“ರೈತರೆಡೆಗೆ ನಮ್ಮ ನಡಿಗೆ” – ಹೈನುಗಾರಿಕೆ ಹಾಗೂ ಕೃಷಿ ಕ್ಷೇತದಲ್ಲಿ ಸಾಧನೆಗೈದ ಪಾಂಡೇಶ್ವರ ಜೂಲಿಸ್‍ರ್ವಾಚ್ ಅವರಿಗೆ ಎ.29ರಂದು ಗೌರವ

0
623

ಕುಂದಾಪುರ ಮಿರರ್ ಸುದ್ದಿ…

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಪಂಚವರ್ಣ ಮಹಿಳಾ ಘಟಕ ಇದರ ನೇತ್ರತ್ವದಲ್ಲಿ ರೈತಧ್ವನಿ ಸಂಘ ಕೋಟ, ಗಿಳಿಯಾರು ಯುವಕ ಮಂಡಲ ಗಿಳಿಯಾರು,ಮಣೂರು ಫ್ರೆಂಡ್ಸ್ ಮಣೂರು,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ,ಗೀತಾನಂದ ಫೌಂಡೇಶನ್ ಮಣೂರು,ಗೆಳೆಯರ ಬಳಗ ಕಾರ್ಕಡ ಇವರುಗಳ ಸಹಯೋಗದಲ್ಲಿ 15 ನೇ ಆವೃತಿಯ ತಿಂಗಳ ಸರಣಿ ಕಾರ್ಯಕ್ರಮ ಸಾಧಕ ಕೃಷಿಕನ ಗೌರವಿಸುವ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ

ಎ.29ಶುಕ್ರವಾರ ಸಂಜೆ 4.ಗನಡೆಯಲಿದೆ ಈ ಬಾರಿ ಹೈನುಗಾರಿಕೆ ಹಾಗೂ ಕೃಷಿ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ಪಾಂಡೇಶ್ವರದ ಹಿರಿಯ ಸಾಧಕ ಜೂಲಿಸ್‍ರ್ವಾಚ್ ಇವರನ್ನು ಗೌರವಿಸಲಾಗುತ್ತದೆ ಅಲ್ಲದೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಜಿಲ್ಲಾ ವಿಮಾ ಸಂಯೋಜಕ ರವೀಂದ್ರ ಮೊಗವೀರ ಇವರಿಂದ ಕೃಷಿ ಮಾಹಿತಿ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here