ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸರಕಾರಿ ಫ್ರೌಢಶಾಲೆ, ಹೆಸ್ಕುತ್ತೂರು ಇದರ ಶಾಲಾ ಆಡಿಟೋರಿಯಂ ನಿರ್ಮಾಣಕ್ಕೆ ರೂ.75000.00 ನೆರವು

0
9

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಸರಕಾರಿ ಫ್ರೌಢಶಾಲೆ, ಹೆಸ್ಕುತ್ತೂರು ಇದರ ಶಾಲಾ ಆಡಿಟೋರಿಯಂ ನಿರ್ಮಾಣಕ್ಕೆ ಪೂಜ್ಯ ಡಾ|| ಡಿ.ವೀರೇಂದ್ರ ಹೆಗ್ಗಡೆಯವರು ರೂ.75000.00 ಅನುದಾನವನ್ನು ಮಂಜೂರು ಮಾಡಿದ್ದು, ತಾಲೂಕು ಯೋಜನಾಧಿಕಾರಿ ಸುಧೀರ್‌ ಹಂಗಳೂರುರವರು ಶಾಲಾ ಉಪಶಿಕ್ಷಕರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರಿಗೆ ಹಸ್ತಾಂತರಿಸಿದರು.

ಈ ಬಗ್ಗೆ ಸಂದರ್ಭ ಮಾತನಾಡಿದ ಯೋಜನಾಧಿಕಾರಿಯವರು ಗ್ರಾಮದ ಪ್ರತೀ ಮಕ್ಕಳೂ ಶಾಲಾ ಶಿಕ್ಷಣವನ್ನು ಪಡೆದುಕೊಳ್ಳಬೇಕು. ಉತ್ತಮ ಶಿಕ್ಷಣ ದೊರೆಯಬೇಕಾದರೆ, ಮೂಲಭೂತ ಸೌಕರ್ಯಗಳಿರುವ ಶಾಲೆಯು ಕೂಡ ಗ್ರಾಮಕ್ಕೆ ಅತೀ ಮುಖ್ಯವಾಗಿ ಬೇಕಾಗುತ್ತದೆ. ಪ್ರತೀ ಗ್ರಾಮದಲ್ಲಿಯೂ ಶಿಕ್ಷಣದ ಕ್ರಾಂತಿ ಆಗಬೇಕು. ಈ ನಿಟ್ಟಿನಲ್ಲಿ ಶಾಲೆಗಳ ತರಗತಿ ಕೊಠಡಿ ನಿರ್ಮಾಣಕ್ಕೆ, ಶಾಲಾ ಸಭಾಭವನ ನಿರ್ಮಾಣಕ್ಕೆ, ಶಾಲಾ ಶೌಚಾಲಯ ನಿರ್ಮಾಣಕ್ಕೆ, ಹಲವಾರು ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಅನುದಾನವನ್ನು ಒದಗಿಸಿಕೊಡಲಾಗುತ್ತಿದೆ. ಇಷ್ಟೇ ಅಲ್ಲದೇ ಮಕ್ಕಳು ಸರಿಯಾಗಿ ಕುಳಿತು ಪಾಠವನ್ನು ಕೇಳಲು ಅನುಕೂಲವಾಗುವಂತೆ ಬೆಂಚು ಡೆಸ್ಕ್‌ಗಳ ಒದಗಣೆ, ಶಿಕ್ಷಕರಿಲ್ಲದ ಅಗತ್ಯ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ನೇಮಕಾತಿಯನ್ನ ಕೂಡ ಮಾಡಲಾಗುತ್ತಿದೆ. ಇದರೊಂದಿಗೆ SSLC ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆಗೊಳ್ಳಲು ಸಹಕಾರಿಯಾಗುವಂತೆ ವಾರ್ಷಿಕ 03 ತಿಂಗಳುಗಳ ಕಾಲ ಶಾಲಾ ಎಲ್ಲಾ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್‌ ಕ್ಲಾಸ್‌ನ್ನು ಕೂಡ ಯೋಜನೆಯ ವತಿಯಿಂದ ನೀಡಲಾಗುತ್ತಿದೆ.

ಈವರೆಗೆ ತಾಲೂಕಿನಲ್ಲಿ ವರ್ಷಂದೀಚೆಗೆ ಒಟ್ಟು 48 ಲಕ್ಷದ ಅನುದಾನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒದಗಿಸಿಕೊಡಲಾಗಿದ್ದು, ಇದು ನೆರವು ನೀಡುತ್ತಿರುವ 18 ನೇ ಶಾಲೆಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಶಾಲಾ ಉಪಶಿಕ್ಷಕರಾದ ವೆಂಕಟೇಶ್‌ ಮಂಜು, ದೈಹಿಕ ಶಿಕ್ಷಕರಾದ ಜಯಪ್ರಕಾಶ್‌ ಶೆಟ್ಟಿ, ಶಿಕ್ಷಕರಾದ ಗೋಪಾಲಕೃಷ್ಣ ಸೋಮಯಾಜಿ, ಎಸ್‌ಡಿಎಂಸಿ ಅದ್ಯಕ್ಷ ಪುರುಪೋತ್ತಮ ದೇವಾಡಿಗ ಕೊರ್ಗಿ ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷರಾದ ಪಲ್ಲವಿ, ಮಾಜಿ ಸದಸ್ಯರಾದ ರಾಘವೇಂದ್ರ ಶೆಟ್ಟಿ, ಒಕ್ಕೂಟದ ಅಧ್ಯಕ್ಷ ಅಶೋಕ ಶೆಟ್ಟಿ, ಮೇಲ್ವಿಚಾರಕಿ ಶರ್ಮಿಳಾ ಜಿ, ಸೇವಾಪ್ರತಿನಿಧಿ ಸುಕನ್ಯಾ ಹಾಗೂ ಶಾಲಾ ಶಿಕ್ಷಕವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here