆಗುತ್ತಿರುವ ತೊಂದರೆಗಳ ಕುರಿತು ವಿವರಿಸಿದರು.

ಬೀದಿ ವ್ಯಾಪಾರಿಗಳು ಜೀವನೋಪಾಯ ಕಳೆದುಕೊಳ್ಳದಂತೆ ಅವರಿಗೆ ಬದಲಿ ವ್ಯವಸ್ಥೆ ಕಲ್ಪಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಕಾಂಗ್ರೆಸ್ ನಾಯಕ ಮೊಳಹಳ್ಳಿ ದಿನೇಶ್ ಹೆಗ್ಡೆ ಮನವಿ ಆಲಿಸಿದ ಪೌರಾಡಳಿತ ಸಚಿವ ರಹಿಂ ಖಾನ್ ಕುಂದಾಪುರ ಪುರಸಭಾ ಮುಖ್ಯಾಧಿಕಾರಿ ಆನಂದ ಜೆ ಇವರಿಗೆ ದೂರವಾಣಿ ಕರೆ ಮಾಡಿ ಬೀದಿ ವ್ಯಾಪಾರಿಗಳಿಗೆ ಸಮಸ್ಯೆಯನ್ನು ಅತಿ ಶೀಘ್ರದಲ್ಲಿ ಬಗೆಹರಿಸುವಂತೆ ಹಾಗೂ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿ ಕೊಡುವಂತೆ ಖಡಕ್ ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here