ಬೈಂದೂರು : ಬೂತ್ ವಿಜಯ ಅಭಿಯಾನ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಚಾಲನೆ

0
433

ಕುಂದಾಪುರ ಮಿರರ್ ಸುದ್ದಿ…

ಬೈಂದೂರು :ಕರ್ನಾಟಕ ರಾಜ್ಯಾದ್ಯಂತ ಜ.2ರಿಂದ-12 ರವರೆಗೆ ನಡೆಯುತ್ತಿರುವ ಬೂತ್ ವಿಜಯ ಅಭಿಯಾನವನ್ನು ಬೈಂದೂರು ಮಂಡಲದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೂತ್ ಗೆಲ್ಲಿಸುವ ಮೂಲಕ ಕ್ಷೇತ್ರ ಗೆಲ್ಲುವ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.

ವೇದಿಕೆಯಲ್ಲಿ ಶಾಸಕರಾದ ಬಿಎಮ್ ಸುಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ ಜಿಲ್ಲಾ ಉಪಾಧ್ಯಕ್ಷರಾದ ಕಿಶೋರ್ ಕುಮಾರ್, ಉಪ್ಪುಂದ ಆನಂದ ಖಾರ್ವಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನ ಕುದ್ರು ಹಾಗೂ ಬೂತ್ ಅಧ್ಯಕ್ಷರಾದ ಗೋಪಾಲ ಪೂಜಾರಿ ಉಪಸ್ಥಿತರಿದ್ದರು.

ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ಧನ್ಯವಾದ ಅರ್ಪಿಸಿದರು

LEAVE A REPLY

Please enter your comment!
Please enter your name here