ಕೋಟ ಪಂಚವರ್ಣದಿಂದ 297ನೇ ವಾರದ ಬೀಚ್ ಕ್ಲಿನಿಂಗ್ ಅಭಿಯಾನ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಕೋಟತಟ್ಟು ಗ್ರಾಮಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಇವರ ಸಹಯೋಗದೊಂದಿಗೆ ಸತತ 297ನೇ ಭಾನುವಾರ ಪರಿಸರಸ್ನೇಹಿ ಅಭಿಯಾನ ಕೋಟತಟ್ಟು ಪಡುಕರೆ ಬೀಚ್ ಕ್ಲಿನಿಂಗ ಕಾರ್ಯಕ್ರಮ ಆಯೋಜಿಸಿತು. ಬೀಚ್ ತಟದಲ್ಲಿದ್ದ ಸಾಕಷ್ಟು ಪ್ರಮಾಣದ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು.

ಕೋಟತಟ್ಟು ಗ್ರಾಮಪಂಚಾಯತ್ ಎಸ್ ಎಲ್ ಆರ್ ಎಂ ಘಟಕದ ರಂಜನಿ ಮೊಗವೀರ, ಪಂಚವರ್ಣ ಯುವಕ ಮಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಉಪಾಧ್ಯಕ್ಷೆ ಪುಷ್ಭ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *

More posts

Exit mobile version