Category: ಸುದ್ದಿ

  • ವಿಧಾನಪರಿಷತ್ ಚುನಾವಣೆ : ಜೂನ್ 1 ರಿಂದ 3ರ ವರೆಗೆ ಮದ್ಯ ಮಾರಾಟ ನಿಷೇಧ

    ವಿಧಾನಪರಿಷತ್ ಚುನಾವಣೆ : ಜೂನ್ 1 ರಿಂದ 3ರ ವರೆಗೆ ಮದ್ಯ ಮಾರಾಟ ನಿಷೇಧ

    ಕುಂದಾಪುರ ಮಿರರ್ ಸುದ್ದಿ…

    ಉಡುಪಿ : ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135 (ಸಿ) ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಾದ್ಯಂತ ಜೂನ್ 1 ರಂದು ಸಂಜೆ 5 ಗಂಟೆಯಿಂದ ಜೂನ್ 3 ರ ಮಧ್ಯರಾತ್ರಿ 12 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಲರಿ, ಸ್ಟಾರ್ ಹೋಟೆಲ್‌ಗಳಲ್ಲಿ, ಶೇಂದಿ ಅಂಗಡಿ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

  • ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಹೆಬ್ಬಾರ್ ರಾಜ್ಯಕ್ಕೆ ದ್ವಿತೀಯ, ಜಿಲ್ಲೆಗೆ ಪ್ರಥಮ

    ಕುಂದಾಪುರ :ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಹೆಬ್ಬಾರ್ ರಾಜ್ಯಕ್ಕೆ ದ್ವಿತೀಯ, ಜಿಲ್ಲೆಗೆ ಪ್ರಥಮ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ : ದ್ವಿತೀಯ ಪಿಯುಸಿ 2 ನೇ ಹಂತದ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಹೆಬ್ಬಾರ್ ವಿಜ್ಞಾನ ವಿಭಾಗದಲ್ಲಿ 597
    ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು, ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಅಗ್ರ ಗಣ್ಯ ಸಾಧನೆ ಮೆರೆದಿದ್ದಾಳೆ.

    ವಿದ್ಯಾರ್ಥಿನಿಯ ಅಪೂರ್ವ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

  • ಬೈಂದೂರು :ಶಾಲೆಯಲ್ಲಿ ಅವಮಾನ ಸಹಿಸದೇ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಸಾರ್ವಜನಿಕರಿಂದ ನ್ಯಾಯಕ್ಕಾಗಿ ಆಗ್ರಹ

    ಬೈಂದೂರು :ಶಾಲೆಯಲ್ಲಿ ಅವಮಾನ ಸಹಿಸದೇ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ : ಸಾರ್ವಜನಿಕರಿಂದ ನ್ಯಾಯಕ್ಕಾಗಿ ಆಗ್ರಹ

    ಕುಂದಾಪುರ ಮಿರರ್ ಸುದ್ದಿ…

    ಬೈಂದೂರು: ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ ಕಾರಣಕ್ಕೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಪ್ರೇರಣೆ ನೀಡಿದವರನ್ನು ಬಂಧಿಸಬೇಕು ಮತ್ತು ಸೂಕ್ತ ತನಿಖೆ ನಡೆಸಿ ನ್ಯಾಯ ನೀಡಬೇಕೆಂದು ಆಗ್ರಹಿಸಿ ಮಂಗಳವಾರ ಸಾರ್ವಜನಿಕರು ಮತ್ತು ಕುಟುಂಬಸ್ಥರು ಬೈಂದೂರು ಆರಕ್ಷಕ ಠಾಣೆ ಮುಂದೆ ಆಗ್ರಹಿಸಿದ್ದಾರೆ.

    ತಪ್ಪಿತಸ್ಥರನ್ನು ಬಂಧಿಸಬೇಕು ಮತ್ತು ಸಂತ್ರಸ್ಥ ವಿದ್ಯಾರ್ಥಿಗೆ ನ್ಯಾಯ ದೊರಕುವವರೆಗೂ ಶವ ಸಂಸ್ಕಾರ ಮಾಡುವುದಿಲ್ಲವೆಂದು ಕುಟುಂಬಸ್ಥರು ನೋವು ವ್ಯಕ್ತ ಪಡಿಸಿದರು. ಬಳಿಕ ಸ್ಥಳಕ್ಕಾಗಮಿಸಿದ ಕುಂದಾಪುರ ಡಿ.ವೈ .ಎಸ್.ಪಿ ಬೆಳ್ಳಿಯಪ್ಪ, ಪ್ರೋಬೇಷನರಿ ಐಪಿಎಸ್ ಡಾ. ಹರ್ಷ ಪ್ರಿಯಂವದಾ ಹಾಗೂ ಬೈಂದೂರು ವೃತ್ತ ನಿರೀಕ್ಷಕ ಸವಿತ್ರ ತೇಜ್‌ ಸಾರ್ವಜನಿಕರ ಜೊತೆ ಮಾತನಾಡಿ, ಈಗಾಗಲೇ ವಿಚಾರದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ವಿದ್ಯಾರ್ಥಿ ಆತ್ಮಹತ್ಯೆಯಾಗಿರುವ ಕಾರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ. ಒಂದು ವಾರದೊಳಗೆ ತನಿಖೆ ನಡೆಸಿ ಸೂಕ್ತ ವರದಿ ನೀಡಲಾಗುವುದು. ತಪ್ಪಿತಸ್ಥರ ಬಗ್ಗೆ ಸ್ಪಷ್ಟತೆ ಸಿಕ್ಕಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

    ಈ ಸಂದರ್ಭ ಊರ ಹಿರಿಯರು, ಸಮಾಜದ ಮುಖಂಡರು, ಸ್ಥಳೀಯರು ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಬಳಿಕ ನುತಿನ್ ಮೃತದೇಹವನ್ನು ಮನೆಗೆ ಕಳುಹಿಸಿಕೊಡಲಾಯಿತು.

  • ಕುಂದಾಪುರ :ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್ನಲ್ಲಿ ಕುಂದಾಪುರದ ಬಿ. ಬಿ. ಹೆಗ್ಡೆ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

    ಕುಂದಾಪುರ :ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್ನಲ್ಲಿ ಕುಂದಾಪುರದ ಬಿ. ಬಿ. ಹೆಗ್ಡೆ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

    ಕುಂದಾಪುರ ಮಿರರ್ ಸುದ್ದಿ…
    ಕುಂದಾಪುರ: ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್ನಲ್ಲಿ ಸಕ್ರಿಯವಾಗಿ ಭಾಗವಹಿಸಿ ಒಟ್ಟು 25 ಬಹುಮಾನಗಳನ್ನು ಪಡೆಯುವ ಮುಖೇನ “ಸಮಗ್ರ ತಂಡ ಪ್ರಶಸ್ತಿ”ಯನ್ನು ಪಡೆದ ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ದೀಪಿಕಾ ಜಿ., ರಶ್ಮಿ ಗಾವಡಿ, ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.

  • ಬ್ರಹ್ಮಾವರ : ಗುಂಡ್ಮಿ ಟೋಲ್ ಶುಲ್ಕ ವಿವಾದ : ಅಧಿಕಾರಿಗಳೊಂದಿಗೆ ಸಭೆ ವಿಫಲ – ಮಂಗಳವಾರ ಮತ್ತೆ ಸಭೆ

    ಬ್ರಹ್ಮಾವರ : ಗುಂಡ್ಮಿ ಟೋಲ್ ಶುಲ್ಕ ವಿವಾದ : ಅಧಿಕಾರಿಗಳೊಂದಿಗೆ ಸಭೆ ವಿಫಲ – ಮಂಗಳವಾರ ಮತ್ತೆ ಸಭೆ

    ಕುಂದಾಪುರ ಮಿರರ್ ಸುದ್ದಿ…
    ಬ್ರಹ್ಮಾವರ :ಸಾಸ್ತಾನ ಟೋಲ್‌ನಲ್ಲಿ ಕೋಟ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಾಹನಗಳಿಗೆ ವಿನಾಯಿತಿ ಮುಂದುವರಿಸುವಂತೆ ಆಗ್ರಹಿಸಿ ತಹಶೀಲ್ದಾರ್‌, ಇನ್ಸ್‌ಪೆಕ್ಟರ್‌ ಮತ್ತು ಟೋಲ್‌ ಅಧಿಕಾರಿಗಳೊಂದಿಗೆ ಸೋಮವಾರ ಬ್ರಹ್ಮಾವರ ತಾಲ್ಲೂಕು ಅಡಳಿಯ ಕಚೇರಿಯಲ್ಲಿ ನಡೆದ ಮಾತುಕತೆ ವಿಫಲಗೊಂಡಿದ್ದು, ಮಂಗಳವಾರ ಮತ್ತೆ ಮಾತುಕತೆ ಮುಂದುವರಿಯಲಿದೆ.

    ಕಳೆದ ಶನಿವಾರ ಹೆದ್ದಾರಿ ಜಾಗೃತಿ ಸಮಿತಿಯ ಪ್ರಮುಖರು ಮತ್ತು ಸ್ಥಳೀಯರು ಸಾಸ್ತಾನ ಟೋಲ್‌ನಲ್ಲಿ ಧಿಡೀರ್‌ ಪ್ರತಿಭಟನೆ ನಡೆಸಿದ ಸಂದರ್ಭ ಬ್ರಹ್ಮಾವರದ ಇನ್ಸ್‌ಪೆಕ್ಟರ್‌ ದಿವಾಕರ್‌ ಪಿ.ಎಂ ಸೋಮವಾರ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ದೊರಕಿಸುವ ಬಗ್ಗೆ ಭರವಸೆ ನೀಡಿದ್ದರು. ಅದರಂತೆ ಸೋಮವಾರ ತಹಶೀಲ್ದಾರ್‌ ಕಚೇರಿಯ ಸಭಾಂಗಣದಲ್ಲಿ ಹೆದ್ದಾರಿ ಜಾಗೃತಿ ಸಮಿತಿಯ ಪ್ರಮುಖರ ಸಭೆ ತಹಶೀಲ್ದಾರ್‌ ಶ್ರೀಕಾಂತ ಎಸ್‌ ಹೆಗಡೆ ಮತ್ತು ಇನ್ಸ್‌ಪೆಕ್ಟರ್‌ ದಿವಾಕರ್‌ ಪಿ.ಎಂ ಅವರ ನೇತೃತ್ವದಲ್ಲಿ ನಡೆಯಿತು.

    ಸಭೆಯಲ್ಲಿ ಸಮಿತಿಯ ಅಧ್ಯಕ್ಷ ಶ್ಯಾಮಸುಂದರ ನಾಯರಿ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಮುಂದಿಟ್ಟು, ಹೋರಾಟದ ಫಲವಾಗಿ 2018ರಿಂದ ಸ್ಥಳೀಯರಿಗೆ ಸಿಗುತ್ತಿದ್ದ ಟೋಲ್‌ ವಿನಾಯಿತಿಯನ್ನು ಮುಂದುವರಿಸುವಂತೆ ಮನವರಿಕೆ ಮಾಡಿದರು. ಇದಕ್ಕೆ ಉತ್ತರಿಸಿದ ಟೋಲ್‌ ಗುತ್ತಿಗೆ ಪಡೆದುಕೊಂಡಿರುವ ಹೈವೇ ಕನ್‌ಸ್ಟ್ರಕ್ಶ್ಯನ್‌ 1 ರ ಅಧಿಕಾರಿ ಪ್ರೀತಂ ಗಂಗೂಲಿ ಭಾರತದಾದ್ಯಂತ ರಾಷ್ಟ್ರೀಯ ಹೆದ್ದಾರಿ ನಿಯಮದಂತೆ ಸ್ಥಳೀಯರು ಟೋಲ್‌ಗಳಲ್ಲಿ ಪಾಸ್‌ನ್ನು ತಿಂಗಳೊಂದಕ್ಕೆ ರೂ.310 ಪಾವತಿಸಿ ಸಾಗಬಹುದು. ಇದು ಹೆದ್ದಾರಿ ಇಲಾಖೆಯ ನಿಯಮವಾಗಿದ್ದರಿಂದ ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದರು.

    ಅಧಿಕಾರಿಗಳಿಂದ ಸಮಂಜಸ ಉತ್ತರ ದೊರಕದ ಕಾರಣ ಮಂಗಳವಾರ ರಾಷ್ಟ್ರೀಯ ಹೆದ್ದಾರಿಯ ಇಂಜಿನಿಯರ್‌ ರೊಂದಿಗೆ ಮಾತುಕತೆ ನಡೆಸಿ ಮತ್ತೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಎಂದು ಸಭೆಯನ್ನು ಮಂಗಳವಾರಕ್ಕೆ ಮುಂದೂಡಲಾಯಿತು.

    ಸಭೆಯಲ್ಲಿ ಬ್ರಹ್ಮಾವರ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಮಧು, ಕೋಟ  ಠಾಣೆಯ ತೇಜಸ್ವಿ, ಸುಧಾ ಪ್ರಭು, ಸಮಿತಿಯ ಪ್ರಮುಖರಾದ ಪ್ರತಾಪ್‌ ಶೆಟ್ಟಿ, ವಿಠಲ ಪೂಜಾರಿ, ಅಲ್ವಿನ್‌ ಅಂದ್ರಾದೆ, ನಾಗರಾಜ ಗಾಣಿಗ, ದಿನೇಶ ಗಾಣಿಗ ಮತ್ತಿತರರು ಇದ್ದರು.

  • ಕೋಟೇಶ್ವರ :ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ

    ಕೋಟೇಶ್ವರ :ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :ಕೋಟೇಶ್ವರ ಗ್ರಾಮ ಪಂಚಾಯತ್ ನ ಅಂಕದಕಟ್ಟೆ (3 ನೇ) ವಾರ್ಡ್ ನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ನಡೆಯಿತು.

    ಕೋಟೇಶ್ವರ ಪಂಚಾಯತ್ ಸದಸ್ಯ ಲೋಕೇಶ್ ಅಂಕದಕಟ್ಟೆ ಅವರ ನೇತೃತ್ವದಲ್ಲಿ ದಾನಿಗಳಾದ ಸಿ. ಎ. ಸತೀಶ್ ದೇವಾಡಿಗ, ವತ್ಸಲಾ ದಯಾನಂದ ಶೆಟ್ಟಿ, ಸುರೇಶ್ ಶೆಟ್ಟಿ ಯುವ ಗಾರ್ಡೇನಿಯ ಅವರ ತುಂಬು ಹೃದಯದ ಸಹಕಾರದೊಂದಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 75 ಶೇಕಡಕ್ಕಿಂತ ಅಧಿಕ ಅಂಕವನ್ನು ಪಡೆದ ಅಂಕದಕಟ್ಟೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಶ್ರಾವ್ಯ ದೇವಾಡಿಗ, ಕಿಶನ್ ದೇವಾಡಿಗ, ತರುಣ್ ಶೇರುಗಾರ್, ಸ್ಪಂದನ ದೇವಾಡಿಗ, ಪಾವನಿ ಶೇರಿಗಾರ್ ಇವರಿಗೆ ಸನ್ಮಾನಿಸಿ ವಿದ್ಯಾರ್ಥಿ ವೇತನ ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರ ತಾಲ್ಲೂಕು ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ. ನಾಗೇಶ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಉನ್ನತ ಶಿಕ್ಷಣದ ಬಗ್ಗೆ ಮಾಹಿತಿ ನೀಡಿ, ಶಿಕ್ಷಣದ ಜೊತೆಜೊತೆಗೆ ಸಮಾಜಕ್ಕಾಗಿ ದುಡಿಯುವ ವ್ಯಕ್ತಿಗಳಾಗಿ ರೂಪುಗೊಳ್ಳಬೇಕೆಂಬ ಸ್ಪೂರ್ತಿದಾಯಕ ಮಾತುಗಳನ್ನಾಡಿ, ದಾನಿಗಳಾದ ವತ್ಸಲಾ ದಯಾನಂದ ಶೆಟ್ಟಿ, ಕೋಟೇಶ್ವರ ಪಂಚಾಯತ್ ಅಧ್ಯಕ್ಷೆ ರಾಗಿಣಿ ದೇವಾಡಿಗ, ವಾರ್ಡ್ ಸದಸ್ಯ ಲೋಕೇಶ್ ಅಂಕದಕಟ್ಟೆ ಅವರೊಂದಿಗೆ ಮಕ್ಕಳನ್ನು ಸನ್ಮಾನಿಸಿ ವಿದ್ಯಾರ್ಥಿ ವೇತನ ವಿತರಿಸಿ ಶುಭಹಾರೈಸಿದರು.

    ಕಾರ್ಯಕ್ರಮದಲ್ಲಿ ಪೋಷಕರು, ಶಿಕ್ಷಣ ಪ್ರೇಮಿಗಳು, ಊರ ನಾಗರಿಕರು ಉಪಸ್ಥಿತರಿದ್ದರು.

  • ಪಂಚವರ್ಣ ಸಂಸ್ಥೆಯ 208 ನೇ ಭಾನುವಾರದ ಅಭಿಯಾನ – ಕೋಟದ ಸೇವಾಸಂಗಮ ಶಿಶುಮಂದಿರ ಸ್ವಚ್ಛತಾ ಕಾರ್ಯಕ್ರಮ

    ಪಂಚವರ್ಣ ಸಂಸ್ಥೆಯ 208 ನೇ ಭಾನುವಾರದ ಅಭಿಯಾನ – ಕೋಟದ ಸೇವಾಸಂಗಮ ಶಿಶುಮಂದಿರ ಸ್ವಚ್ಛತಾ ಕಾರ್ಯಕ್ರಮ

    ಕುಂದಾಪುರ ಮಿರರ್ ‌ಸುದ್ದಿ…

    ಕೋಟ: ಇಲ್ಲಿನ ಕೋಟದ ಸೇವಾಸಂಗಮ ಶಿಶುಮಂದಿರ ಇದರ ಶಾಲಾ ಪೂರ್ವತಯಾರಿಯ ಹಿನ್ನಲೆಯಲ್ಲಿ ಶಿಶುಮಂದಿದ ಸುತ್ತಮುತ್ತಲಿನ ಪ್ರಾಂಗಣ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.

    ಪಂಚವರ್ಣಯುವಕ ಮಂಡಲ ಕೋಟ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ ಸಹಯೋಗದೊಂದಿಗೆ 208ನೇ ಭಾನುವಾರ ಪರಿಸರಸ್ನೇಹಿ ಅಭಿಯಾನದ ಅಂಗವಾಗಿ ಈ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

    ಕೋಟದ ಸೇವಾಸಂಗಮ ಶಿಶುಮಂದಿರದ ವ್ಯವಸ್ಥಾಪಕಿ ಭಾಗ್ಯ ಡಾ. ವಾದಿರಾಜ್ ಚಾಲನೆ ನೀಡಿದರು.

    ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಹಂದಟ್ಟು ಮಹಿಳಾ ಬಳಗದ ಸ್ಥಾಪಕಾಧ್ಯಕ್ಷೆ ಪುಷ್ಭಾ ಕೆ ಹಂದಟ್ಟು , ಪಂಚವರ್ಣದ ಸಂಚಾಲಕ ಅಮೃತ್ ಜೋಗಿ ಮತ್ತಿತರರು ಇದ್ದರು.

  • ಕೋಟ :ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 35ನೇ ಸಾಧಕ ಕೃಷಿಕರಾಗಿ ಪಾರಂಪಳ್ಳಿ ರಮೇಶ್ ಹೇರ್ಳೆ ಸನ್ಮಾನ.

    ಕೋಟ :ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 35ನೇ ಸಾಧಕ ಕೃಷಿಕರಾಗಿ ಪಾರಂಪಳ್ಳಿ ರಮೇಶ್ ಹೇರ್ಳೆ ಸನ್ಮಾನ.

    ರೈತರ ದುಸ್ಥಿತಿಗೆ ಸರಕಾರದ ನಿಯಮಗಳೇ ಕಾರಣ – ಶಿವಮೂರ್ತಿ ಕೆ.

    ಕುಂದಾಪುರ ಮಿರರ್ ಸುದ್ದಿ…
    ಕೋಟ: ರೈತರ ದುಸ್ಥಿತಿಗೆ ಸರಕಾರದ ಅವೈಜ್ಞಾನಿಕ ನಿಯಮಗಳೇ ಕಾರಣವಾಗಿದೆ. ಕಷ್ಟಪಟ್ಟು ಬೆಳೆದ ಬೆಳೆಗೆ ಬೆಲೆ ನಿರ್ಧರಿಸುವುದು ಎಸಿ ರೋಮ್‍ನಲ್ಲಿ ಕುಳಿತವರು ಎಂದು ಕೋಟತಟ್ಟು ಪಡುಕರೆಯ ಹಿರಿಯ ಕೃಷಿಕ ಶಿವಮೂರ್ತಿ ಕೆ ರೈತ ಸಮುದಾಯದ ನೋವನ್ನು ವ್ಯಕ್ತಪಡಿಸಿದರು.

    ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ಗೀತಾನಂದ ಫೌಂಡೇಶನ್ ಮಣೂರು, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ , ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 35ನೇ ಮಾಲಿಕೆ ಕಾರ್ಯಕ್ರಮದಲ್ಲಿ ಪಾರಂಪಳ್ಳಿ ರಮೇಶ್ ಹೇರ್ಳೆ ಇವರನ್ನು ಗೌರವಿಸಿ ಮಾತನಾಡಿ ಕೃಷಿಕರ, ಹೈನುಗಾರರ ಭವಣೆಯನ್ನು ಆಲಿಸುವವರು ಯಾರೂ ಇಲ್ಲದಾಗಿದೆ ಲಾಭದಾಯಕ ಕೃಷಿಯನ್ನಾಗಿಸಲು ಸರಕಾರದ ಮಹತ್ತರವಾದ ಬೆಲೆ, ಪೂರಕವಾದ ವಾತಾವರಣ ಅಗತ್ಯವಾಗಿದೆ. ಪ್ರಸ್ತುತ ವಿದ್ಯಾಮಾನದಲ್ಲಿ ಕೃಷಿಕರಿಗೆ ಉತ್ತೇಜನ ನೀಡುವಂತ ಯೋಜನೆಗಳನ್ನು ಸರಕಾರ ರೂಪಿಸಬೇಕು, ಯುವ ಸಮುದಾಯವನ್ನು ಕೃಷಿ ಚಟುವಟಿಕೆಗಳಿಗೆ ಆಕರ್ಷಿಸಿ ಹೆಚ್ಚು ಹಚ್ಚು ತೋಡಗಿಕೊಳ್ಳುವಂತೆ ಮಾಡಬೇಕು ಎಂದರಲ್ಲದೆ ಹೈನುಗಾರಿಕೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಆದರೆ ಹೊಸ ಹೊಸ ನಿಯಮಗಳನ್ನು ಘೋಷಿಸುತ್ತಿದೆ. ಇದಾಗಬಾರದು ಕೃಷಿ ಅಥವಾ ಹೈನುಗಾರಿಕೆಯನ್ನು ನೈಜವಾಗಿ ಉಳಿಸುವ ಕಾರ್ಯ ಮಾಡಲಿ ಹಾಗೇ ಸರಕಾರ ಮಾಡಬೇಕಾದ ಕಾರ್ಯಕ್ರಮ ಪಂಚವರ್ಣ ಹಾಗೂ ಇತರ ಸಂಸ್ಥೆಗಳು ಹಮ್ಮಿಕೊಂಡು ಪ್ರಶಂಸನೀಯ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಪಾರಂಪಳ್ಳಿ ಪರಿಸರದ ಹಿರಿಯ ಕೃಷಿಕರಾದ ರಮೇಶ್ ಹೇರ್ಳೆ ದಂಪತಿಗಳನ್ನು ಕೃಷಿ ಪರಿಕರ ಗಿಡ ನೀಡಿ ಗೌರವಿಸಲಾಯಿತು.

    ಉಡುಪಿ ಜಿಲ್ಲಾ ಕೃಷಿ ಸಂಘಟನೆಯ ಅಧ್ಯಕ್ಷ ರಾಮಕೃಷ್ಣ ಶರ್ಮ ಕೃಷಿ ಪದ್ದತಿಯ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿದರು.
    ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

    ಮುಖ್ಯ ಅಭ್ಯಾಗತರಾಗಿ ಸಾಲಿಗ್ರಾಮ ಪಟ್ಟಣಪಂಚಾಯತ್ ಸದಸ್ಯೆ ಅನುಸೂಯ ಹೇರ್ಳೆ, ರೈತಧ್ವನಿ ಸಂಘ ಕೋಟ ಅಧ್ಯಕ್ಷ ಜಯರಾಮ್ ಶೆಟ್ಟಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ,ಪಾರಂಪಳ್ಳಿ ಪ್ರಗತಿಪರ ಕೃಷಿಕ ರಘು ಮಧ್ಯಸ್ಥ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಮಾಜಿ ಅಧ್ಯಕ್ಷೆ ಜ್ಞಾನವಿ ಹೇರ್ಳೆ, ವನೀತಾ ಉಪಾಧ್ಯಾ, ಮಹಿಳಾ ವೇದಿಕೆ ಸಾಲಿಗ್ರಾಮ ಇದರ ಭಾರತಿ ಹೇರ್ಳೆ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಸ್ನೇಹಕೂಟ ಮಣೂರು ಅಧ್ಯಕ್ಷೆ ಭಾರತಿ.ವಿ.ಮಯ್ಯ ಉಪಸ್ಥಿತರಿದ್ದರು.

    ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಸನ್ಮಾನಪತ್ರವನ್ನು ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭಾ. ಕೆ. ಹಂದಟ್ಟು ವಾಚಿಸಿದರು. ಕಾರ್ಯಕ್ರಮವನ್ನು ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಪ್ರಾಸ್ತಾವನೆ ಸಲ್ಲಿಸಿ ನಿರೂಪಿಸಿದರು. ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿದರು.

  • ತೆಕ್ಕಟ್ಟೆ :ಧಾರ್ಮಿಕ ಪ್ರವಚನಕ್ಕೂ, ಭಕ್ತಿ ಭಾವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಸಾಮ್ಯತೆ ಇದೆ: ಶ್ರೀ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು

    ತೆಕ್ಕಟ್ಟೆ :ಧಾರ್ಮಿಕ ಪ್ರವಚನಕ್ಕೂ, ಭಕ್ತಿ ಭಾವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಸಾಮ್ಯತೆ ಇದೆ: ಶ್ರೀ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು

    ಕುಂದಾಪುರ ಮಿರರ್ ಸುದ್ದಿ…

    ಕೋಟ: ಯಾತ್ರ ಸ್ಥಳಗಳು ಒಂದೊಕ್ಕೊಂದು ವಿಭಿನ್ನವಾಗಿದೆ. ತೀರ್ಥಕ್ಷೇತ್ರದ ಯಾತ್ರೆಯಿಂದ ಪುರಾಣ ಕಥೆಗಳ ಮೌಲ್ಯವನ್ನು ಅರಿಯುವುದಕ್ಕೆ ಸಾಧ್ಯವಾಗುತ್ತದೆ. ಪ್ರಸ್ತುತ ಕಾಲಘಟ್ಟಕ್ಕೆ ಪೂರಕವಾಗಿ ಪುರಾಣ ಕಥೆಗಳು ಹೆಣೆದಿರುತ್ತದೆ. ಈಗಿನ ವಿದ್ಯಾಮಾನಗಳಿಗೂ ಪುರಾಣಗಳಿಗೂ ಹೆಚ್ಚು ಸಂಬಂಧವಿರುವ ಹಲವು ಕಥೆಗಳು ತೀರ್ಥಕ್ಷೇತ್ರದ ಕಥೆಗಳಿಂದ ಲಭ್ಯವಾಗುತ್ತದೆ. ಯಾತ್ರಾ ದಿನದ ಅನುಭವದ ಸವಿಸ್ತಾರವಿರುವ ಧಾರ್ಮಿಕ ಪ್ರವಚನ ಕಾರ್ಯಕ್ರಮಕ್ಕೂ ಪುರಾಣ ಕಥನದ ಭಕ್ತಿ ಭಾವಗಳನ್ನೊಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮವೂ ಹೆಚ್ಚು ಸಾಮ್ಯತೆ ಇದೆ ಎಂದು ಶ್ರೀ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀ ಪಾದರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಯಶಸ್ವೀ ಕಲಾವೃಂದ ಕೊಮೆ, ತೆಕ್ಕಟ್ಟೆಯ ಸಂಯೋಜನೆಯಲ್ಲಿ ‘ಸಿನ್ಸ್ 1999 ಶ್ವೇತಯಾನ’ದ 28ನೇಯ ಕಾರ್ಯಕ್ರಮವಾಗಿ ಮೇ 16ರಂದು ಕುಂದಾಪುರ ಹಂಗಳೂರು ಶ್ರೀ ರಾಮಚಂದ್ರ ವರ್ಣರ ಮನೆಯಲ್ಲಿ ವಿಶ್ವವಲ್ಲಭ ತೀರ್ಥ ಶ್ರೀ ಪಾದರ ಪ್ರವಚನ ಹಾಗೂ ಯಶಸ್ವೀ ಕಲಾವೃಂದದ ಯಕ್ಷಗಾನವೈಭವ ಕಾರ್ಯಕ್ರಮದಲ್ಲಿ ಶ್ರೀ ಸ್ವಾಮೀಜಿ ಮಾತನ್ನಾಡಿದರು.

    ಉದ್ಯಮಿ ರಾಮಚಂದ್ರ ವರ್ಣ, ಗುರುಗಳಾದ ಲಂಬೋದರ ಹೆಗಡೆ, ರಾಘವೇಂದ್ರ ಹೆಗಡೆ ಯಲ್ಲಾಪುರ, ಸುದೀಪ ಉರಾಳ, ದರ್ಶನ್ ಗೌಡ, ಪಂಚಮಿ ವೈದ್ಯ, ಕಿಶನ್ ಕುಂದಾಪುರ, ಕಾರ್ಯದರ್ಶಿ ವೆಂಕಟೇಶ ವೈದ್ಯ ಉಪಸ್ಥಿತರಿದ್ದರು.

  • ಹೆಮ್ಮಾಡಿ :CSEET ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧೀರಜ್ ಆಯ್ಕೆ

    ಹೆಮ್ಮಾಡಿ :CSEET ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧೀರಜ್ ಆಯ್ಕೆ

    ಕುಂದಾಪುರ ಮಿರರ್ ಸುದ್ದಿ…

    ಕುಂದಾಪುರ :Institute of Company Secretary of Indiaರವರು ಮೇ 4, 2024 ರಂದು ನಡೆಸಿದ ಅತ್ಯಂತ ಕಠಿಣಕರವಾದ CSEET ಅರ್ಹತಾ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧೀರಜ್ 119 /200 ಅಂಕಗಳನ್ನು ಪಡೆದು ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾನೆ.

    ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಜನತಾ ಪದವಿಪೂರ್ವ ಕಾಲೇಜಿನ
    ವಿದ್ಯಾರ್ಥಿ ಧೀರಜ್ ಪಿಯುಸಿ ಯಲ್ಲಿಯೇ ಮೊದಲ ಹಂತದಲ್ಲೇ ತೇರ್ಗಡೆ ಹೊಂದಿರುವುದು ವಿಶೇಷವಾಗಿದೆ.

    ಪ್ರತಿಭಾವಂತ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.