ಕುಂದಾಪುರ ಮಿರರ್ ಸುದ್ದಿ…
ಕೋಟ: ರಾಜ್ಯದ ಪ್ರತಿಷ್ಠಿತ ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಅದರ ಉತ್ಕ್ರಷ್ಟ ಸಾಧನೆಗಾಗಿ ಮತ್ತೊಮ್ಮೆ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಒಲಿದು ಬಂದಿದ್ದು ಕಳೆದ ಆರ್ಥಿಕ ವರ್ಷದ ಪ್ರಗತಿ, ಸಾಲ ನೀಡಿಕೆ, ವಸೂಲಾತಿ ಮತ್ತು ಇತರ ಆರ್ಥಿಕ ಚಟುವಟಿಕೆಗಳನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ಶನಿವಾರ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಮತ್ತು ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಶರತ್ ಕುಮಾರ್ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರವೀಂದ್ರ ಕಾಮತ್ ಮತ್ತು ಸಂಘದ ಮಾಜಿ ಅಧ್ಯಕ್ಷ ತಿಮ್ಮ ಪೂಜಾರಿ ಉಪಸ್ಥಿತರಿದ್ದರು.
