Category: ಸುದ್ದಿ

  • ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ, ನಾವುಂದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡ ಉದ್ಘಾಟನೆ

    ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ, ನಾವುಂದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡ ಉದ್ಘಾಟನೆ

    ಕುಂದಾಪುರ ಮಿರರ್ ‌ಸುದ್ದಿ…

    ಕುಂದಾಪುರ :ಸಹಕಾರ ಸಂಘಗಳಿಗೆ ಸೇವೆಯೇ ಉಸಿರು ಆದರೂ ಕೂಡಾ ಭವಿಷ್ಯದ ದೃಷ್ಟಿಯಿಂದ ಲಾಭದ ಬಗ್ಗೆಯೂ ಚಿಂತನೆಗಳನ್ನು ಹಾಕಿಕೊಳ್ಳುವುದು ಕೂಡಾ ಅಗತ್ಯ ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿ, ಬೆಂಗಳೂರು ಇದರ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

    ಬೈಂದೂರು ತಾಲೂಕು ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ, ನಾವುಂದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

    ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಕೂಡಾ ಹಲವು ಏಳುಬೀಳುಗಳನ್ನು ಕಂಡು ಇವತ್ತು ಅಭಿವೃದ್ಧಿಯ ಪಥದಲ್ಲಿ ಮುನ್ನೆಡೆಯುತ್ತಿದೆ. ನಮ್ಮ ರಾಜ್ಯದ ಸಹಕಾರ ವ್ಯವಸ್ಥೆಯಲ್ಲಿ ನಮ್ಮ ಜಿಲ್ಲೆಯ ಸಹಕಾರಿಗಳಿಗೆ ವಿಶೇಷ ಸ್ಥಾನವಿದೆ. ಇವತ್ತಿನ ಅಗತ್ಯತೆಗೆ ಅನುಗುಣವಾಗಿ ಹವಾನಿಯಂತ್ರಿತ ಕಟ್ಟಡಗಳ ನಿರ್ಮಾಣ ಮಾಡಿಕೊಂಡು ಉತ್ತಮ ಸೇವೆ ನೀಡುತ್ತಿವೆ. ಸ್ಪರ್ಧಾತ್ಮಕವಾದ ದಿನಗಳಲ್ಲಿ ಪರಿರ್ವನೆಗೆ ಅನುಗುಣವಾಗಿ ನಮ್ಮ ಸಹಕಾರ ಕ್ಷೇತ್ರವೂ ಮುನ್ನಡೆಯುತ್ತಿದೆ ಎಂದ ಅವರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ರೂ 10 ಲಕ್ಷ ನೀಡುವುದಾಗಿ ಘೋಷಿಸಿದರು.

    ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶಾಲೆಗಳಷ್ಟೇ ಸಹಕಾರ ಸಂಘಗಳಿಗೂ ಮಹತ್ವವಿದೆ. ಒಂದು ಗ್ರಾಮದಲ್ಲಿ ಜ್ಞಾನ ನೀಡುವ ಶಾಲೆ ಎಷ್ಟು ಮುಖ್ಯವೋ ಹಾಗೆಯೇ ಪ್ರತಿಯೊಂದು ಗ್ರಾಮದಲ್ಲಿ ವಿಶ್ವಾಸಾರ್ಹ ಹಣಕಾಸು ಸಂಸ್ಥೆಯಾಗಿರುವ ಸಹಕಾರ ಸಂಘಗಳು ಮುಖ್ಯ. ಸಹಕಾರ ವ್ಯವಸ್ಥೆ ಜನರ ವಿಶ್ವಾಸ ಪಡೆದುಕೊಂಡು ಬೆಳೆಯುತ್ತಿದೆ. ಅದಕ್ಕೆ ಪೂರಕವಾಗಿ ದ.ಕಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಛಾಪು ಮೂಡಿಸಿದ್ದಾರೆ ಎಂದರು.

    ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಬಿ.ಎಂ.ಸುಕುಮಾರ ಶೆಟ್ಟಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಂ.ಮಹೇಶ್ ಹೆಗ್ಡೆ,ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಶ್ರೀಮತಿ ಲಾವಣ್ಯ ಕೆ.ಆರ್, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ., ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ನಿ., ಕುಂದಾಪುರ ಇದರ ಅಧ್ಯಕ್ಷರಾದ ಎಚ್.ಹರಿಪ್ರಸಾದ್ ಶೆಟ್ಟಿ, ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಜಯರಾಜ್ ರೈ, ಮೊನಪ್ಪ ಶೆಟ್ಟಿ, ಹರಿಶ್ಚಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

    ಸಂಘದ ಅಧ್ಯಕ್ಷರಾದ ಎಸ್.ರಾಜು ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.

    ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಸಹಕಾರಿ ಸಂವರ್ಧಕ ಪ್ರಶಸ್ತಿ ನೀಡಿ, ಯಕ್ಷಕಿರೀಟ ತೊಡಿಸಿ ಸನ್ಮಾನಿಸಲಾಯಿತು. ಭಾಗವತ ಹೇರಂಜಾಲು ಗೋಪಾಲ ಗಾಣಿಗ ಬಳಗದವರಿಂದ ರಾಜೇಂದ್ರ ಕುಮಾರ್ ಅವರ ಪರಿಚಯವನ್ನು ಯಕ್ಷಗಾನ ಪದ್ಯ, ನೃತ್ಯದ ಮೂಲಕ ಪ್ರಸ್ತುತ ಪಡಿಸಿದರು. ಸಂಘದ ವ್ಯಾಪ್ತಿಯಲ್ಲಿ 25 ವರ್ಷಗಳನ್ನು ಪೂರೈಸಿರುವ ಸ್ವಾತಿ ನವೋದಯ ಸ್ವಸಹಾಯ ಗುಂಪನ್ನು ಅಭಿನಂದಿಸಲಾಯಿತು. ಚೈತನ್ಯ ವಿಮಾ ಯೋಜನೆಯ ಪರಿಹಾರ ಮೊತ್ತವನ್ನು ವಿತರಿಸಲಾಯಿತು. ಮಹೇಶ್ ಆಚಾರ್ಯ ಪ್ರಾರ್ಥನೆ ಮಾಡಿದರು. ನಿರ್ದೇಶಕ ನರಸಿಂಹ ದೇವಾಡಿಗ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

    ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಾಯಕಿ ಗೀತಾ ಬೈಂದೂರು ಬಳಗದವರಿಂದ ಸಂಗೀತ ರಸಮಂಜರಿ, ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ರಿ., ಉಡುಪಿ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ದಿ.ಕಾಳಿಂಗ ನಾವುಡ ವಿರಚಿತ ಯಕ್ಷಗಾನ ಪ್ರಸಂಗ ‘ನಾಗಶ್ರೀ’ ಪ್ರದರ್ಶನಗೊಂಡಿತು.

  • ಕುಂದಾಪುರ :ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ – ವಿದ್ಯಾರ್ಥಿ ಸಂಸತ್ ಚುನಾವಣೆ :ಶಾಲಾ ನಾಯಕನಾಗಿ ವಿಘ್ನೇಶ್ ರಾಜೇಶ್ ಪ್ರಭು, ಉಪನಾಯಕನಾಗಿ ಹರಿದಾಸ್ ಆರ್ ಮಲ್ಯ ಆಯ್ಕೆ

    ಕುಂದಾಪುರ :ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ – ವಿದ್ಯಾರ್ಥಿ ಸಂಸತ್ ಚುನಾವಣೆ :ಶಾಲಾ ನಾಯಕನಾಗಿ ವಿಘ್ನೇಶ್ ರಾಜೇಶ್ ಪ್ರಭು, ಉಪನಾಯಕನಾಗಿ ಹರಿದಾಸ್ ಆರ್ ಮಲ್ಯ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಚುನಾವಣೆಯ ಪರಿಕಲ್ಪನೆ ಮತ್ತು ಜವಾಬ್ದಾರಿಯ ಅರಿವು ಮೂಡಿಸುವ ಉದ್ದೇಶದಿಂದ ಪ್ರಸ್ತುತ ಸಾಲಿನ ವಿದ್ಯಾರ್ಥಿ ನಾಯಕ ಮತ್ತು ಉಪನಾಯಕರ ಸ್ಥಾನಕ್ಕೆ ಚುನಾವಣೆಯನ್ನು ನಡೆಸಲಾಯಿತು. ಸಾರ್ವತ್ರಿಕ ಚುನಾವಣೆಯ ಅರಿವು ಮೂಡಿಸುವ ಸಲುವಾಗಿ ಚುನಾವಣೆಯನ್ನು ಇ.ವಿ.ಎಮ್ ಆಪ್ ಮೂಲಕ ನಡೆಸಲಾಯಿತು.

    ಶಾಲಾ ನಾಯಕನಾಗಿ ವಿಘ್ನೇಶ್ ರಾಜೇಶ್ ಪ್ರಭು 267 ಮತಗಳಿಂದ ಮತ್ತು ಉಪನಾಯಕನಾಗಿ ಹರಿದಾಸ್ ಆರ್ ಮಲ್ಯ 311 ಮತಗಳಿಂದ ಆಯ್ಕೆಯಾಗಿದ್ದು, ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಭೋದಕ – ಭೋದಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

  • ಕುಂದಾಪುರ :ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಸುವರ್ಣ ಸೌಧ ಕಟ್ಟಡ ಉದ್ಘಾಟನೆ

    ಕುಂದಾಪುರ :ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಸುವರ್ಣ ಸೌಧ ಕಟ್ಟಡ ಉದ್ಘಾಟನೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಸಹಕಾರಿ ಸಂಘಗಳು ಜನಸಮಾನ್ಯರಿಗೆ ಉತ್ತಮ ಸೇವೆ ನೀಡುತ್ತಾ ವಿಕಸನಗೊಳ್ಳುತ್ತವೆ. ಗ್ರಾಮಾಂತರ ಪ್ರದೇಶಗಳಲ್ಲಿ ಶಾಖೆ ತೆರೆದು ಸೇವೆ ನೀಡುತ್ತಿವೆ ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿ, ಬೆಂಗಳೂರು ಇದರ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

    ಜೂ 14ರಂದು ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಸುವರ್ಣ ಸೌಧ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

    ಅಮಾಸೆಬೈಲು ಮತ್ತು ರಟ್ಟಾಡಿ ಗ್ರಾಮಗಳ ಕಾರ್ಯವ್ಯಾಪ್ತಿ ಹೊಂದಿರುವ ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘ ಹವಾನಿಯಂತ್ರಿತ ವ್ಯವಸ್ಥೆಯುಳ್ಳ ಸುಸಜ್ಜಿತ ಕಟ್ಟಿಡ ನಿರ್ಮಿಸಿರುವ ಶ್ಲಾಘನಾರ್ಹ. ನಮ್ಮ ಸಂಸ್ಥೆಯ ವತಿಯಿಂದ ರೂ.10 ಲಕ್ಷ ದೇಣಿಗೆ ನೀಡಲಾಗುವುದು ಎಂದು ಅವರು ಹೇಳಿದರು.

    ಆಡಳಿತ ಸಭಾ ಭವನವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಸಹಕಾರಿ ಕ್ಷೇತ್ರ ನಂಬಿಕೆ, ವಿಶ್ವಾಸದ ಮೇಲೆ ಬೆಳೆದು ಬಂದಿದೆ. ದೇಶದ ಅಭಿವೃದ್ಧಿಯಲ್ಲಿ ಸಹಕಾರ ಕ್ಷೇತ್ರವೂ ಒಂದು ತುದಿ ಎನ್ನುವುದು ನಿರ್ವಿವಾದ. ಮೊಳಹಳ್ಳಿ ಶಿವರಾವ್, ಕಾರ್ನಾಡ್ ಸದಾಶಿವ ರಾವ್ ಮುಂತಾದವರು ಸಹಕಾರಕ್ಕೆ ಬದುಕನ್ನು ಅರ್ಪಿಸಿಕೊಂಡವರು. ಸ್ವಾತಂತ್ರ್ಯ ಚಳವಳಿಯ ಬಳಿಕ ಸಹಕಾರ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದನ್ನು ಸ್ಮರಿಸಿಕೊಳ್ಳಬಹುದು ಎಂದರು.

    ನವೀಕೃತ ಸಭಾಭವನವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣಕುಮಾರ ಕೊಡ್ಗಿ ಉದ್ಘಾಟಿಸಿ, ಸರಕಾರವೂ ಕೂಡಾ ವ್ಯವಸಾಯ ಸೇವಾ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡಬೇಕು. ಸರಕಾರ ನುಡಿದಂತೆ ರೈತರಿಗೆ 5 ಲಕ್ಷದ ತನಕ ನಿಬಡ್ಡಿಯಲ್ಲಿ ಸಾಲ, 15 ಲಕ್ಷದ ತನಕ ಶೇ.3 ಬಡ್ಡಿಯಲ್ಲಿ ಸಾಲ ನೀಡಲೇಬೇಕು. ವ್ಯವಸಾಯ ಸೇವಾ ಸಹಕಾರಿ ಸಂಘಗಳಿಗೆ ಬರಬೇಕಾಗಿದ್ದ ಮೊತ್ತ ಪಾವತಿಯಾಗಿಲ್ಲ ಎನ್ನುವ ದೂರು ಸಹ ಇದೆ. ಈ ಬಗ್ಗೆ ಸರಕಾರ ಕೂಡಲೇ ಕ್ರಮ ವಹಿಸಬೇಕು. ಶಾಸಕರುಗಳು ಕೂಡಾ ಈ ಬಗ್ಗೆ ಸರಕಾರದ ಮೇಲೆ ಒತ್ತಡ ತರುತ್ತೇವೆ ಎಂದರು.

    ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸದಾನಂದ ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ನವೋದಯ ಕೊಠಡಿ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಶ್ರೀಮತಿ ಲಾವಣ್ಯ ಕೆ.ಆರ್ ಪಡಿತರ ವಿಭಾಗ ಉದ್ಘಾಟಿಸಿದರು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಂ.ಮಹೇಶ್ ಹೆಗ್ಡೆ, ಎಸ್.ರಾಜು ಪೂಜಾರಿ, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ., ಅಮಾಸೆಬೈಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಕುಲಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

    ಈ ಸಂದರ್ಭದಲ್ಲಿ ಡಾ.ಎಂ.ಎನ್.ರಾಜೇಂದ್ರ ಕುಮಾರ್, ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಕಟ್ಟಡ ರಚನಾ ಸಮಿತಿಯ ಸದಸ್ಯರನ್ನು ಸನ್ಮಾನಿಸಲಾಯಿತು. ವಿವಿಧ ಕೃಷಿಪತ್ತಿನ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಗೌರವಿಸಲಾಯಿತು.

    ಸಂಘದ ಉಪಾಧ್ಯಕ್ಷರಾದ ಶೇಖರ ನಾಯ್ಕ, ಸಂಘದ ನಿರ್ದೇಶಕರಾದ ನಾರಾಯಣ ರಾವ್, ಕೆ.ಮಂಜಯ್ಯ ಶೆಟ್ಟಿ, ನರಸಿಂಹ ಶೆಟ್ಟಿ, ಗೋಪಾಲ ಪೂಜಾರಿ, ದಿನೇಶ್ ಶೆಟ್ಟಿಗಾರ, ಶ್ರೀಮತಿ ಸುಜಯಾ ಹೆಗ್ಡೆ, ಶ್ರೀಮತಿ ರಾಧಿಕಾ, ಅಕ್ಷತ್ ಕುಮಾರ್, ಬಿ.ಪ್ರವೀಣ್ ಕುಮಾರ್, ಬಿ.ಪ್ರವೀಣ್ ಕುಮಾರ್, ರಘುಪತಿ ರಾವ್, ನಾಗರಾಜ ಪೂಜಾರಿ, ವಲಯ ಮೇಲ್ವಿಚಾರಕ ಎ.ಉದಯ ಶೆಟ್ಟಿ ಉಪಸ್ಥಿತರಿದ್ದರು.

    ಸಂಘದ ನಿರ್ದೇಶಕ ಸತೀಶ ಹೆಗಡೆ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಕೃಷ್ಣ ಕುಮಾರ್ ಭಾಗವತ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಾಯಕ ಅಶೋಕ ಸಾರಂಗ ಪ್ರಾರ್ಥನೆ ಮಾಡಿ, ರೈತಗೀತೆ ಹಾಡಿದರು. ನಿರ್ದೇಶಕ ತಿಮ್ಮಪ್ಪ ಪೂಜಾರಿ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

  • ಕುಂದಾಪುರ :ಮಳೆಯಿಂದ ಆಗಬಹುದಾದ ಅನಾಹುತ ತಪ್ಪಿಸಲು ಈಗಿಂದಲೇ ಸಜ್ಜಾಗಿ – ಸಾರ್ವಜನಿಕರ ದೂರು ನಿರ್ಲಕ್ಷ್ಯ ಮಾಡದಂತೆ ಅಧಿಕಾರಿಗಳಿಗೆ ಶಾಸಕ ಗುರುರಾಜ ಗಂಟಿಹೊಳೆ ಸೂಚನೆ

    ಕುಂದಾಪುರ :ಮಳೆಯಿಂದ ಆಗಬಹುದಾದ ಅನಾಹುತ ತಪ್ಪಿಸಲು ಈಗಿಂದಲೇ ಸಜ್ಜಾಗಿ – ಸಾರ್ವಜನಿಕರ ದೂರು ನಿರ್ಲಕ್ಷ್ಯ ಮಾಡದಂತೆ ಅಧಿಕಾರಿಗಳಿಗೆ ಶಾಸಕ ಗುರುರಾಜ ಗಂಟಿಹೊಳೆ ಸೂಚನೆ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು: ಮಳೆಗಾಲದಲ್ಲಿ ಸಂಭವಿಸಬಹುದಾದ ಹಾನಿ ತಡೆಯುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿ ಸಮನ್ವಯದಿಂದ ಕೆಲಸ ಮಾಡಬೇಕು ಮತ್ತು ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಡೆಸಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬಂದರು ನಿಲಕ್ಷ್ಯ ಮಾಡಬಾರದು ಎಂದು ಅಧಿಕಾರಿಗಳಿಗೆ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಸೂಚನೆ ನೀಡಿದರು.

    ಬೈಂದೂರು ತಾಲೂಕು ಪಂಚಾಯತಿ ಕಚೇರಿಯಲ್ಲಿ ಮಳೆಗಾಲ ಪೂರ್ವ ಸಿದ್ಧತೆ ಹಾಗೂ ಮಳೆಗಾಲದ ಪ್ರಾಕೃತಿಕ ವಿಕೋಪ ಮುಂಜಾಗೃತ ಕ್ರಮಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಅಧಿಕಾರಿಗಳಿಗೆ ಕೆಲವು ಸೂಚನೆ ನೀಡಿದರು.

    ಕ್ಷೇತ್ರವಾಪ್ತಿಯ ಅಪಾಯಕಾರಿ ಮರಗಳನ್ನು ಅರಣ್ಯ ಇಲಾಖೆ ಅನುಮತಿ ಪಡೆದು ತಕ್ಷಣವೇ ತೆರವು ಮಾಡಬೇಕು. ಅಪಾಯಕಾರಿ ಮರಗಳಿಂದ ಹಾನಿ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಮೆಸ್ಕಾಂ, ಅರಣ್ಯ ಇಲಾಖೆ ಸಹಿತ ವಿವಿಧ ಇಲಾಖೆಗಳು ಸಮನ್ವಯೊಂದಿಗೆ ಈ ಕಾರ್ಯ ಮಾಡಬೇಕು ಎಂದರು.

    ಮೆಸ್ಕಾಂ ಸಿದ್ಧವಾಗಿಲ್ಲ ಏಕೆ?
    ಮಳೆಗಾಲ ಬೈಂದೂರಿಗೆ ಹೊಸತಲ್ಲ. ಪ್ರತಿ ವರ್ಷವೂ ಬರುತ್ತದೆ. ಆದರೆ, ಮೆಸ್ಕಾಂ ಅಧಿಕಾರಿಗಳು ಮಾತ್ರ ಇದಕ್ಕೆ ಸಿದ್ಧವಾಗಿರುವುದಿಲ್ಲ ಏಕೆ? ಮಳೆಗಾಲಕ್ಕೆ ಬೇಕಾದ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವುದಿಲ್ಲ. ಸಣ್ಣ ಮಳೆಗೂ ಗ್ರಾಮೀಣ ಭಾಗದಲ್ಲಿ ಕರೆಂಟ್ ಹೋದರೆ ಒಂದೆರೆಡು ದಿನ ಬರುವುದಿಲ್ಲ ಎಂಬ ಆರೋಪ ಇದೆ. ಮೆಸ್ಕಾ ಅಧಿಕಾರಿಗಳು ಮಳೆಗಾಲ ಎದುರಿಸಲು ಎಲ್ಲ ರೀತಿಯಲ್ಲಿ ಸನ್ನದ್ಧರಾಗಬೇಕು ಎಂದರು.

    ಪರಿಶೀಲಿಸಿ ವರದಿ ಪಡೆಯಿರಿ
    ಶಾಲಾ ಕಟ್ಟಡ ಸಹಿತ ಯಾವುದೇ ಅಪಾಯಕಾರಿ ಕಟ್ಟಡಗಳು ಇದ್ದರೆ ಅದರ ಮಾಹಿತಿ ಪಡೆಯಬೇಕು. ವಿಶೇಷವಾಗಿ ವಿದ್ಯಾರ್ಥಿಗಳು ಅಪಾಯಕಾರಿ ಕೊಠಡಿಯ ಒಳಗೆ ಪಾಠಕೇಳುವ ಸ್ಥಿತಿ ಇರಬಾರದು. ಈ ಬಗ್ಗೆ ಶಾಲಾ ಮುಖ್ಯ ಶಿಕ್ಷಕರಿಂದ ವರದಿ ಪಡೆದು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

    ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ
    ಡೆಂಗ್ಯೂ, ಮಲೇರಿಯಾ ಸೇರಿದಂತೆ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಎಲ್ಲ ಪಂಚಾಯತಿಗಳ ಪಿಡಿಒಗಳು ಹಾಗೂ ಪಟ್ಟಣ ಪಂಚಾಯತಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಜಾಗೃತಿ, ಅರಿವು ಮೂಡಿಸುವ ಕಾರ್ಯ ಮಾಡಬೇಕು. ಪಿಡಿಒಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.

    ಮೇಲಾಧಿಕಾರಿಗಳ ಗಮನಕ್ಕೆ ತನ್ನಿ
    ನರೇಗಾದಡಿ ಕಳೆದ ಬಾರಿ ಕಾಲುಸಂಕ ನಿರ್ಮಿಸಲು ಅವಕಾಶ ನೀಡಿದ್ದರು. ಈ ವರ್ಷ ಅವಕಾಶ ಏಕೆ ನೀಡಿಲ್ಲ? ಕೇಂದ್ರ ಸರ್ಕಾರ ನಿಯಮ ಬದಲಾವಣೆ ಮಾಡಿಲ್ಲ. ರಾಜ್ಯ ಸರ್ಕಾರ ಯಾಕೆ ಹೀಗೆ ಮಾಡಿದೆ? ಇಲ್ಲಿಯ ಸಮಸ್ಯೆಯ ಗಂಭೀರತೆಯನ್ನು ಮೇಲಾಧಿಕಾರಿಗಳಿಗೆ ಮುಟ್ಟಿಸುವ ಪ್ರಯತ್ನವನ್ನು ನೀವುಗಳು ಮಾಡಬೇಕು. ನನ್ನ ನೆಲೆಯಲ್ಲಿ ಈ ಬಗ್ಗೆ ಯಾವ ರೀತಿಯ ಹೋರಾಟ ಮಾಡಬೇಕೋ ಅದನ್ನು ಮಾಡಿಯೇ ಮಾಡುತ್ತೇನೆ ಎಂದರು.

    ಜಾಗೃತಿ ಮೂಡಿಸಿ
    ಮಳೆಗಾಲದಲ್ಲಿ ದೋಣಿ ದುರಂತ ಸಂಭವಿಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಮೀನುಗಾರಿಗೆ ಲೈಫ್ ಜಾಕೆಟ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಈ ಹಿಂದಿನ ಪ್ರಕರಣಗಳ ಪರಿಹಾರ ಬಾಕಿ ಇದ್ದರೆ ತಕ್ಷಣವೇ ನೀಡಬೇಕು. ಈ ಬಾರಿ ಯಾವುದೇ ಅನಾಹುತ ಆಗದಂತೆ ಜಾಗೃತಿ, ಅರಿವು ಮೂಡಿಸುವ ಜತೆಗೆ ಲೈಫ್ ಜಾಕೆಟ್ ಒದಗಿಸುವ ಕಾರ್ಯ ಮಾಡಬೇಕು ಎಂದರು.

    ಕಂದಾಯ ಸಹಿತ ವಿವಿಧ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

    ಬೈಂದೂರು ತಹಶಿಲ್ದಾರ್ ಶ್ರೀಕಾಂತ್ ಹೆಗ್ಡೆ, ಕುಂದಾಪುರ ತಹಶಿಲ್ದಾರ್ ಶೋಭಾಲಕ್ಷ್ಮೀ, ಬೈಂದೂರು ಹಾಗೂ ಕುಂದಾಪುರ ಕಾರ್ಯನಿರ್ವಹಣಾಧಿಕಾರಿಗಳಾದ ಎನ್. ಭಾರತಿ, ಶಶಿಧರ್, ಬೈಂದೂರು ವೃತ್ತ ನಿರೀಕ್ಷಕರು, ಪಿಡಿಒಗಳು, ಗ್ರಾಮ ಪಂಚಾಯತಿ ಆಡಳಿತಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

  • ಹೆಮ್ಮಾಡಿ :ಕಟ್‍ಬೇಲ್ತೂರು ಶ್ರೀ ಭದ್ರಮಹಾಕಾಳಿಗೆ ನೂತನ ವಿಗ್ರಹ: ರಕ್ತಚಂದನ ಮರ ಹಸ್ತಾಂತರ

    ಹೆಮ್ಮಾಡಿ :ಕಟ್‍ಬೇಲ್ತೂರು ಶ್ರೀ ಭದ್ರಮಹಾಕಾಳಿಗೆ ನೂತನ ವಿಗ್ರಹ: ರಕ್ತಚಂದನ ಮರ ಹಸ್ತಾಂತರ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಕಟ್‍ಬೇಲ್ತೂರು ಶ್ರೀ ಭದ್ರಮಹಾಕಾಳಿ ದೈವಸ್ಥಾನದ ನೂತನ ಶ್ರೀದೇವಿಯ ವಿಗ್ರಹದ ರಚನೆಗೆ ಅಗತ್ಯವಾಗಿರುವ ರಕ್ತಚಂದನ ಮರವನ್ನು ಜೂ.12 ರಂದು ಶಿವಮೊಗ್ಗದಿಂದ ಕೊಲ್ಲೂರು ಮಾರ್ಗವಾಗಿ ಕಟ್‍ಬೇಲ್ತೂರಿಗೆ ವೈಭವದಿಂದ ತರಲಾಯಿತು.

    ಭವ್ಯ ಪುರಾಣ ಇತಿಹಾಸವನ್ನು ಹೊಂದಿರುವ ಕಟ್‍ಬೇಲ್ತೂರು ಭದ್ರಮಹಾಕಾಳಿ ಅಮ್ಮನವರ ದೈವಸ್ಥಾನದಲ್ಲಿ ನಡೆದ ಪ್ರಶ್ನಾಚಿಂತನೆಯಲ್ಲಿ ಮೂಡಿದ ಅಭಿಪ್ರಾಯದಂತೆ ಅಮ್ಮನವರಿಗೆ ರಕ್ತಚಂದನ ಮರದಲ್ಲಿ ನೂತನ ವಿಗ್ರಹ ನಿರ್ಮಾಣ ಮಾಡಿ ಪ್ರತಿಷ್ಠಾಪನೆ ಮಾಡಲು ನಿಶ್ಚಯ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಅನುಮತಿಯನ್ನು ಕ್ರಮಬದ್ಧವಾಗಿ ಪಡೆದುಕೊಂಡು ಶಿವಮೊಗ್ಗದ ಅರಣ್ಯ ಇಲಾಖೆಯ ಡಿಪೆÇೀದಲ್ಲಿ ಇರಿಸಲಾದ ರಕ್ತ ಚಂದನ ಮರವನ್ನು ಜೂ.12 ರಂದು ದೈವಸ್ಥಾನಕ್ಕೆ ತಂದು ವಿಗ್ರಹ ರಚನೆ ಮಾಡಲಿರುವ ಕೋಟೇಶ್ವರದ ಪ್ರಸಿದ್ಧ ಶಿಲ್ಪಿಗಳಾದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೆ.ಲಕ್ಷ್ಮೀನಾರಾಯಣಆಚಾರ್ಯ ಹಾಗೂ ಶಿಲ್ಪಿ ರಾಜಗೋಪಾಲ ಆಚಾರ್ಯ ಅವರಿಗೆ ವಿದ್ಯುಕ್ತವಾಗಿ ಹಸ್ತಾಂತರಿಸಲಾಯಿತು.

    ಜೂ.12 ರಂದು ಶುಭ ಮಹೂರ್ತದಲ್ಲಿ ಶಿವಮೊಗ್ಗದಿಂದ ಹೊಸನಗರ, ನಗರ, ಸಂಪೇಕಟ್ಟೆ, ಕೊಲ್ಲೂರು, ಇಡೂರು, ವಂಡ್ಸೆ, ದೇವಲ್ಕುಂದ ಮಾರ್ಗವಾಗಿ ವೈಭವದ ಮೆರವಣಿಗೆಯಲ್ಲಿ ರಕ್ತ ಚಂದನ ಮರವನ್ನು ಕಟ್‍ಬೇಲ್ತೂರು ದೈವಸ್ಥಾನಕ್ಕೆ ತರಲಾಯಿತು. ಮಾರ್ಗದ ಮಧ್ಯೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆಯನ್ನು ಸಲ್ಲಿಸಲಾಯಿತು. ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ದೇವಸ್ಥಾನದ ಆಡಳಿತ ಮೊಕ್ತೇಸರರಾದ ವಿಠ್ಠಲ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಆನಂದ ಶೆಟ್ಟಿ, ಮೂರು ಮನೆಯವರು ಹಾಗೂ ಮೂರು ಗ್ರಾಮಸ್ಥರು ಉಪಸ್ಥಿತರಿದ್ದರು.

  • ಉಡುಪಿ :ಮಳೆಗಾಲದಲ್ಲಿ ಅವಘಡಗಳ ಬಗ್ಗೆ ಎಚ್ಚರಿಕೆ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ಉಡುಪಿ :ಮಳೆಗಾಲದಲ್ಲಿ ಅವಘಡಗಳ ಬಗ್ಗೆ ಎಚ್ಚರಿಕೆ ವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ :ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕೆಲಸ ಕಾರ್ಯಗಳನ್ನು ಅರಸಿ ಜನ ಸಾಮಾನ್ಯರು ಕಚೇರಿಗಳಿಗೆ ಭೇಟಿ ನೀಡಿದಾಗ ಸ್ಪಂದಿಸಿ, ನಿಯಮಾನುಸಾರ ಕೆಲಸಗಳನ್ನು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು.

    ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

    ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಜಿಲ್ಲೆಯಲ್ಲಿಯೂ ಸಹ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು, ಮಳೆಯಿಂದ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ-ಜಾನುವಾರುಗಳು ಸಾವು-ನೋವು ಹಾಗೂ ಹೆಚ್ಚಿನ ಆಸ್ತಿ ಹಾನಿಯಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಜಿಲ್ಲೆಯಲ್ಲಿ ಈಗಾಗಲೇ ಸಿಡಿಲು ಬಡಿತದಿಂದ ಮೂರು ಜನರು ಸಾವನ್ನಪ್ಪಿದ್ದಾರೆ. ಜನ ಸಾಮಾನ್ಯರಿಗೆ ಸಿಡಿಲು ಬಡಿತದಿಂದ ರಕ್ಷಣೆ ಕುರಿತು ಅರಿವು ಮೂಡಿಸಬೇಕು ಎಂದ ಅವರು, ಮುಂದಿನ ದಿನಗಳಲ್ಲಿ ಮಳೆಯಿಂದ ಹಾನಿಗೊಳಗಾದವರಿಗೆ ಆದಷ್ಟು ತ್ವರಿತವಾಗಿ ಪರಿಹಾರ ಒದಗಿಸಲು ಮುಂದಾಗಬೇಕು ಎಂದು ತಿಳಿಸಿದರು.

    ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆಗೆ ಸಿಇಒಗೆ ಸೂಚನೆ ನೀಡಿದ ಸಚಿವರು, ಉಡುಪಿ ನಗರ ಪ್ರದೇಶದಲ್ಲಿ ಮಳೆ ನೀರು ಸರಾಗವಾಗಿ ಹರಿಯದ ಸಮಸ್ಯೆ ಕಳೆದ ಬಾರಿ ಉಂಟಾಗಿದ್ದು, ಈ ಬಾರಿ ಅಂತಹ ಅನಾಹುತ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

    ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಆದಷ್ಟು ಶೀಘ್ರ ಆದ್ಯತೆ ಮೇಲೆ ಕೈಗೊಳ್ಳಬೇಕು. ಕುಡಿಯುವ ನೀರಿನೊಂದಿಗೆ ಮಳೆ ನೀರು ಸೇರಿದಂತೆ ಕಲುಷಿತ ನೀರು ಮಿಶ್ರಣಗೊಳ್ಳದಂತೆ ಕ್ರಮವಹಿಸಬೇಕು. ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಆಗಿಂದಾಗ್ಗೆ ನೀರಿನ ಗುಣಮಟ್ಟದ ಪರೀಕ್ಷೆ ನಡೆಸಬೇಕು ಎಂದರು.

    ಗ್ರಾಮೀಣ ಭಾಗದ ಜನರು ಹಳ್ಳಕೊಳ್ಳ ದಾಟಲು ಕಾಲುಸಂಕಗಳನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಈ ಬಾರಿ ಆದ್ಯತೆ ಮೇರೆಗೆ ಕಾಲು ಸಂಕಗಳನ್ನು ನಿರ್ಮಿಸಬೇಕು. ಜಿಲ್ಲೆಯಲ್ಲಿ ಮುಂಗಾರುವಿನಲ್ಲಿ 35,509 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲು ಗುರಿ ಹೊಂದಲಾಗಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಅಗತ್ಯ ಇರುವ ಬಿತ್ತನೆ ಬೀಜಗಳನ್ನು, ರಸಗೊಬ್ಬರ, ದಾಸ್ತಾನುಗಳನ್ನು ಇಟ್ಟುಕೊಂಡು, ರೈತರಿಗೆ ಸಮರ್ಪಕವಾಗಿ ವಿತರಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲೆಯಲ್ಲಿ ಎಂ 4 ಭತ್ತದ ಬೀಜಕ್ಕೆ ಹೆಚ್ಚಿನ ಬೇಡಿಕೆ ಕೇಳಿ ಬರುತ್ತಿದೆ. ಹೊರ ಜಿಲ್ಲೆಗಳಲ್ಲಿ ಈ ಭತ್ತದ ತಳಿಯ ಬೀಜಗಳು ಲಭ್ಯವಿದ್ದರೆ, ತರಿಸಿಕೊಡಬೇಕು. ಕಡಲಕೊರೆತ ತಡೆಗೆ ವೈಜ್ಞಾನಿಕವಾಗಿ ತಡೆಗೋಡೆ ನಿರ್ಮಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಸರಕಾರ ತಾತ್ಕಾಲಿಕ ಕಡಲ ಕೊರೆತ ನಿವಾರಣೆಗೆ ಜಿಲ್ಲೆಗೆ 5 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದರು.

    ಗ್ರಾಮೀಣ ಭಾಗದಲ್ಲಿ ಜನ ಸಾಮಾನ್ಯರಿಗೆ ಕುಡಿಯುವ ನೀರನ್ನು ಒದಗಿಸಲು ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತೀ ಮನೆಗೆ ನಳ ಸಂಪರ್ಕ ಕಲ್ಪಿಸಿರುವ ಕಾಮಗಾರಿ, ಈಗಾಗಲೇ ನಳ ಸಂಪರ್ಕ ಕಲ್ಪಿಸಿರುವ ಮನೆಗಳಿಗೆ ನೀರು ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದು ಮಾತನಾಡಿ, ನಳ ಕಲ್ಪಿಸಿರುವ ಪ್ರತಿಶತಃ ನೂರರಷ್ಟು ಮನೆಗಳಿಗೆ ಕುಡಿಯುವ ನೀರಿನ ಸರಬರಾಜು ಆಗಬೇಕು. ಸ್ಥಳೀಯವಾಗಿ ಲಭ್ಯವಾಗುವ ನೀರಿನ ಮೂಲಗಳ ಬಳಕೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

    ಜಿಲ್ಲೆಯಲ್ಲಿ 400 ಕ್ಕೂ ಹೆಚ್ಚು ಕಿಂಡಿ ಆಣೆಕಟ್ಟು ನಿರ್ಮಾಣದಿಂದಾಗಿ ಪಶ್ಚಿಮಾಭಿಮುಖವಾಗಿ ಮಳೆಯ ನೀರು ಹರಿದು ಸಮುದ್ರ ಸೇರಿ ಸಿಹಿನೀರು ವ್ಯರ್ಥವಾಗಬಾರದೆಂಬ ಉದ್ದೇಶ ಇದ್ದು, ಕಳೆದ ಸಾಲಿನಲ್ಲಿ ಸೆಪ್ಟಂಬರ್ ಮಾಹೆಯಲ್ಲಿ ಹಲಗೆಗಳ ಅಳವಡಿಕೆಯಿಂದಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಕೊಂಚ ತಪ್ಪುವುದರ ಜೊತೆಗೆ ಅಂತರ್ಜಲ ಮಟ್ಟವು ಹೆಚ್ಚಿದೆ. ಈಗ ಮಳೆ ಆರಂಭವಾದ ಹಿನ್ನೆಲೆ ಅವುಗಳಿಗೆ ಅಳವಡಿಸಿರುವ ಹಲಗೆಗಳನ್ನು ತೆಗೆಯಬೇಕು. ಮಳೆಗಾಲ ನೋಡಿಕೊಂಡು ಸೆಪ್ಟಂಬರ್‌ನಲ್ಲಿ ಅವಶ್ಯವಿದ್ದಲ್ಲಿ ಈ ವರ್ಷವೂ ಸಹ ಹಲಗೆಗಳನ್ನು ಅಳವಡಿಸಬೇಕು ಎಂದರು.

    ಜಿಲ್ಲೆಗೆ ಹೊಸದಾಗಿ ಪ್ರಸಕ್ತ ಸಾಲಿನಿಂದ ಮೂರಕ್ಕೂ ಹೆಚ್ಚು ಹೊಸ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಇದಕ್ಕೆ ಅಗತ್ಯವಿರುವ ಕಟ್ಟಡಗಳನ್ನು ಗುರುತಿಸಿ, ಪ್ರಸಕ್ತ ಸಾಲಿನ ಆರಂಭದಿAದಲೇ ಚಾಲ್ತಿ ಆಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಆಗಿಂದಾಗ್ಗೆ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ, ಪರಿಶೀಲಿಸಬೇಕೆಂದು ಸೂಚನೆ ನೀಡಿದರು.

    ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಳೆದ ಬಾರಿ 17 ನೇ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆ ಈ ಬಾರಿ ಮೊದಲ ಸ್ಥಾನ ಅಲಂಕರಿಸಿದೆ. ಇದಕ್ಕೆ ಶಿಕ್ಷಣ ಇಲಾಖೆಗೆ ಅಭಿನಂದನೆ ಸಲ್ಲಿಸಿ ಮಾತನಾಡುತ್ತಾ 143 ಶಾಲೆಗಳಲ್ಲಿ ಶೇಕಡ 100 ರಷ್ಟು ಫಲಿತಾಂಶ ಬಂದಿದೆ. ಪ್ರಸಕ್ತ ಸಾಲಿನಲ್ಲಿ ಇನ್ನೂ ಹೆಚ್ಚು ಶಾಲೆಗಳಿಗೆ ಈ ರೀತಿಯ ಫಲಿತಾಂಶ ಬರಬೇಕು. ಶಾಲಾ-ಕಾಲೇಜುಗಳು, ಅಂಗನವಾಡಿ ಕೇಂದ್ರಗಳ ದುರಸ್ತಿ ಕಾರ್ಯಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಸೂಚನೆ ನೀಡಿದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಸಿ.ಇ.ಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಡಿಎಫ್‌ಓ ಗಳಾದ ಗಣಪತಿ ಹಾಗೂ ಶಿವರಾಂ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

  • ಕುಂದಾಪುರ :ಎಕ್ಸಲೆಂಟ್ ಪದವಿ ಪೂರ್ವ ಕಾಲೇಜ್ ಸುಣ್ಣಾರಿ: ಪ್ರಥಮ ವರ್ಷದ ಪಿ.ಸಿ.ಎಮ್.ಸಿ.(PCMC) ಮತ್ತು ಪಿ.ಸಿ.ಎಮ್.ಬಿ.(PCMB)ವಿಭಾಗದ ಸ್ಥಳೀಯ ವಿದ್ಯಾರ್ಥಿಗಳ ಪಾಲಕರ, ಶಿಕ್ಷಕರ ಸಭೆ

    ಕುಂದಾಪುರ :ಎಕ್ಸಲೆಂಟ್ ಪದವಿ ಪೂರ್ವ ಕಾಲೇಜ್ ಸುಣ್ಣಾರಿ: ಪ್ರಥಮ ವರ್ಷದ ಪಿ.ಸಿ.ಎಮ್.ಸಿ.(PCMC) ಮತ್ತು ಪಿ.ಸಿ.ಎಮ್.ಬಿ.(PCMB)ವಿಭಾಗದ ಸ್ಥಳೀಯ ವಿದ್ಯಾರ್ಥಿಗಳ ಪಾಲಕರ, ಶಿಕ್ಷಕರ ಸಭೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಸರಕಾರಿ ಶಾಲೆಯಲ್ಲಿ ಕಲಿತ ಎಸ್ಸೆಸ್ಸೆಲ್ಸಿ ಯಲ್ಲಿ 600ಕ್ಕಿಂತ ಹೆಚ್ಚು ಅಂಕಗಳಿಸಿದ ಪ್ರಥಮ 50 ವಿದ್ಯಾರ್ಥಿಗಳಿಗೆ ಎಂ.ಎಂ ಹೆಗ್ಡೆ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಶಿಕ್ಷಣ ನೀಡಲಾಗುವುದೆಂದು ಟ್ರಸ್ಟ್ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ಹೇಳಿದರು.

    ಅವರು ಬುಧವಾರದಂದು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ 2024-25 ನೇ ಸಾಲಿನ ಪಿ.ಸಿ.ಎಮ್.ಸಿ.(PCMC) ಮತ್ತು ಪಿ.ಸಿ.ಎಮ್.ಬಿ.(PCMB)ವಿಭಾಗದ ಸ್ಥಳೀಯ ವಿದ್ಯಾರ್ಥಿಗಳ ಪಾಲಕರ-ಶಿಕ್ಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

    ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆಡಳಿತ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಮಾತನಾಡಿ ಶಿಕ್ಷಣ ಪ್ರಕ್ರಿಯೆ ಕೇವಲ ಶಿಕ್ಷಕ ಮತ್ತು ಮಕ್ಕಳನ್ನು ಮಾತ್ರ ಅವಲಂಭಿಸಿಲ್ಲ. ಅದಕ್ಕೆ ಪೂರಕವಾಗಿ ಪಾಲಕರ ಪಾತ್ರವು ಮುಖ್ಯವಾಗಿರುತ್ತದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪಾಲಕರ ಸಹಕಾರ ಅಗತ್ಯ ಎಂದರು. ನಮ್ಮ ವಿದ್ಯಾ ಸಂಸ್ಥೆ ವಿಧ್ಯಾರ್ಥಿಗಳ ಭವಿಷ್ಯ ರೂಪಿಸುವುದು ಧ್ಯೇಯವಾಗಿದೆ. ಉಪನ್ಯಾಸಕರ ಅವಿರತ ಶ್ರಮ, ಆಡಳಿತ ಮಂಡಳಿಯ ಸಹಕಾರದಿಂದ ಎಕ್ಸಲೆಂಟ್ ವಿದ್ಯಾಸಂಸ್ಥೆ ಅತ್ಯುತ್ತಮ ಫಲಿತಾಂಶಗಳಿಸಲು ಸಾಧ್ಯ ಎಂದರು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಹೆಚ್ಚಿನ ಒತ್ತನ್ನು ಕೊಡುತ್ತೇವೆ. ಮೊಬೈಲ್ ನಿಂದ ಮಕ್ಕಳನ್ನು ದೂರವಿಟ್ಟು ಮಕ್ಕಳ ವಿದ್ಯೆಗೆ ಗಮನ ನೀಡಬೇಕೆಂದು ಪಾಲಕರಿಗೆ ಮನವಿ ಮಾಡಲಾಯಿತು

    ವಿಜ್ಜಾನ ವಿಭಾಗದ ಮುಖ್ಯಸ್ಥರಾಗಿರುವ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ರಜಿನಿ, ರಸಾಯನಶಾಸ್ತ್ರದ ಮುಖ್ಯಸ್ಥ ಹರಿ ಶರ್ಮ, ಜೀವಶಾಸ್ತ್ರದ ವಿಭಾಗದ ಮುಖ್ಯಸ್ಥೆ ಸ್ಮೀತ್ಥಲ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಝಹಿರ್ ಅಬ್ಬಾಸ್ ಇವರುಗಳು ವಿದ್ಯಾರ್ಥಿಗಳ ಯಶಸ್ವಿಗೆ ಮುನ್ನುಡಿಯಾಗಿ ಪ್ರಸ್ತುತ ಶೈಕ್ಷಣಿಕ ವರ್ಷದ ಪಠ್ಯ ವಿಷಯಗಳ ಬಗ್ಗೆ ತಮ್ಮ ಯೋಜನೆ, ಯೋಚನೆಗಳನ್ನು ಪಾಲಕರಿಗೆ, ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

    ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಾಪಕರು, ವಿದ್ಯಾರ್ಥಿಗಳು, ಪೋಷಕರು ಭಾಗಿಯಾಗಿದ್ದರು.

    ಅಧ್ಯಾಪಕ ಶ್ರೀನಿವಾಸ ವೈದ್ಯ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

  • ಕುಂದಾಪುರ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಸಂಸತ್ತ್‌ ಮಾದರಿ ಚುನಾವಣೆ ಇವಿಎಂ ಆ್ಯಪ್ (EVM App)ಮೂಲಕ ಮತ ಚಲಾಯಿದ ವಿದ್ಯಾರ್ಥಿಗಳು

    ಕುಂದಾಪುರ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಸಂಸತ್ತ್‌ ಮಾದರಿ ಚುನಾವಣೆ ಇವಿಎಂ ಆ್ಯಪ್ (EVM App)ಮೂಲಕ ಮತ ಚಲಾಯಿದ ವಿದ್ಯಾರ್ಥಿಗಳು

    ಶಾಲಾ ನಾಯಕಿಯಾಗಿ ಆದ್ಯಾ ಪಿ ಮತ್ತು ಉಪನಾಯಕನಾಗಿ ಎಸ್‌ ವಿ ಧನುಷ್ ಆಯ್ಕೆ

    ಕುಂದಾಪುರ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಶಾಲಾ ವಿದ್ಯಾರ್ಥಿ ನಾಯಕ ಮತ್ತು ಉಪನಾಯಕನ ಆಯ್ಕೆಗಾಗಿ ಸಂಸತ್ತ್‌ ಮಾದರಿ ಚುನಾವಣೆಯನ್ನು ನಡೆಸಲಾಯಿತು.

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಕ್ಕಳಿಗೆ ಚುನಾವಣೆಯ ಅರಿವು ಮೂಡಿಸುವ ಉದ್ದೇಶದಿಂದ ಚುನಾವಣೆ ಅಧಿಸೂಚನೆ, ನಾಮಪತ್ರ ಸಲ್ಲಿಕೆ, ಪರೀಶೀಲನೆ, ಹಿಂಪಡೆಯುವುದು, ಚಿಹ್ನೆ ನೀಡುವಿಕೆ, ಪ್ರಚಾರ ಹೀಗೆ ಎಲ್ಲಾ ಹಂತಗಳ ನಂತರ ಮಕ್ಕಳಿಗೆ ಇವಿಎಂ ಆ್ಯಪ್(EVM App) ಮೂಲಕ ಮೊಬೈಲ್‌ ನಲ್ಲಿ ಮತಚಲಾಯಿಸಲು ಅವಕಾಶ ನೀಲಾಯಿತು. ಮಕ್ಕಳು ತುಂಬಾ ಸಂಭ್ರಮದಿಂದ ಮತ ಚಲಾಯಿಸಿದರು. ನೋಟಾ(NOTA)ಕ್ಕೂ ಅವಕಾಶ ನೀಡಲಾಗಿತ್ತು.

    ನಾಯಕನ ಸ್ಥಾನಕ್ಕೆ ಮೂವರು ವಿದ್ಯಾರ್ಥಿಗಳು ಮತ್ತು ಉಪನಾಯಕನ ಸ್ಥಾನಕ್ಕೆ ಮೂವರು ವಿದ್ಯಾರ್ಥಿಗಳು ಸ್ಪರ್ಧಿಸಿದ್ದು ಶಾಲಾ ನಾಯಕಿಯಾಗಿ ಆದ್ಯಾ ಪಿ 7ನೇ ತರಗತಿ, ಉಪನಾಯಕನ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಸ್‌ ವಿ ಧನುಷ್‌ 6ನೇ ತರಗತಿ ಆಯ್ಕೆಯಾದರು.

    ಚುನಾವಣೆ ಅಧಿಕಾರಿಯಾಗಿ ಸಹಶಿಕ್ಷಕ ಆನಂದ ಕುಲಾಲ ಕರ್ತವ್ಯ ನಿರ್ವಹಿಸಿದರೆ,ಸಹ ಶಿಕ್ಷಕಿ ಸಂಧ್ಯಾ ಕೆ. ಮತ್ತು ಗೌರವ ಶಿಕ್ಷಕಿಯರಾದ ಪ್ರಮೀಳಾ, ವಿಶಲಾಕ್ಷಿ, ವೈಶಾಲಿ ಶೆಟ್ಟಿ ಮತ್ತು ನಯನ ಮತಗಟ್ಟೆ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು.

    ಜೂ.10ರಂದು ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ ಡಿ. ನೂತನ ಮಂತ್ರಿ ಮಂಡಲದ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.

  • ಕುಂದಾಪುರ :ಎಕ್ಸಲೆಂಟ್ ಪದವಿ ಪೂರ್ವ ಕಾಲೇಜ್ ಸುಣ್ಣಾರಿ : ಪ್ರಥಮ ವರ್ಷದ ಪಿ.ಸಿ.ಎಮ್.ಸಿ.(PCMC) ವಸತಿ ನಿಲಯ ವಿಧ್ಯಾರ್ಥಿಗಳ ಪಾಲಕರ, ಶಿಕ್ಷಕರ ಸಭೆ

    ಕುಂದಾಪುರ :ಎಕ್ಸಲೆಂಟ್ ಪದವಿ ಪೂರ್ವ ಕಾಲೇಜ್ ಸುಣ್ಣಾರಿ : ಪ್ರಥಮ ವರ್ಷದ ಪಿ.ಸಿ.ಎಮ್.ಸಿ.(PCMC) ವಸತಿ ನಿಲಯ ವಿಧ್ಯಾರ್ಥಿಗಳ ಪಾಲಕರ, ಶಿಕ್ಷಕರ ಸಭೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ನಮಗೆ ದೇಶ, ಸರಕಾರ, ಸಮಾಜ ಏನು ಮಾಡಿದೆ ಎಂಬುದಕ್ಕಿಂತ ನಾವುಗಳು ಸಮಾಜ, ದೇಶಕ್ಕೆ ಏನು ಕೊಡುಗೆ ನೀಡಿದ್ದೆವೆ, ನೀಡುತ್ತಿದ್ದೇವೆ ಎಂಬುದು ಮುಖ್ಯ ಎಂದು ಟ್ರಸ್ಟ್ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ಹೇಳಿದರು.

    ಅವರು ಜೂ. 11 ರಂದು ಮಂಗಳವಾರ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ 2024-25 ನೇ ಸಾಲಿನ ಪಿ.ಸಿ.ಎಮ್.ಸಿ.(PCMC) ವಿಭಾಗದ ವಸತಿ ನಿಲಯ ವಿದ್ಯಾರ್ಥಿಗಳ ಪಾಲಕರ-ಶಿಕ್ಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

    ಸರಕಾರಿ ಶಾಲೆಯಲ್ಲಿ ಕಲಿತ ಎಸ್ಸೆಸ್ಸೆಲ್ಸಿ ಯಲ್ಲಿ 600 ಕಿಂತ ಹೆಚ್ಚು ಅಂಕ ಗಳಿಸಿದ ಪ್ರಥಮ 50 ವಿದ್ಯಾರ್ಥಿಗಳಿಗೆ ಎಂ.ಎಂ ಹೆಗ್ಡೆ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಶಿಕ್ಷಣ ನೀಡಲಾಗುವುದೆಂದು ಹೇಳಿದರು.

    ಅಲ್ಲದೆ ತಮ್ಮ ಸಂಸ್ಥೆಯಲ್ಲಿರುವ ಬೋಧಕ ಸಿಬ್ಬಂದಿ ವರ್ಗ, ನಿರಂತರವಾಗಿ ನಡೆಯುವ ತರಗತಿಗಳು, ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಶುಲ್ಕ ರಿಯಾಯಿತಿ ಹಾಗೂ ಸಂಸ್ಥೆಯಲ್ಲಿ ನಡೆಯುವ ವಿವಿಧ ಸವಲತ್ತುಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

    ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆಡಳಿತ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ಪ್ರಸ್ತುತ ಶೈಕ್ಷಣಿಕ ವರ್ಷದ ಕಾರ್ಯವೈಖರ್ಯ ಕುರಿತು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿ ಪರೀಕ್ಷಾ ಫಲಿತಾಂಶ, ಪರೀಕ್ಷಾ ತಯಾರಿ, ಉಪನ್ಯಾಸಕರ ಮಾರ್ಗದರ್ಶನ ಕಾಲೇಜ್ ವಸತಿ ನಿಲಯದಲ್ಲಿ ದೊರೆಯುವ ವಿವಿಧ ಸವಲತ್ತುಗಳು, ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಶುಲ್ಕ ರಿಯಾಯಿತಿ, ಮಕ್ಕಳಿಗೆ ಮನರಂಜನೆಗಳು, ಧಾರ್ಮಿಕ ಹಬ್ಬಗಳ ಆಚರಣೆ ಮತ್ತು ಸಂಸ್ಥೆಯ ವಿಶೇಷತೆಗಳ ಬಗ್ಗೆ ಸ್ಥೂಲವಾಗಿ ಮಾಹಿತಿ ನೀಡಿದರು.

    ಈ ಸಂದರ್ಭದಲ್ಲಿ PCMC ವಿಭಾಗದ ಮುಖ್ಯಸ್ಥರಾಗಿರುವ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ರಜಿನಿ, ರಸಾಯನಶಾಸ್ತ್ರದ ಮುಖ್ಯಸ್ಥ ಹರಿ ಶರ್ಮ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಝಹಿರ್ ಅಬ್ಬಾಸ್ ಇವರುಗಳು ವಿದ್ಯಾರ್ಥಿಗಳ ಯಶಸ್ವಿಗೆ ಮುನ್ನುಡಿಯಾಗಿ ಪ್ರಸ್ತುತ ಶೈಕ್ಷಣಿಕ ವರ್ಷದ ಪಠ್ಯ ವಿಷಯಗಳ ಬಗ್ಗೆ ತಮ್ಮ ಯೋಜನೆ, ಯೋಚನೆಗಳನ್ನು ಪಾಲಕರಿಗೆ,ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

    ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಾಪಕರು, ವಿದ್ಯಾರ್ಥಿಗಳು, ಪೋಷಕರು ಭಾಗಿಯಾಗಿದ್ದರು.

    ಅಧ್ಯಾಪಕ ಶ್ರೀನಿವಾಸ ವೈದ್ಯ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

  • ಕೋಟ :ಪಂಚವರ್ಣದ 211ನೇ ವಾರದ ಪರಿಸರಸ್ನೇಹಿ ಹಸಿರು ಜೀವ ಯೋಜನೆ

    ಕೋಟ :ಪಂಚವರ್ಣದ 211ನೇ ವಾರದ ಪರಿಸರಸ್ನೇಹಿ ಹಸಿರು ಜೀವ ಯೋಜನೆ

    ಗಿಡ ನೆಡುವ ಕಾರ್ಯ ಅತ್ಯಂತ ಪ್ರಶಂಸನೀಯ – ಪ್ರಕಾಶ್ ಹಂದಟ್ಟು

    ಕುಂದಾಪುರ ಮಿರರ್ ಸುದ್ದಿ…
    ಕೋಟ: ಗಿಡ ನಡುವ ಕಾಯಕ ಅತ್ಯಂತ ಪ್ರಶಂಸನೀಯ ಕಾರ್ಯ ಅದು ನಿರಂತರವಾಗಿಸುವ ಯೋಚನೆ ಯೋಜನೆ ಎಲ್ಲರೂ ಮಾದರಿ ಕಾರ್ಯವಾಗಿದೆ ಎಂದು ಕೋಟತಟ್ಟು ಗ್ರಾಮಪಂಚಾಯತ್ ಸದಸ್ಯ ಪ್ರಕಾಶ್ ಹಂದಟ್ಟು ಹೇಳಿದರು.

    ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಸುವರ್ಣ ಎಂಟರ್ ಪ್ರೈಸ್ ಬ್ರಹ್ಮಾವರ, ಮಣೂರು ಫ್ರೆಂಡ್ಸ್ ,ಹಂದಟ್ಟು ಮಹಿಳಾ ಬಳಗ ಕೋಟ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಸಮುದ್ಯತಾ ಗ್ರೂಪ್ಸ್ ಕೋಟ ಇವರ ಸಹಯೋಗದೊಂದಿಗೆ ಹಂದಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘ ಕೋಟ ಇವರ ಸಂಯೋಜನೆಯೊಂದಿಗೆ 211ನೇ ಪರಿಸರಸ್ನೇಹಿ ಅಭಿಯಾನ ಮೂರುತಿಂಗಳ ಕಾಲ ನಡೆಯುವ ಹಸಿರು ಜೀವ ಯೋಜನೆಯಲ್ಲಿ ಗಿಡ ವಿತರಿಸಿ ಮಾತನಾಡಿ ಪ್ರಕೃತಿಯನ್ನು ಪ್ರೀತಿಸುವ ಅದನ್ನು ಆರಾಧಿಸುವ ಪಂಚವರ್ಣ ಹಾಗೂ ಇತರ ಸಂಘ ಸಂಸ್ಥೆಗಳ ಕಾರ್ಯವನ್ನು ಶ್ಲಾಘಿಸಿದರು.

    ಹಂದಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಜಾನಕಿ ಹಂದೆ ಮಾತನಾಡಿ ಪ್ರತಿ ವರ್ಷ ಊರು ಕೇರಿಗಳಲ್ಲಿ ಗಿಡವನ್ನು ಕೊಂಡ್ಯೋಯ್ದು ಅಲ್ಲಿ ಪರಿಸರಸ್ನೇಹಿ ಕಾರ್ಯಕ್ರಮ ಆಚರಿಸುವ ಪಂಚವರ್ಣದ ಸಾಮಾಜಿಕ ಕಾರ್ಯ ಇತರರಿಗೆ ಸ್ಪೂರ್ತಿಯಾಗಿದೆ. ಹಸಿರಿದ್ದರೆ ಉಸಿರು ಉಳಿಯುತ್ತದೆ ಅದನ್ನು ಪ್ರತಿಯೊಬ್ಬರು ಚಾಚು ತಪ್ಪದೆ ಪಾಲಿಸುವಂತೆ ಕರೆ ಇತ್ತರು.

    ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿ ಮೆಸ್ಕಾಂನ ನಿವೃತ್ತ ಸಿಬ್ಬಂದಿ ಬಸವ ಪೂಜಾರಿ ಇವರಿಗೆ ಗಿಡ ವಿತರಿಸಲಾಯಿತು. ಅಲ್ಲದೆ ಪರಿಸರದ ಸಾಕಷ್ಟು ಮನೆಗಳಿಗೆ ತೆರಳಿ ಗಿಡ ವಿತರಿಸಿ ಪರಿಸರ ಜಾಗೃತಿ ಮಾಡಲಾಯಿತು.

    ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಹಂದಟ್ಟು ಮಹಿಳಾ ಬಳಗ ಕೋಟ ಅಧ್ಯಕ್ಷೆ ರತ್ನಾ ಪೂಜಾರಿ, ಪಂಚವರ್ಣದ ಸಂಚಾಲಕ ಅಮೃತ್ ಜೋಗಿ ಮತ್ತಿತರರು ಉಪಸ್ಥಿತರಿದ್ದರು.

    ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭಾ ಕೆ ಹಂದಟ್ಟು ಸ್ವಾಗತಿಸಿದರು. ಕಾರ್ಯಕ್ರಮವನ್ನು ಸಂಚಾಲಕಿ ಸುಜಾತ ಬಾಯರಿ ನಿರೂಪಿದರು. ಮಹಿಳಾ ಮಂಡಲದ ಪ್ರಧಾನಕಾರ್ಯದರ್ಶಿ ವಸಂತಿ ಹಂದಟ್ಟು ವಂದಿಸಿದರು. ಕಾರ್ಯಕ್ರಮವನ್ನು ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.