ಕೋಟತಟ್ಟು – ಹಾಡಿ ವಿಷ್ಣುಮೂರ್ತಿ ದೇವಳ ಸ್ವಚ್ಛತಾ ಕಾರ್ಯ

0
361

ಕುಂದಾಪುರ ಮಿರರ್ ಸುದ್ದಿ…

ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಮಣೂರು ಫ್ರೆಂಡ್ಸ್, ಯಕ್ಷಸೌರಭ ಕಲಾರಂಗ ಕೋಟ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಹಂದಟ್ಟು ಮಹಿಳಾ ಬಳಗ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪರಿಸರಸ್ನೇಹಿ ಕಾರ್ಯಕ್ರಮಕ್ಕೆ 137ನೇ ವಾರದ ಸಂಭ್ರಮ ಆ ಪ್ರಯುಕ್ತ ಇಲ್ಲಿನ ಕೋಟತಟ್ಟು ರಾಷ್ಟ್ರೀಯ ಹೆದ್ದಾರಿ ಸಮೀಪ ಚೆಚ್ಚಕೆರೆ ಹಾಡಿ ವಿಷ್ಣುಮೂರ್ತಿ ದೇವಸ್ಥಾನ ಇದರ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ಹಮ್ಮಿಕೊಂಡಿತು.

ಕಾರ್ಯಕ್ರಮವನ್ನು ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್‍ಕುಮಾರ್ ಶೆಟ್ಟಿ ಚಾಲನೆ ನೀಡಿದರು.ದೇವಳದ ಅರ್ಚಕ ಮಹೇಶ್ ಬಾಯರಿ, ಸುರೇಶ್ ಬಾಯರಿ, ವಿವಿಧ ಸಂಘಟನೆಗಳ ಅಧ್ಯಕ್ಷ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here