ಕುಂದಾಪುರ: ಕೊರೊನಾ ಹೆಚ್ಚಳ – ಆಸ್ಪತ್ರೆ ವ್ಯವಸ್ಥೆ ಪರಿಶೀಲಿಸಿದ ಜಿಲ್ಲಾಧಿಕಾರಿ

0
1037

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ:
ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಎಲ್ಲಾ ತಯಾರಿಗಳನ್ನು ನಡೆಸಲಾಗಿದೆ. ಪ್ರಕರಣ ಸಂಖ್ಯೆ ಹೆಚ್ಚಾದರೇ ಬೆಡ್ ಗಳ ಕೊರತೆ ನೀಗಿಸಲು ಸರಕಾರಿ ಹಾಸ್ಟೆಲ್ ನಲ್ಲಿ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದರು

ಗುರುವಾರ ನಗರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅವರು ಮಾತನಾಡಿದರು

ಸದ್ಯ ಜನರು ಆತಂಕ ಪಡುವ ಅವಶ್ಯಕತೆ ಇಲ್ಲ. ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ತುರ್ತು ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸನ್ನಧವಾಗಿದೆ. ಸರಕಾರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿದ್ದಾರೆ. ಅಗತ್ಯ ಬಿದ್ದರೇ ಅದನ್ನು ಕೋವಿಡ್ ಕೇರೆ ಸೆಂಟರ್ ಆಗಿ ಪರಿವರ್ತಿಸುತ್ತೇವೆ, ಹೆಚ್ಚುವರಿ ಬೆಡ್ ಗಳನ್ನು ದಾನಿಗಳ ಮೂಲಕ ಪಡೆಯುತ್ತೇವೆ ಎಂದರು

ಈ ಸಂದರ್ಭದಲ್ಲಿ ಉಪ ವಿಭಾಗಧಿಕಾರಿ ಕೆ.ರಾಜು, ತಹಶೀಲ್ದಾರ್ ಕಿರಣ್. ಗೋರಯ್ಯ, ಕಂದಾಯ ಅಧಿಕಾರಿ ದಿನೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here