Category: ಸುದ್ದಿ

  • ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

    ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಟ್ಟದ ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂನ್ 01 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
    ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ಅವರು ವಹಿಸಿದ್ದರು.

    ಖ್ಯಾತ ವಾಗ್ಮಿ ಹಾಗೂ ನಿರೂಪಕರಾದ ದಾಮೋದರ ಶರ್ಮ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ,
    ಹೆತ್ತವರು ತಮ್ಮ ಮಕ್ಕಳಿಗೆ ಸದ್ವಿಚಾರ, ಸಂಸ್ಕೃತಿ, ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಯಾವ ರೀತಿ ಕಾರ್ಯ ಪ್ರವೃತ್ತರಾಗಬೇಕು ಎನ್ನುವುದರ ಕುರಿತು ಮಾಹಿತಿ ನೀಡಿದರು.

    ಈ ಸಂದರ್ಭದಲ್ಲಿ 2023- 24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ರ್ಯಾಂಕ್ ವಿಜೇತ 16 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

    ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಪ್ರಸಕ್ತ ಶೈಕ್ಷಣಿಕ ಸಾಲಿನ ಕಾರ್ಯಯೋಜನೆಗಳ ಕುರಿತು ಮಾಹಿತಿ ನೀಡಿ, ಶೈಕ್ಷಣಿಕ ಪ್ರಗತಿಗೆ ಪೋಷಕರೂ ಉಪನ್ಯಾಸಕರ ಜೊತೆ ಸಹಕರಿಸಬೇಕೆಂದು ಸಲಹೆ ನೀಡಿದರು.

    ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕ ರಮಾಕಾಂತ್ ರೇವಣಕ‌ರ್ , ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಸನ್ಮಾನಿತರ ಪಟ್ಟಿಯನ್ನು ಭೌತ ಶಾಸ್ತ್ರ ಉಪನ್ಯಾಸಕ ಗಣೇಶ್ ವಾಚಿಸಿದರು, ಇಂಗ್ಲೀಷ್ ಭಾಷಾ ಉಪನ್ಯಾಸಕಿ ಅಮೃತಾ ಅತಿಥಿಗಳನ್ನು ಪರಿಚಯಿಸಿದರು.

    ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಸ್ವಾಗತಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಅನುಷಾ ವಂದಿಸಿದರು. ಕನ್ನಡ ಭಾಷಾ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು

  • ಕುಂದಾಪುರ :ಸ.ಮಾ.ಹಿ.ಪ್ರಾ. ಶಾಲೆ ವಂಡ್ಸೆ: ಪ್ರಾರಂಭೋತ್ಸವ

    ಕುಂದಾಪುರ :ಸ.ಮಾ.ಹಿ.ಪ್ರಾ. ಶಾಲೆ ವಂಡ್ಸೆ: ಪ್ರಾರಂಭೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ವಂಡ್ಸೆ: ಸ.ಮಾ.ಹಿ.ಪ್ರಾ. ಶಾಲೆ ವಂಡ್ಸೆ ಇಲ್ಲಿ ಶಾಲಾ ಪ್ರಾರಂಭೋತ್ಸವ ವಿಶಿಷ್ಟವಾಗಿ ಜರುಗಿತು. ಚಪ್ಪಾಳೆಯೊಂದಿಗೆ ಮಕ್ಕಳನ್ನು ಶಾಲಾವರಣಕ್ಕೆ ಸ್ವಾಗತಿಸುವುದರೊಂದಿಗೆ ಪ್ರಾರಂಭೋತ್ಸವ ಆರಂಭಗೊಂಡಿತು. ಆ ನಂತರ ಮಕ್ಕಳಿಗಾಗಿ ಶಿಕ್ಷಕರು ವಿವಿಧ ರೀತಿಯ ಚಟುವಟಿಕೆಗಳನ್ನು ನಡೆಸಿಕೊಟ್ಟರು.

    ಪ್ರಾರಂಭೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಲೇಖಕಿ, ರೇಖಾಚಿತ್ರ ಕಲಾವಿದೆ ಡಾ.ಹೂರ್ ಬಾನು ಭಾಗವಹಿಸಿದ್ದರು. ಇವರು ಮಕ್ಕಳೊಂದಿಗೆ ಸಂವಾದ ಮತ್ತು ಚಿತ್ರಕಲಾ ತರಬೇತಿಯನ್ನು ನಡೆಸಿಕೊಟ್ಟರು. ಮಕ್ಕಳಿಗಾಗಿ ಹಲವಾರು ಪುಸ್ತಕಗಳನ್ನು ರಚಿಸಿರುವುದಲ್ಲದೇ, ತಾನೇ ಬರೆದಿರುವ”ಗಣಿತ ಕಲಿತ ಗಿಣಿ” ಪುಸ್ತಕದ ಚಿತ್ರಕಲೆಗಾಗಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿರುವ ಹೂರ್ ಬಾನು ರವರ ಮಾರ್ಗದರ್ಶನ ಮಕ್ಕಳಿಗೆ ವಿಶೇಷ ಪ್ರೇರಣೆ ನೀಡಿತು.

    ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷರಾದ ಡಾ.ಪೂರ್ಣಿಮಾ ಟಿ., ಉಪಾಧ್ಯಕ್ಷ ರಾಜು ಹಾಗೂ ಎಸ್ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

  • ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್(NATA)2ನೇ ಹಂತದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಹೆಮ್ಮಾಡಿ ಜನತಾ ಕಾಲೇಜಿನ ಅಲಕಾ ಹೆಬ್ಬಾರ್

    ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್(NATA)2ನೇ ಹಂತದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಹೆಮ್ಮಾಡಿ ಜನತಾ ಕಾಲೇಜಿನ ಅಲಕಾ ಹೆಬ್ಬಾರ್

    ಕುಂದಾಪುರ ಮಿರರ್ ಸುದ್ದಿ…

    ಹೆಮ್ಮಾಡಿ :ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ 2ನೇ ಹಂತದ ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 165 ಅಂಕಗಳನ್ನು ಪಡೆದು, ಅದ್ವಿತೀಯ ಸಾಧನೆ ಮಾಡುವುದರ ಮೂಲಕ ಅರ್ಹತೆ ಪಡೆದಿದ್ದು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ಉಳಿದಂತೆ ಕಾಲೇಜಿನ ವಿದ್ಯಾರ್ಥಿನಿಯರಾದ ವರ್ಣಾ ಆಚಾರ್ 130ಅಂಕಗಳು ಹಾಗೂ ಉನ್ನತಿ ಗೌಡ 113ಅಂಕಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ.
    ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದ ವಿದ್ಯಾರ್ಥಿನಿಯರು ಇವರಾಗಿದ್ದು,ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ.

    ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

  • ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ – ಶಾಲಾ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಬುಕ್ ವಿತರಣೆ

    ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ – ಶಾಲಾ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಬುಕ್ ವಿತರಣೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಬೈಲೂರು ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಅಗತ್ಯವಾದ ಉತ್ತಮ ಮೂಲಭೂತ ಸೌಕರ್ಯ ಇದೆ. ಇದನ್ನು ಪೋಷಕರು ಸದುಪಯೋಗ ಮಾಡಿಕೊಳ್ಳ ಬೇಕು ಎಂದು ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಮೂಡುಬೈಲೂರು ಹೇಳಿದರು.

    ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಇಲ್ಲಿ ನಡೆದ 2024-25ನೇ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮುದಾಯ ಮತ್ತು ಹಳೆವಿದ್ಯಾರ್ಥಿ ಸಂಘದ ಸಹಾಯದಿಂದ ಶಾಲೆಗೆ ಅತೀ ಅಗತ್ಯವಾದ ಮೂಲಭೂತ ಸೌಕರ್ಯಗಳಾದ ಇಂಟರ್‌ನೇಟ್‌, ಪ್ರತಿ ತರಗತಿಗೆ ಸ್ಮಾರ್ಟ್‌ ಟಿ ವಿ., ಕಂಪ್ಯೂಟರ್‌ ಲ್ಯಾಬ್‌ ಮುಂತಾದ ಆಧುನಿಕ ಕಲಿಕ ಸೌಕರ್ಯಗಳ ಜೊತೆಗೆ ಪ್ರತಿಭಾವಂತ ಶಿಕ್ಷಕರನ್ನು ಒದಗಿಸಿದ್ದು ಮಕ್ಕಳನ್ನು ಹೆಚ್ಚಿನ ಸಂಖೈಯಲ್ಲಿ ಶಾಲೆಗೆ ದಾಖಲಿಸಿಸುವುದರ ಮೂಲಕ ಪೋಷಕರು ಈ ಮೂಲಭೂತ ಸೌಕರ್ಯಗಳ ಪ್ರಯೋಜನ ಪಡೆಯಬೇಕು” ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಆಶಾಲತಾ ಶಿವರಾಮ ಶೆಟ್ಟಿಯವರು. ದೂರದಿಂದ ಶಾಲೆಗೆ ಬರುವ ಮಕ್ಕಳಿಗೆ ಸಾರಿಗೆ ವೆಚ್ಚಕ್ಕಾಗಿ ರೂಪಾಯಿ ಹತ್ತು ಸಾವಿರದ ಚೆಕ್ ನ್ನು ಮುಖ್ಯಶಿಕ್ಷಕರಿಗೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಮ್‌ ಸಿ ಉಪಾಧ್ಯಕ್ಷರಾದ ಶೋಭಾ ವಹಿಸಿದ್ದರು.

    ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಸ್ಥಳೀಯ ಪಂಚಾಯತ್‌ ಸದಸ್ಯರಾದ ಶ್ರೀಮತಿ ಲಕ್ಷ್ಮೀ, ಅಂಗನವಾಡಿ ಕಾರ್ಯಕರ್ತೆ ಆಶಾಲತಾ ಶೆಟ್ಟಿ, ಹಳೆವಿದ್ಯಾರ್ಥಿ ಸಂಘದ ಖಜಾಂಚಿ ಸುಧಾಕರ ಬೈಲೂರು ಸರಕಾರಿಂದ ಕೊಡಮಾಡಿದ ಉಚಿತ ನೋಟ್‌ ಪುಸ್ತಕವನ್ನು ಮಕ್ಕಳಿಗೆ ವಿತರಿಸಿದರು.

    ಒಂದನೇ ತರಗತಿಗೆ ದಾಖಲಾದ ಮಕ್ಕಳಿಗೆ ಬಲೂನ್‌ ನೀಡಿ ಮೆರವಣಿಗೆಯಲ್ಲಿ ಕರೆತರಲಾಯಿತು.

    ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ ಡಿ ಸ್ವಾಗತಿಸಿದರು. ಸಹಶಿಕ್ಷಕ ಆನಂದ ಕುಲಾಲ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಸಂಧ್ಯಾ ಕೆ ವಂದಿಸಿದರು. ಗೌರವ ಶಿಕ್ಷಕಿಯರಾದ ಪ್ರಮೀಳಾ, ವಿಶಲಾಕ್ಷಿ, ವೈಶಾಲಿ ಶೆಟ್ಟಿ ಮತ್ತು ನಯನ ಪಠ್ಯ ಪುಸ್ತಕ ವಿತರಣೆಗೆ ಸಹಕರಿಸಿರು.

  • ಕೋಟೇಶ್ವರ :ರೂರಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆ ಮತ್ತು ಮಾಹಿತಿ ಕಾರ್ಯಕ್ರಮ

    ಕೋಟೇಶ್ವರ :ರೂರಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆ ಮತ್ತು ಮಾಹಿತಿ ಕಾರ್ಯಕ್ರಮ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ: ತಂಬಾಕು ಉತ್ಪಾದನೆಯಲ್ಲಿ ಭಾರತ ಪ್ರಪಂಚದಲ್ಲೇ ಮೊದಲ ಸ್ಥಾನದಲ್ಲಿದೆ ಎಂಬ ಸರಕಾರಿ ವರದಿ ಆತಂಕಕಾರಿ, 15 ವರ್ಷ ಮೇಲ್ಪಟ್ಟವರ ಪೈಕಿ ಶೇ.28ರಷ್ಟು ಮಂದಿ ಮಾದಕ ವ್ಯಸನಿಗಳಿದ್ದಾರೆ. ಅದರಲ್ಲಿ ವಿದ್ಯಾರ್ಥಿಗಳು, ಹೆಣ್ಮಕ್ಕಳು ಒಳಗೊಂಡಿರುವುದು ಕಳವಳಕಾರಿ ಎಂದು ಕುಂದಾಪುರ ಪ್ರಧಾನ ಸಿವಿಲ್ ನ್ಯಾಯಾಧೀಶೆ, ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಮಂಜುಳಾ ಬಿ. ಹೇಳಿದರು.

    ಶುಕ್ರವಾರ ಕೋಟೇಶ್ವರದಲ್ಲಿರುವ ಕುಂದಾಪುರ
    ರೂರಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಗ ಪೊಲೀಸ್ ಇಲಾಖೆ, – ಆರೋಗ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿ ಕೊಂಡ ವಿಶ್ವ ತಂಬಾಕು ನಿಷೇಧ ದಿನಾಚರಣೆ ಮತ್ತು ಮತ್ತು ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಪ್ರತಿ ವರ್ಷ 66ಲಕ್ಷ ಮಂದಿ ತಂಬಾಕು ಸೇವನೆಯ ಕಾರಣಕ್ಕೆ ಮರಣವನ್ನಪ್ಪುತ್ತಿದ್ದಾರೆ. ಪ್ರತಿ 6 ಸೆಕೆಂಡಿಗೆ 1 ಜೀವ ಹಾನಿ ಆಗುತ್ತಿದೆ. ಇಷ್ಟೊಂದು ಘಾತಕ ಪರಿಣಾಮ ಹೊಂದಿರುವ ತಂಬಾಕಿನ ಬಗ್ಗೆ ಎಚ್ಚರ ವಹಿಸಬೇಕು, ಬೀಡಿ, ಸಿಗರೇಟು ಸೇವಿಸುವವರು ತಾವು ನಾಶ ಆಗುವುದಲ್ಲದೆ ಪರಿಸರಕ್ಕೆ ಹೊಗೆ ಬಿಟ್ಟು ಇತರರ ಬದುಕಿಗೂ ಕಂಠಕ ಆಗುತ್ತಿದ್ದಾರೆ. ಯುವಜನರು ದುಶ್ಚಟದಿಂದ ಸಂಪೂರ್ಣ ಹೊರಬೀಳಲೇಬೇಕು ಎಂದು ಅವರು ಎಚ್ಚರಿಸಿದರು.

    ಕುಂದಾಪುರ ಹಿರಿಯ ಸಿವಿಲ್ ನ್ಯಾಯಾಧೀಶ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ರಾಜು ಎನ್. ಉದ್ಘಾಟಿಸಿ ಮಾತನಾಡಿ, 1987ರಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆ ಜಾರಿಗೆ ಬಂತು. ಅಲ್ಲಿಂದ ಇಲ್ಲಿಯ ತನಕ ತಂಬಾಕು ನಿಷೇಧ ಸಂಬಂಧಿತ ಕಾನೂನಿನ ಅರಿವು ನೀಡುವ ಕೆಲಸ ನಡೆಯುತ್ತಲೆ ಇದೆ. ಆದರೆ ತಂಬಾಕು
    ಉತ್ಪಾದಿಸುವವರು ಕೇವಲ ತಮ್ಮ ಲಾಭಕ್ಕಾಗಿ ಇಡಿ ನಾಗರಿಕ ಸಮಾಜವನ್ನು ದುರ್ಬಲಗೊಳಿಸುತ್ತಿದ್ದಾರೆ. ಜೀವನ ಮತ್ತು ಆರೋಗ್ಯ ಹಾಳು ಮಾಡುವ ತಂಬಾಕುವಿನಿಂದ ನಾಗರಿಕ ಸಮಾಜ ದೂರವುಳಿಯಬೇಕು ಎಂದು ಅವರು ಹೇಳಿದರು.

    ವಕೀಲರ ಸಂಘ ಅಧ್ಯಕ್ಷ ಪ್ರಮೋದ್ ಹಂದೆ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

    ಸಹಾಯಕ ಸರಕಾರಿ ಅಭಿಯೋಜಕ ಉದಯಕುಮಾರ್, ಪ್ರೊಬೆಷನರಿ ಡಿವೈಎಸ್ಪಿ ಗೀತಾ ಪಾಟೀಲ್, ಕುಂದಾಪುರ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ಚಂದ್ರ ಶೆಟ್ಟಿ ಗಿಳಿಯಾರು, ಕುಂದಾಪುರ ರೂರಲ್ ಆಯು ರ್ವೇದ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಪ್ರದೀಪ ಶೆಟ್ಟಿ, ವೈಸ್ ಪ್ರಿನ್ಸಿಪಾಲ್ ಡಾ.ಹರಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಸುಷ್ಮಾ ಪ್ರಾರ್ಥಿಸಿದರು. ರೂರಲ್ ಆಯರ್ವೇದ ಮೆಡಿಕಲ್ ಕಾಲೇಜೀನ ಪ್ರಿನ್ಸಿಪಾಲ್ ಡಾ| ಪ್ರಸನ್ನ ಐತಾಳ ಸ್ವಾಗತಿಸಿದರು. ಡಾ.ಪರೀಕ್ಷಿತ್ ನಾವಡ ನಿರ್ವಹಿಸಿದರು. ಡಾ.ಸವಿತಾ ಭಟ್ ವಂದಿಸಿದರು.

  • ಕುಂದಾಪುರ :ಬಿ.ಕಾಂ. ಪದವಿ ಪರೀಕ್ಷೆ :ಬಿ. ಬಿ. ಹೆಗ್ಡೆ ಕಾಲೇಜಿನ ಪ್ರತೀಕ್ಷಾ ಶೆಟ್ಟಿಗೆ 9ನೇ ರ‍್ಯಾಂಕ್

    ಕುಂದಾಪುರ :ಬಿ.ಕಾಂ. ಪದವಿ ಪರೀಕ್ಷೆ :ಬಿ. ಬಿ. ಹೆಗ್ಡೆ ಕಾಲೇಜಿನ ಪ್ರತೀಕ್ಷಾ ಶೆಟ್ಟಿಗೆ 9ನೇ ರ‍್ಯಾಂಕ್

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಮಂಗಳೂರು ವಿಶ್ವವಿದ್ಯಾನಿಲಯದ ಜುಲೈ/ಆಗಸ್ಟ್ 2023ರ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ಪ್ರತೀಕ್ಷಾ ಶೆಟ್ಟಿ ಇವರು 9ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

    ಇವರನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿಯವರು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

  • ನಲಿ ನಲಿಯುತ ಶಾಲೆಯೊಳೆಗೆ ಪ್ರವೇಶಿಸಿದ ವಿದ್ಯಾರ್ಥಿಗಳು,ನಗುಮೊಗದಿಂದ ಸ್ವಾಗತಿಸಿಕೊಂಡ ಶಾಲಾ ಮಹಾಪೋಷಕ ಆನಂದ್ ಸಿ. ಕುಂದರ್

    ನಲಿ ನಲಿಯುತ ಶಾಲೆಯೊಳೆಗೆ ಪ್ರವೇಶಿಸಿದ ವಿದ್ಯಾರ್ಥಿಗಳು,ನಗುಮೊಗದಿಂದ ಸ್ವಾಗತಿಸಿಕೊಂಡ ಶಾಲಾ ಮಹಾಪೋಷಕ ಆನಂದ್ ಸಿ. ಕುಂದರ್

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಇಲ್ಲಿನ ಕೋಟದ ಮಣೂರು ಪಡುಕರೆ ಸರಕಾರಿ ಸಂಯುಕ್ತ ಫ್ರೌಢ ಶಾಲೆಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಶುಕ್ರವಾರ ನಲಿ ನಲಿದಾಡುತ್ತಾ ಶಾಲೆಯೊಳೆಗೆ ಪ್ರವೇಶಿಸಿದರು.

    ಮಕ್ಕಳಿಗೆ ಸಿಹಿ ಹಂಚಿ ನಗುಮೊಗದ ಸ್ವಾಗತಕೋರಿದ ಶಾಲಾ ಪ್ರೋತ್ಸಾಹ ಶಕ್ತಿ ಆನಂದ್.ಸಿ.ಕುಂದರ್ ಮಕ್ಕಳಿಗೆ ಸಿಹಿ ಹಂಚಿ ಶುಭ ಹಾರೈಸಿದರು.

    ಶಾಲೆಯ ಮುಖ್ಯದ್ವಾರದಲ್ಲಿ ಬಲೂನ್‍ಗಳನ್ನು ಶೃಂಗರಿಸಿದ್ದು ಬಾಲ ಪುಟಾಣಿ ಕುಣಿದಾಡುತ್ತಾ ಒಳಗಡೆ ಆಗಮಿಸುತ್ತಿದ್ದಂತೆ ಪುಟಾಣಿಗಳ ಕಲರವ ಕೇಳಿಬಂತು. ಮಕ್ಕಳಿಗೆ ಶಿಕ್ಷರಿಂದ ಪುಷ್ಭ ಸಿಂಚನಗರೆಯಲಾಯಿತು.

    ಎರಡು ಶಾಲಾ ಮುಖ್ಯ ಶಿಕ್ಷಕರಾದ ಮಂಜುನಾಥ್ ಕೆ.ಎಸ್. ಫ್ರೌಢ ವಿಭಾಗದ ಮುಖ್ಯ ಶಿಕ್ಷಕ ನಿರಂಜನ್ ನಾಯಕ್, ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಜಯರಾಮ್ ಶೆಟ್ಟಿ, ನಾಗರಾಜ್, ಗೀತಾನಂದ ಟ್ರಸ್ಟ್‌ನ ವೈಷ್ಣವಿ ರಕ್ಷಿತ್ ಕುಂದರ್, ಇದರ ಸಮಾಜಕಾರ್ಯವಿಭಾಗದ ರವಿಕಿರಣ್ ಕೋಟ, ಶಾಲಾ ಸಹ ಶಿಕ್ಷಕರಾದ ರಾಮದಾಸ ನಾಯಕ್, ಶ್ರೀಧರ ಶಾಸ್ತ್ರಿ , ನಾಗರತ್ನ ,ವಿದ್ಯಾರ್ಥಿಗಳ ಪೋಷಕರು ಮತ್ತಿತರರು ಇದ್ದರು.

    ಸಮವಸ್ತ್ರ, ಬುಕ್ ವಿತರಣೆ
    ಸರಕಾರಿದಿಂದ ನೀಡಿದ ಟೆಸ್ಟ್ ಬುಕ್ ಹಾಗೂ ಸಮವಸ್ತ್ರವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಮಕ್ಕಳಿಗೆ ವಿತರಿಸಿದರು.

    ಪೋಷಕರಿಗೆಹಿತ ನುಡಿ
    ಶಾಲಾ ಮಹಾಪೋಷಕ ಆನಂದ್ ಸಿ ಕುಂದರ್ ವಿದ್ಯಾರ್ಥಿಗಳ ಪೋಷಕರಿಗೆ ಹಿತನುಡಿಗಳನ್ನಾಡಿ ಶಾಲಾ ಜೀವನದಲ್ಲಿ ವಿದ್ಯಾರ್ಥಿಗಳ ಮೇಲೆಹೆಚ್ಚಿನ ಮುತುವರ್ಜಿ ವಹಿಸಿ ಶಾಲೆಗೆ ತೆರಳಿದ್ದಾರೆ ಎಂಬ ನಿರ್ಲಕ್ಷ್ಯ ಮಾಡದಿರಿ ಮಕ್ಕಳಿಗೆ ಅತಿಯಾಗಿ ಮೊಬೈಲ್ ನೀಡಬೇಡಿ ಅವರ ಚಲನವಲನ ವೀಕ್ಷಿಸಿ, ಅವರ ಬಗ್ಗೆ ಅತಿಯಾದ ವಾತ್ಸಲ್ಯದ ಜತೆಗೆ ಭೀತಿಯುಕ್ತ ವಾತಾವರಣ ನಿರ್ಮಿಸಿಕೊಳ್ಳಿ, ಸಂಸ್ಕಾರ, ಸಂಪ್ರದಾಯಯುಕ್ತ ಜೀವದ ತಳಹದಿ ನೀಡಿ ಎಂದು ಪೋಷಕರಿಗೆ ಕಿವಿಮಾತು ಹೇಳಿದರು. ಶಾಲಾ ಎಸ್ ಡಿ ಎಂಸಿ ಸದಸ್ಯರು ಉಪಸ್ಥಿತರಿದ್ದರು.

  • ಕೋಟ :ಪಚ್ಚಿಲೇ ಕೃಷಿಯಲ್ಲೆ ಸ್ವಾವಲಂಬಿ ಬದುಕು – ಆನಂದ್ ಸಿ ಕುಂದರ್

    ಕೋಟ :ಪಚ್ಚಿಲೇ ಕೃಷಿಯಲ್ಲೆ ಸ್ವಾವಲಂಬಿ ಬದುಕು – ಆನಂದ್ ಸಿ ಕುಂದರ್

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಗ್ರಾಮೀಣ ಕರಾವಳಿ ಭಾಗದಲ್ಲಿ ಪಚ್ಚಿಲೇ ಕೃಷಿಯ ಮೂಲಕ ಸ್ವಾವಲಂಬಿ ಬದುಕು ಸಾಧ್ಯವಿದೆ ಎಂದು ಕೋಟದ ಮತ್ಸ್ಯೋದ್ಯಮಿ ಆನಂದ್ ಸಿ ಕುಂದರ್ ಹೇಳಿದರು.

    ಶುಕ್ರವಾರ ಕೋಡಿ ಕನ್ಯಾಣದ ಪರಿಸರದಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆ,ಕೃಷಿ ಇಲಾಖೆ, ಮೀನುಗಾರಿಕಾ ಇಲಾಖೆ, ಮೀನುಗಾರಿಕಾ ಕಾಲೇಜು ಮಂಗಳೂರು, ಸ್ಕೊಡ್‍ವೆಸ್ ಸಂಸ್ಥೆ, ಆಯುಷ್ಮಾನ್‍ಭವ ಸಂಸ್ಥೆ, ಉಡುಪಿ ಕಿನಾರ ಮೀನುಗಾರ ಉತ್ಪಾದಕ ಕಂಪನಿ, ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ಜಂಟಿ ಆಶ್ರಯದಲ್ಲಿ ಪಚ್ಚಿಲೇ ಮೇಳ 2024 ಅನ್ನು
    ಉದ್ಘಾಟಿಸಿ ಮಾತನಾಡಿ ಪಚ್ಚಿಲೇ ಕೃಷಿ ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಭಾಷ್ಯ ಬರೆಯಲು ಸಿದ್ಧಗೊಳ್ಳುತ್ತಿದೆ.

    ಪುರುಷ ಮಹಿಳೆಯರು ಸರಿಸಮಾನವಾಗಿ ಈ ಸ್ವಉದ್ಯೋಗದಲ್ಲಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ.
    ಪಚ್ಚಿಲೇ ಕೃಷಿ ರಾಜ್ಯಾದ್ಯಂತ ಪ್ರಸಿದ್ಧಿಗೊಳ್ಳುತ್ತಿದೆ.ಆಧುನಿಕತೆಗೆ ತಕ್ಕಂತೆ ಮೀನುಗಾರಿಕಾ ಕ್ಷೇತ್ರ ಬದಲಾವಣೆ ಅಗತ್ಯವಾಗಿದೆ ಎಂದರಲ್ಲದೆ ಇತ್ತೀಚಿಗಿನ ದಿನಗಳಲ್ಲಿ ಮೀನುಗಾರಿಕಾ ಉತ್ಪನ್ನಗಳು ವಿಶೇಷವಾಗಿ ಗಮನ ಸೆಳೆಯುತ್ತಿದೆ. ಮತ್ಸಮೇಳಗಳ ಮೂಲಕ ಯುವ ಆಸಕ್ತ ಮನಸ್ಸುಗಳನ್ನು ಈ ಉದ್ಯಮದಲ್ಲಿ ತೊಡಗಿಕೊಳ್ಳುವಂತೆ ಮಾಡುತ್ತಿರುವುದು ಶ್ಲಾಘನೀಯ ಎಂದರು.

    ಮೇಳದಲ್ಲಿ ಕಂಡಬಂದ ಪರಿಸರಸ್ನೇಹಿ ಚೀಲ ಪ್ರಶಂಸೆ
    ಈ ಮತ್ಸಮೇಳದಲ್ಲಿ ವಿಶೇಷವಾಗಿ ಮೆಕ್ಕೆಜೋಳದ ಪರಿಸರಸ್ನೇಹಿ ಕೈಚೀಲ ವಿಶೇಷವಾಗಿ ನೆರದಿದ್ದವರನ್ನು ಆಕರ್ಷಿಸಿತು. ಆನಂದ್ ಸಿ ಕುಂದರ್ ಇದರ ಹೆಚ್ಚು ಹೆಚ್ಚು ಬಳಕೆಗೆ ಕರೆಕೊಟ್ಟರಲ್ಲದೆ ಪ್ರಸ್ತುತ ಸಮುದ್ರ ಸೇರುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಮೀನು ಸಂತತಿಗೆ ಹಾನಿಯಾಗುತ್ತಿರುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದರು.

    ಮತ್ಸಮೇಳದಲ್ಲಿ ಮಳಿಗೆಯನ್ನು ಉಡುಪಿ ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮತ್ಸ್ಯ ಮೇಳಗಳಿಂದ ಮೀನುಗಾರಿಕಾ ಕ್ಷೇತ್ರ ಲಾಭದಾಯಕಗೊಳ್ಳುತ್ತಿರುವುದು ಸೇರಿದಂತೆ ಸರಕಾರದ ಯೋಜನೆಗಳ ಅನುಷ್ಠಾನದ ಕುರಿತು ಮಾಹಿತಿ ನೀಡಿದರು.

    ಕಾರ್ಯಕ್ರಮದಲ್ಲಿ ಮೀನುಗಾರಿಕಾ ಮಹಾವಿದ್ಯಾಲಯ, ಮಂಗಳೂರು ಇದರ ಡೀನ್ ಡಾ. ಎಚ್. ಎನ್. ಆಂಜನೇಯಪ್ಪ, ಜಿಲ್ಲಾ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್‍ರಾಜ್, ಉಪನಿರ್ದೇಶಕ ಡಾ.ರಾಜೇಶ್, ಮೀನುಗಾರಿಕೆ ಇಲಾಖೆ, ಉಡುಪಿ ಜಿಲ್ಲೆ ಜಂಟಿ ನಿರ್ದೇಶಕ ವಿವೇಕ್ ಆರ್, ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಂಕಿತ ಅಧಿಕಾರಿ ಡಾ. ಪ್ರವೀಣ್ ಸಿ ಎಚ್, ಉಡುಪಿ ಲೀಡ್ ಬ್ಯಾಂಕ್ ಮ್ಯಾನೇಜರ್, ಹರೀಶ್ ಜಿ.,ಮತ್ಸ್ಯೋದ್ಯಮಿ ಶಂಕರ್ ಕುಂದರ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಕುಮಾರ್ ಶೆಟ್ಟಿ, ಕೋಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಜಿಲ್ಲಾ ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಎ ಅಶೋಕ್ ಕುಮಾರ್ ಕೊಡ್ಗಿ, ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ಅಧ್ಯಕ್ಷ ಲೋಹಿತ್ ಖಾರ್ವಿ, ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ಅಧ್ಯಕ್ಷೆ ಬೇಬಿ ಮೆಂಡನ್ ಉಪಸ್ಥಿತರಿದ್ದರು.

    ಸಂಪನ್ಮೂಲ ವ್ಯಕ್ತಿಗಳಾಗಿ ಮೀನು ಸಂಸ್ಕರಣಾ ತಂತ್ರಜ್ಞಾನ ಇಲಾಖೆ ಮಂಗಳೂರು ಇದರ ಪ್ರಾಧ್ಯಾಪಕ ಡಾ.ಬಿ.ಮಂಜು ನಾಯ್ಕ್ ಭಾಗವಹಿಸಿದರು. ಕಾರ್ಯಕ್ರಮವನ್ನು ಸ್ಕೊಡ್‍ವೆಸ್ ಸಂಸ್ಥೆಯ ಸಂಯೋಜಕ ಗಂಗಾಧರ್ ಪ್ರಾಸ್ತಾವನೆ ಸಲ್ಲಿಸಿ ನಿರೂಪಿಸಿದರು. ಉಡುಪಿಕಿನಾರ ಮೀನುಗಾರರ ಉತ್ಪಾದಕ ಕಂಪನಿ ನಿರ್ದೇಶಕ ಸುದೀನ ಕೋಡಿ ವಂದಿಸಿದರು.

  • ಹಂಗಾರಕಟ್ಟೆ ಸರಕಾರಿ ಹಿ.ಪ್ರಾ.ಶಾಲೆ ಪ್ರಾರಂಭೋತ್ಸವ

    ಹಂಗಾರಕಟ್ಟೆ ಸರಕಾರಿ ಹಿ.ಪ್ರಾ.ಶಾಲೆ ಪ್ರಾರಂಭೋತ್ಸವ

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಸರಕಾರಿ ಹಿ.ಪ್ರಾ.ಶಾಲೆ(ದೂಳಂಗಡಿಶಾಲೆ) ಹಂಗಾರಕಟ್ಟೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಅಚರಿಸಲಾಯಿತು.

    ಪ್ರಾರಂಭೋತ್ಸವದ ಅಂಗವಾಗಿ ಶಾಲೆಯನ್ನು ತಳಿರುತೋರಣದಿಂದ ಶೃಂಗರಿಸಲಾಯಿತು.
    ಶಾಲಾ ಅವರಣದಲ್ಲಿ ಮೆರವಣಿಗೆಯಯಲ್ಲಿ ಅಗಮಿಸಿದ
    ಮಕ್ಕಳನ್ನು ಆರತಿ ಮೂಲಕ ಸ್ವಾಗತಿಸಲಾಯಿತು.
    ನಂತರ ನಡೆದ ಪ್ರಾರಂಬೋತ್ಸವ ಸಮಾರಂಭದಲ್ಲಿ ವಿದ್ಯಾಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾಯಕ್ರಮ ನಡೆಯಿತು.

    ಸಮಾರಂಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಆಧ್ಯಕ್ಷೆ ರೇಖಾ ಉಡುಪ, ನಿವೃತ್ತ ಮುಖ್ಯ ಶಿಕ್ಷಕಿ ಸೇಸು ಮಕ್ಕಳಿಗೆ ಪುಸ್ತಕ ವಿತರಿಸಿದರು.

    ಮುಖ್ಯ ಶಿಕ್ಷಕಿ ಪ್ರೆಸಿಲ್ಲಾ ಮೆಟಿಲ್ಡಾ ನೊರೊನಾ ಸ್ವಾಗತಿಸಿದರು. ಶಿಕ್ಷಕಿ ವೀಣಾ ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆಯ ವಾಷಿಕ ಕ್ರೀಯಾ ಯೋಜನೆಗಳ ಬಗ್ಗೆ ಮಾತನಾಡಿದರು.

    ಗೌರವ ಶಿಕ್ಷಕಿ ಯಶೋದಾ ವಂದಿಸಿದರು. ಕಾಯಕ್ರಮದಲ್ಲಿ ಶಿಕ್ಷಕಿಯರಾದ ಲವೀನಾ, ರಮ್ಯಾ ಶಾಲಾಭಿವೃದ್ಧಿ ಸಮಿತಿಯ
    ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

  • ಕುಂದಾಪುರ :ಸರ್ಕಾರಿ ಪ್ರೌಢ ಶಾಲೆ ಕಾಳಾವರ – ಪ್ರಾರಂಭೋತ್ಸವ ಹಾಗೂ ಪಠ್ಯ ಪುಸ್ತಕ ವಿತರಣೆ

    ಕುಂದಾಪುರ :ಸರ್ಕಾರಿ ಪ್ರೌಢ ಶಾಲೆ ಕಾಳಾವರ – ಪ್ರಾರಂಭೋತ್ಸವ ಹಾಗೂ ಪಠ್ಯ ಪುಸ್ತಕ ವಿತರಣೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಸರ್ಕಾರಿ ಪ್ರೌಢ ಶಾಲೆ ಕಾಳಾವರ ಇಲ್ಲಿನ ಶಾಲಾ ಪ್ರಾರಂಭೋತ್ಸವಕ್ಕೆ ಶಿಕ್ಷಕ ವೃಂದದವರು ಸಾಕಷ್ಟು ತಯಾರಿ ನಡೆಸಿದ್ದರು. ತೋರಣ ಕಟ್ಟಿ, ಹೂವಿನೊಂದಿಗೆ ಶಾಲೆಯನ್ನು ಶೃಂಗರಿಸಿದ್ದರು. 8ನೆಯ ತರಗತಿಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ವಿಶೇಷ ಮೆರವಣಿಗೆಯಲ್ಲಿ ಶಾಲೆಗೆ ಬರಮಾಡಿಕೊಂಡು ಪುಷ್ಪ ವೃಷ್ಟಿಯೊಂದಿಗೆ ಸ್ವಾಗತಿಸಲಾಯಿತು.

    ನಂತರ ನಡೆದ ಸರಳ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ರಮೇಶ್ ಆಚಾರ್ಯ ವಹಿಸಿದ್ದರು , ಮುಖ್ಯ ಅತಿಥಿಗಳಾಗಿ ಸದಸ್ಯಸತೀಶ್ ಜೋಗಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿದರು. ಮುಖ್ಯೋಪಾಧ್ಯಾಯಿನಿ ಗಾಯತ್ರಿ ಅಡಿಗ ಸರ್ವರನ್ನು ಸ್ವಾಗತಿಸಿ , ವಿದ್ಯಾರ್ಥಿಗಳಿಗೆ ಶೈಕ್ಷಣಿಕ ತಯಾರಿಯ ಕುರಿತು ಮಾಹಿತಿ ನೀಡಿದರು. ಶಿಕ್ಷಕ ಗಣೇಶ್ ಶೆಟ್ಟಿಗಾರ್ ವಂದಿಸಿದರು, ರವಿರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.