ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಜು ದೇವಾಡಿಗರಿಗೆ ನುಡಿ ನಮನ

0
702

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರು , ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜು ದೇವಾಡಿಗರು, ಓರ್ವ ಸಜ್ಜನ ರಾಜಕಾರಣಿ ಸಾಮಾಜಿಕ ನ್ಯಾಯಕ್ಕಾಗಿ ದುಡಿದವರು. ರಾಜಕೀಯ ಜೀವನದಲ್ಲಿ ಪ್ರಾಮಾಣಿಕವಾಗಿ, ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾದವರು. ಓರ್ವ ಶಾಸಕನಾಗುವ ಎಲ್ಲಾ ಗುಣಗಳನ್ನು ಹೊಂದಿದವರು. ಅವರ ಅಗಲುವಿಕೆ ಸಮಾಜಕ್ಕೆ ಆದ ನಷ್ಟವೆಂದು , ಅಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ಹಿರಿಯ ಕಾಂಗ್ರೆಸ್ಸಿಗ ಕೆದೂರು ಸದಾನಂದ ಶೆಟ್ಟಿ ಹೇಳಿದರು.

ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ರಾಜು ದೇವಾಡಿಗ ರವರ ಶ್ರದ್ಧಾಂಜಲಿ ಸಭೆಯಲ್ಲಿ ಅವರು ನುಡಿ ನಮನ ಸಲ್ಲಿಸಿದರು.

ನಾಯಕರಾದ ಮೊಳಹಳ್ಳಿ ದಿನೇಶ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಸುಮನ, ಸಾಮಾಜಿಕ ಕಾರ್ಯಕರ್ತ ಗುಲ್ವಾಡಿ ಪ್ರಭಾಕರ ಶೆಟ್ಟಿ ಶ್ರದ್ಧಾಂಜಲಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಮಹಿಳಾ ಬ್ಲಾಕ್ ಅಧ್ಯಕ್ಷ ದೇವಕಿ ಸಣ್ಣಯ್ಯ , ಅನಗಳ್ಳಿ ಪಂಚಾಯತ್ ಅಧ್ಯಕ್ಷೆ ಸವಿತಾ, ಕೆ ಡಿ ಪಿ ಸದಸ್ಯರಾದ ರಮೇಶ ಶೆಟ್ಟಿ, ಪಂಚಾಯತ್ ಸದಸ್ಯರಾದ ವಿಜಯಾದರ್ ಕೆವಿ , ಗೀತಾ, ಪುರಸಭಾ ಸದಸ್ಯರಾದ ಶ್ರೀಧರ್ ಶೇರೀಗಾರ್, ಪ್ರಭಾವತಿ ಶೆಟ್ಟಿ, ಶಶಿ ರಾಜ್ ಪೂಜಾರಿ, ಅಶೋಕ್ ಸುವರ್ಣ, ಸದಾನಂದ ಖಾರ್ವಿ, ಶಶಿಧರ ನಂದಿಬೆಟ್ಟು, ಗ್ಯಾರಂಟಿ ಸಮಿತಿಯ ಸದಸ್ಯರಾದ ಗಣೇಶ್ ವಿ, ಆಶಾ ಕರ್ವಾಲೊ, ಪ್ರಮುಖರಾದ ರೇವತಿ ಶೆಟ್ಟಿ, ರೋಶನ್ ಶೆಟ್ಟಿ, ಸೀಮಾ ಪೂಜಾರಿ, ಅರುಣ್ ಪಟೇಲ್, ಕೇಶವ ಭಟ್, ಸುನಿಲ್ ಪೂಜಾರಿ, ಜೋಸೆಫ್ ರೆಬೆಲ್ಲೊ, ರಿಯಾಜ್ ಕೋಡಿ, ಅಶ್ವತ್ ಕುಮಾರ್,ಕೆ ರಾಧಾ ಶೆಟ್ಟಿಗಾರ್, ವಿವೇಕಾನಂದ, ಜೋಯ್ ರೆಬೆಲ್ಲೊ, ಕಾರ್ತಿಕ್ , ವಿನಯ, ಎಡಾಲ್ಫ್ ಡಿಕೊಸ್ಟಾ , ನಿತಿನ್ ಡಿಸೋಜಾ ಕೋಣಿ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here